ಹೊಂಬಾಳೆ ಫಿಲ್ಮ್ಸ್ ನಿರ್ಮಾಣದಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ ತಾಂತ್ರಿಕವಾಗಿ ‘ಕೆಜಿಎಫ್’ ತಂಡವೇ ಇದೆ. ರವಿ ಬಸ್ರೂರು ಸಂಗೀತ, ಭುವನ್ ಗೌಡ ಛಾಯಾಗ್ರಹಣ ಚಿತ್ರಕ್ಕಿದೆ.
ಈ ಚಿತ್ರಕ್ಕೆ ಸೆನ್ಸಾರ್ ಬೋರ್ಡ್ ‘A’ (ವಯಸ್ಕರಿಗೆ ಮಾತ್ರ) ಪ್ರಮಾಣ ಪತ್ರ ನೀಡಿದೆ.
ಖಾನ್ಸಾರ್ ಎಂಬ ಕಾಲ್ಪನಿಕ ಪ್ರದೇಶದ ಕಥೆ ಹಿಂಸಾತ್ಮಕವಾಗಿ ಕೂಡಿದ್ದರೂ ಇಲ್ಲಿ ದೇವ ಮತ್ತು ವರದ ಎಂಬ ಇಬ್ಬರು ಸ್ನೇಹಿತರ ನಡುವಿನ ಕಥೆಯನ್ನು ಎತ್ತಿ ತೋರಿಸಲಾಗಿದೆ.
ದೇವ ಪಾತ್ರದಲ್ಲಿ ಪ್ರಭಾಸ್ ಕಾಣಿಸಿಕೊಂಡಿದ್ದರೆ, ವರದ ಪಾತ್ರದಲ್ಲಿ ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ನಟಿಸಿದ್ದಾರೆ. ಶ್ರುತಿ ಹಾಸನ್, ಜಗಪತಿ ಬಾಬು, ಈಶ್ವರಿ ರಾವ್ ಹಾಗೂ ಶ್ರೀಯಾ ರೆಡ್ಡಿ ತಾರಾಗಣದಲ್ಲಿದ್ದಾರೆ.