<p><strong>ಮುಂಬೈ</strong>: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರು ಶುಕ್ರವಾರ, ಮುಂಬೈ ಪೊಲೀಸ್ ಆಯುಕ್ತ ವಿವೇಕ್ ಫನ್ಸಾಲ್ಕರ್ ಅವರನ್ನು ಭೇಟಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಸಂಜೆ 4 ಗಂಟೆ ಸುಮಾರಿಗೆ ಕ್ರಾಫೊರ್ಡ್ ಮಾರುಕಟ್ಟೆಯ ಎದುರಿರುವ ಮುಂಬೈ ಪೊಲೀಸ್ ಪ್ರಧಾನ ಕಚೇರಿಗೆ ಆಗಮಿಸಿದ್ದ ಅವರು ಮಾತುಕತೆ ನಡೆಸಿದ್ದಾರೆ.</p>.<p>ಜಂಟಿ ಪೊಲೀಸ್ ಆಯುಕ್ತರನ್ನೂ ಭೇಟಿಯಾಗಿರುವ ಸಲ್ಮಾನ್ ಖಾನ್, ಇದೊಂದು ಔಪಚಾರಿಕ ಭೇಟಿಯಷ್ಟೇ ಎಂದು ಹೇಳಿದ್ದಾರೆ.</p>.<p>ಪಂಜಾಬಿ ಗಾಯಕ ಸಿಧು ಮೂಸೆವಾಲಾ ರೀತಿಯೇ ನೀವು ಮತ್ತು ನಿಮ್ಮ ತಂದೆಯನ್ನು ಕೊಲ್ಲುವುದಾಗಿ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಪತ್ರ ಬಂದಿತ್ತು. ಬಳಿಕ ಸಲ್ಲೂ ಕುಟುಂಬಕ್ಕೆ ಭದ್ರತೆ ಹೆಚ್ಚಿಸಲಾಗಿತ್ತು.</p>.<p>ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಇಬ್ಬರು ಶಂಕಿತ ಆರೋಪಿಗಳನ್ನು ಪಂಜಾಬ್ನ ಅಮೃತಸರ ಜಿಲ್ಲೆಯ ಚೀಚಾ ಭಕ್ನಾ ಗ್ರಾಮದಲ್ಲಿ ಇತ್ತೀಚೆಗೆ ಪೊಲೀಸ್ ಎನ್ಕೌಂಟರ್ನಲ್ಲಿ ಹತ್ಯೆಗೈಯಲಾಗಿದೆ.</p>.<p>ಮೃತರನ್ನು ಜಗರೂಪ್ ಸಿಂಗ್ ರೂಪಾ ಹಾಗೂ ಮನ್ಪ್ರೀತ್ ಸಿಂಗ್ ಅಲಿಯಾಸ್ ಮನ್ನು ಕುಸಾ ಎಂದು ಗುರುತಿಸಲಾಗಿದೆ.</p>.<p>ಕಳೆದ ತಿಂಗಳು ಸಲ್ಮಾನ್ ಖಾನ್ ಕುಟುಂಬಕ್ಕೆ ಬೆದರಿಕೆ ಬಂದಿತ್ತು. ಕೃತ್ಯದಲ್ಲಿ ಇದೇ ಗ್ಯಾಂಗ್ನ ಕೈವಾಡವಿರುವ ಶಂಕೆ ವ್ಯಕ್ತವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರು ಶುಕ್ರವಾರ, ಮುಂಬೈ ಪೊಲೀಸ್ ಆಯುಕ್ತ ವಿವೇಕ್ ಫನ್ಸಾಲ್ಕರ್ ಅವರನ್ನು ಭೇಟಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಸಂಜೆ 4 ಗಂಟೆ ಸುಮಾರಿಗೆ ಕ್ರಾಫೊರ್ಡ್ ಮಾರುಕಟ್ಟೆಯ ಎದುರಿರುವ ಮುಂಬೈ ಪೊಲೀಸ್ ಪ್ರಧಾನ ಕಚೇರಿಗೆ ಆಗಮಿಸಿದ್ದ ಅವರು ಮಾತುಕತೆ ನಡೆಸಿದ್ದಾರೆ.</p>.<p>ಜಂಟಿ ಪೊಲೀಸ್ ಆಯುಕ್ತರನ್ನೂ ಭೇಟಿಯಾಗಿರುವ ಸಲ್ಮಾನ್ ಖಾನ್, ಇದೊಂದು ಔಪಚಾರಿಕ ಭೇಟಿಯಷ್ಟೇ ಎಂದು ಹೇಳಿದ್ದಾರೆ.</p>.<p>ಪಂಜಾಬಿ ಗಾಯಕ ಸಿಧು ಮೂಸೆವಾಲಾ ರೀತಿಯೇ ನೀವು ಮತ್ತು ನಿಮ್ಮ ತಂದೆಯನ್ನು ಕೊಲ್ಲುವುದಾಗಿ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಪತ್ರ ಬಂದಿತ್ತು. ಬಳಿಕ ಸಲ್ಲೂ ಕುಟುಂಬಕ್ಕೆ ಭದ್ರತೆ ಹೆಚ್ಚಿಸಲಾಗಿತ್ತು.</p>.<p>ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಇಬ್ಬರು ಶಂಕಿತ ಆರೋಪಿಗಳನ್ನು ಪಂಜಾಬ್ನ ಅಮೃತಸರ ಜಿಲ್ಲೆಯ ಚೀಚಾ ಭಕ್ನಾ ಗ್ರಾಮದಲ್ಲಿ ಇತ್ತೀಚೆಗೆ ಪೊಲೀಸ್ ಎನ್ಕೌಂಟರ್ನಲ್ಲಿ ಹತ್ಯೆಗೈಯಲಾಗಿದೆ.</p>.<p>ಮೃತರನ್ನು ಜಗರೂಪ್ ಸಿಂಗ್ ರೂಪಾ ಹಾಗೂ ಮನ್ಪ್ರೀತ್ ಸಿಂಗ್ ಅಲಿಯಾಸ್ ಮನ್ನು ಕುಸಾ ಎಂದು ಗುರುತಿಸಲಾಗಿದೆ.</p>.<p>ಕಳೆದ ತಿಂಗಳು ಸಲ್ಮಾನ್ ಖಾನ್ ಕುಟುಂಬಕ್ಕೆ ಬೆದರಿಕೆ ಬಂದಿತ್ತು. ಕೃತ್ಯದಲ್ಲಿ ಇದೇ ಗ್ಯಾಂಗ್ನ ಕೈವಾಡವಿರುವ ಶಂಕೆ ವ್ಯಕ್ತವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>