<p>ಲಾಕ್ಡೌನ್ ಆರಂಭವಾದಾಗಿನಿಂದ ಸಿನಿಮಾ ಸೆಲೆಬ್ರಿಟಿಗಳು ಒಂದಲ್ಲ ಒಂದು ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲದೇ ತಾವು ಮಾಡಿರುವ ಕೆಲಸಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಂದ ಶಹಭಾಸ್ ಗಿರಿ ಪಡೆದುಕೊಳ್ಳುತ್ತಿದ್ದಾರೆ.</p>.<p>ಈಗ ಆ ಸಾಲಿಗೆ ನಟ ಸಲ್ಮಾನ್ ಖಾನ್ ಸೇರುತ್ತಾರೆ. ಮುಂಬೈನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣದಿಂದ ಲೋನಾವಾಲದ ಪನ್ವೆಲ್ ಫಾರ್ಮ್ಹೌಸ್ನಲ್ಲಿ ಬೀಡು ಬಿಟ್ಟಿದ್ದಾರೆ ಸಲ್ಮಾನ್. ಜೊತೆಗೆ ಕೃಷಿ ಚಟುವಟಿಕೆಯಲ್ಲೂ ತೊಡಗಿದ್ದಾರೆ. ಆ ಮೂಲಕ ರೈತರ ಕಷ್ಟವನ್ನು ಅರಿಯುವ ಮನಸ್ಸು ಮಾಡಿದ್ದಾರೆ. ಜೊತೆಗೆ ಸಮೀಪದ ಹಳ್ಳಿಗಳಲ್ಲಿ ಸೈಕ್ಲಿಂಗ್ ಮಾಡುವ ಮೂಲಕ ಸಮಯ ಕಳೆಯುತ್ತಿದ್ದಾರೆ.</p>.<p>ಕಳೆದ ಕೆಲ ದಿನಗಳ ಹಿಂದೆ ಗದ್ದೆಯಲ್ಲಿರುವ ನಾಟಿ ಮಾಡುವ ಚಿತ್ರ ಹಂಚಿಕೊಂಡಿರುವ ಸಲ್ಮಾನ್ ಆ ಮೂಲಕ ರೈತರನ್ನು ಸ್ಮರಿಸಿದ್ದರು. ನಿನ್ನೆ (ಮಂಗಳವಾರ) ಮತ್ತೆ ಕೆಸರು ಮಣ್ಣು ಬಳಿದುಕೊಂಡು ಕುಳಿತಿರುವ ಫೋಟೊ ಹಂಚಿಕೊಂಡ ಸಲ್ಮಾನ್ ‘ಎಲ್ಲಾ ರೈತರಿಗೂ ಗೌರವ ನೀಡಿ’ ಎಂದು ಬರೆದುಕೊಂಡಿದ್ದಾರೆ.</p>.<p>ಸಲ್ಮಾನ್ ಸದ್ಯಕ್ಕೆ ರಾಧೆ ಚಿತ್ರದಲ್ಲಿ ನಟಿಸುತ್ತಿದ್ದು ಪ್ರಭುದೇವ ಈ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ. ಚಿತ್ರದಲ್ಲಿ ರಣದೀಪ್ ಹೂಡಾ, ಜಾಕಿ ಶ್ರಾಫ್ ಸೇರಿದಂತೆ ಅನೇಕರು ನಟಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಾಕ್ಡೌನ್ ಆರಂಭವಾದಾಗಿನಿಂದ ಸಿನಿಮಾ ಸೆಲೆಬ್ರಿಟಿಗಳು ಒಂದಲ್ಲ ಒಂದು ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲದೇ ತಾವು ಮಾಡಿರುವ ಕೆಲಸಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಂದ ಶಹಭಾಸ್ ಗಿರಿ ಪಡೆದುಕೊಳ್ಳುತ್ತಿದ್ದಾರೆ.</p>.<p>ಈಗ ಆ ಸಾಲಿಗೆ ನಟ ಸಲ್ಮಾನ್ ಖಾನ್ ಸೇರುತ್ತಾರೆ. ಮುಂಬೈನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣದಿಂದ ಲೋನಾವಾಲದ ಪನ್ವೆಲ್ ಫಾರ್ಮ್ಹೌಸ್ನಲ್ಲಿ ಬೀಡು ಬಿಟ್ಟಿದ್ದಾರೆ ಸಲ್ಮಾನ್. ಜೊತೆಗೆ ಕೃಷಿ ಚಟುವಟಿಕೆಯಲ್ಲೂ ತೊಡಗಿದ್ದಾರೆ. ಆ ಮೂಲಕ ರೈತರ ಕಷ್ಟವನ್ನು ಅರಿಯುವ ಮನಸ್ಸು ಮಾಡಿದ್ದಾರೆ. ಜೊತೆಗೆ ಸಮೀಪದ ಹಳ್ಳಿಗಳಲ್ಲಿ ಸೈಕ್ಲಿಂಗ್ ಮಾಡುವ ಮೂಲಕ ಸಮಯ ಕಳೆಯುತ್ತಿದ್ದಾರೆ.</p>.<p>ಕಳೆದ ಕೆಲ ದಿನಗಳ ಹಿಂದೆ ಗದ್ದೆಯಲ್ಲಿರುವ ನಾಟಿ ಮಾಡುವ ಚಿತ್ರ ಹಂಚಿಕೊಂಡಿರುವ ಸಲ್ಮಾನ್ ಆ ಮೂಲಕ ರೈತರನ್ನು ಸ್ಮರಿಸಿದ್ದರು. ನಿನ್ನೆ (ಮಂಗಳವಾರ) ಮತ್ತೆ ಕೆಸರು ಮಣ್ಣು ಬಳಿದುಕೊಂಡು ಕುಳಿತಿರುವ ಫೋಟೊ ಹಂಚಿಕೊಂಡ ಸಲ್ಮಾನ್ ‘ಎಲ್ಲಾ ರೈತರಿಗೂ ಗೌರವ ನೀಡಿ’ ಎಂದು ಬರೆದುಕೊಂಡಿದ್ದಾರೆ.</p>.<p>ಸಲ್ಮಾನ್ ಸದ್ಯಕ್ಕೆ ರಾಧೆ ಚಿತ್ರದಲ್ಲಿ ನಟಿಸುತ್ತಿದ್ದು ಪ್ರಭುದೇವ ಈ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ. ಚಿತ್ರದಲ್ಲಿ ರಣದೀಪ್ ಹೂಡಾ, ಜಾಕಿ ಶ್ರಾಫ್ ಸೇರಿದಂತೆ ಅನೇಕರು ನಟಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>