ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್.ಎ. ಚಿನ್ನೇಗೌಡ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಚಿತ್ರ ಸಾಹಿತಿ ಕೆ. ಕಲ್ಯಾಣ್ ತಂಡಕ್ಕೆ ಶುಭ ಕೋರಿದರು. ಇದೇ ವೇಳೆ ಚಿತ್ರದ ಆಡಿಯೊ ಬಿಡುಗಡೆ ಮಾಡಲಾಯಿತು. ನಾಯಕ ಸಿದ್ಧಾರ್ಥ, ನಾಯಕಿಯರಾದ ಪಲ್ಲವಿರಾಜು, ದಿಶಾ ಪೂವಯ್ಯ ಚುಟುಕಾಗಿ ಮಾತನಾಡಿದರು. ಚಿತ್ರದ ನಾಲ್ಕು ಹಾಡುಗಳಿಗೆ ಸನ್ನಿರಾಜ್ ಸಂಗೀಥ ಸಂಯೋಜಿಸಿದ್ದಾರೆ.