ವಿಜಯ್ ಮತ್ತು ನಾಯಕಿ ಸಂಜನಾ ಆನಂದ್ ನಡುವಿನ ಈ ಪ್ರಣಯ ಗೀತೆ ಇದಾಗಿದೆ. ಎಡಬಿಡದೇ ಸುರಿಯುತ್ತಿದ್ದ ಮಳೆ, ಚಳಿಯನ್ನು ಲೆಕ್ಕಿಸದೆ ಶೂಟಿಂಗ್ ಮಾಡಲಾಗಿದೆ. ಛಾಯಾಗ್ರಾಹಕ ಶಿವಸೇನ ಕೆಲವು ದೃಶ್ಯಗಳನ್ನು ಮಳೆಯಲ್ಲಿಯೇ ಚಿತ್ರೀಕರಿಸಿದ್ದಾರೆ. ಜಡಿಮಳೆಯ ಒಂದು ಶಾಟ್ಗಾಗಿ ನಾಲ್ಕೈದು ಗಂಟೆಗಳ ಕಾಲ ಕಾಯಬೇಕಾಯಿತು ಎಂದು ಚಿತ್ರತಂಡ ಹೇಳಿದೆ.