<p><strong>ಬೆಂಗಳೂರು</strong>: ನಟ ಸಲ್ಮಾನ್ ಖಾನ್ ಅವರ ‘ಸಿಕಂದರ್’ ಸಿನಿಮಾಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ₹200 ಕೋಟಿ ಗಳಿಕೆಯನ್ನು ಕಂಡು ಮುನ್ನುಗ್ಗುತ್ತಿದೆ.</p><p>ಇತ್ತ ಸಿಕಂದರ್ ಸಿನಿಮಾದ ಖುಷಿಯಲ್ಲಿರುವ ಸಲ್ಮಾನ್ ಖಾನ್ ಈದ್ ಉಲ್ ಫಿತ್ರ್ ಹಬ್ಬದ ಸಂಪ್ರದಾಯದಂತೆ ತಮ್ಮ ಮುಂಬೈನ ಬಾಂದ್ರಾದ ಗ್ಯಾಲಾಕ್ಸಿ ಮನೆಯಿಂದ ಹೊರಗೆ ಬಂದು ಈ ವರ್ಷವೂ ಅಭಿಮಾನಿಗಳಿಗೆ ಶುಭಾಶಯ ತಿಳಿಸಿದರು.</p><p>ಆದರೆ, ಸಲ್ಮಾನ್ ಶುಭಾಶಯ ಕೋರಿದ್ದು ಈ ಸಾರಿ ವಿಶೇಷವಾಗಿತ್ತು. ಈದ್ ಉಲ್ ಫಿತ್ರ್ ಹಬ್ಬದ ಶುಭಾಶಯವನ್ನು ಸಲ್ಮಾನ್ ಅವರು ಬುಲೆಟ್ ಪ್ರೂಫ್ ಗಾಜಿನ ಬಾಗಿಲೊಳಗೆ ನಿಂತು ಅಭಿಮಾನಿಗಳಿಗೆ ಕೈ ಬೀಸಿ ತಿಳಿಸಿದರು. ಈ ವೇಳೆ ಮನೆಯ ಸುತ್ತ ಭಾರಿ ಭದ್ರತೆಯನ್ನು ಒದಗಿಸಲಾಗಿತ್ತು.</p><p>ಇದರ ವಿಡಿಯೊಗಳು ಸಾಮಾಜಿಕ ತಾಣಗಳಲ್ಲಿ ಹರಿದಾಡಿವೆ. ಸಲ್ಮಾನ್ ಅವರಿಗೆ ಹಲವರಿಂದ ಜೀವ ಬೆದರಿಕೆ ಇರುವುದರಿಂದ ಅವರು ತಮ್ಮ ಭದ್ರತೆಯನ್ನು ಹೆಚ್ಚಿಸಿಕೊಂಡಿದ್ದಾರೆ.</p><p>‘ಗಜಿನಿ‘, ‘ಹಾಲಿಡೇ: ಎ ಸೋಲ್ಜರ್ ಈಸ್ ನೆವರ್ ಆಫ್ ಡ್ಯೂಟಿ‘ ಖ್ಯಾತಿಯ ನಿರ್ದೇಶಕ ಎ.ಆರ್ ಮುರುಗದಾಸ್ ಸಿಕಂದರ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಿತ್ರವು ಸಾಜಿದ್ ನಾದಿಯಾದ್ವಾಲಾ ನಿರ್ಮಾಣದಲ್ಲಿ ಮೂಡಿಬಂದಿದೆ. ಮಾರ್ಚ್ 28ಕ್ಕೆ ಸಿನಿಮಾ ಬಿಡುಗಡೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಟ ಸಲ್ಮಾನ್ ಖಾನ್ ಅವರ ‘ಸಿಕಂದರ್’ ಸಿನಿಮಾಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ₹200 ಕೋಟಿ ಗಳಿಕೆಯನ್ನು ಕಂಡು ಮುನ್ನುಗ್ಗುತ್ತಿದೆ.</p><p>ಇತ್ತ ಸಿಕಂದರ್ ಸಿನಿಮಾದ ಖುಷಿಯಲ್ಲಿರುವ ಸಲ್ಮಾನ್ ಖಾನ್ ಈದ್ ಉಲ್ ಫಿತ್ರ್ ಹಬ್ಬದ ಸಂಪ್ರದಾಯದಂತೆ ತಮ್ಮ ಮುಂಬೈನ ಬಾಂದ್ರಾದ ಗ್ಯಾಲಾಕ್ಸಿ ಮನೆಯಿಂದ ಹೊರಗೆ ಬಂದು ಈ ವರ್ಷವೂ ಅಭಿಮಾನಿಗಳಿಗೆ ಶುಭಾಶಯ ತಿಳಿಸಿದರು.</p><p>ಆದರೆ, ಸಲ್ಮಾನ್ ಶುಭಾಶಯ ಕೋರಿದ್ದು ಈ ಸಾರಿ ವಿಶೇಷವಾಗಿತ್ತು. ಈದ್ ಉಲ್ ಫಿತ್ರ್ ಹಬ್ಬದ ಶುಭಾಶಯವನ್ನು ಸಲ್ಮಾನ್ ಅವರು ಬುಲೆಟ್ ಪ್ರೂಫ್ ಗಾಜಿನ ಬಾಗಿಲೊಳಗೆ ನಿಂತು ಅಭಿಮಾನಿಗಳಿಗೆ ಕೈ ಬೀಸಿ ತಿಳಿಸಿದರು. ಈ ವೇಳೆ ಮನೆಯ ಸುತ್ತ ಭಾರಿ ಭದ್ರತೆಯನ್ನು ಒದಗಿಸಲಾಗಿತ್ತು.</p><p>ಇದರ ವಿಡಿಯೊಗಳು ಸಾಮಾಜಿಕ ತಾಣಗಳಲ್ಲಿ ಹರಿದಾಡಿವೆ. ಸಲ್ಮಾನ್ ಅವರಿಗೆ ಹಲವರಿಂದ ಜೀವ ಬೆದರಿಕೆ ಇರುವುದರಿಂದ ಅವರು ತಮ್ಮ ಭದ್ರತೆಯನ್ನು ಹೆಚ್ಚಿಸಿಕೊಂಡಿದ್ದಾರೆ.</p><p>‘ಗಜಿನಿ‘, ‘ಹಾಲಿಡೇ: ಎ ಸೋಲ್ಜರ್ ಈಸ್ ನೆವರ್ ಆಫ್ ಡ್ಯೂಟಿ‘ ಖ್ಯಾತಿಯ ನಿರ್ದೇಶಕ ಎ.ಆರ್ ಮುರುಗದಾಸ್ ಸಿಕಂದರ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಿತ್ರವು ಸಾಜಿದ್ ನಾದಿಯಾದ್ವಾಲಾ ನಿರ್ಮಾಣದಲ್ಲಿ ಮೂಡಿಬಂದಿದೆ. ಮಾರ್ಚ್ 28ಕ್ಕೆ ಸಿನಿಮಾ ಬಿಡುಗಡೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>