ಸುರೇಂದ್ರ ರೆಡ್ಡಿ ನಿರ್ದೇಶನದ ಈ ಸಿನಿಮಾ ಮೇಕಿಂಗ್ನಿಂದಲೇ ಹೊಸ ಸಂಚಲನ ಸೃಷ್ಟಿಸಿದೆ. ತೆಲುಗು, ಹಿಂದಿ, ಕನ್ನಡ, ಮಲಯಾಳ ಮತ್ತು ತಮಿಳಿನಲ್ಲಿ ನಿರ್ಮಾಣವಾಗುತ್ತಿದೆ. ಏಕಕಾಲಕ್ಕೆ ಈ ಐದು ಭಾಷೆಯಲ್ಲೂ ಟ್ರೇಲರ್ ಬಿಡುಗಡೆಯಾಗಿದೆ. ₹ 270 ಕೋಟಿ ವೆಚ್ಚದ ಈ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್, ಸುದೀಪ್, ವಿಜಯ್ ಸೇತುಪತಿ, ತಮನ್ನಾ ಭಾಟಿಯಾ, ಜಗಪತಿಬಾಬು, ನಯನ ತಾರಾ ಸೇರಿದಂತೆ ದೊಡ್ಡ ತಾರಾಬಳಗವೇ ಇದೆ. ಕನ್ನಡದಲ್ಲಿಯೂ ಟ್ರೇಲರ್ ಬಿಡುಗಡೆಯಾಗಿದೆ. ‘ನರಸಿಂಹ ರೆಡ್ಡಿ ಸಾಮಾನ್ಯನಲ್ಲ. ಅವನು ಇತಿಹಾಸವನ್ನು ಸೃಷ್ಟಿಸಲು ಹೊರಟವನು. ಅವನೊಬ್ಬ ಯೋಗಿ. ಅವನೊಬ್ಬ ಯೋಧ. ಅವನನ್ನು ಯಾರೂ ತಡೆಯಲು ಸಾಧ್ಯವಿಲ್ಲ...’ ಎಂಬ ಹಿನ್ನೆಲೆಯ ಡೈಲಾಗ್ನೊಂದಿಗೆ ಟ್ರೇಲರ್ ಆರಂಭವಾಗುತ್ತದೆ.