<p><strong>ನವದೆಹಲಿ</strong>: ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಸಂಚು ರೂಪಿಸಿತ್ತು ಎಂದು ಪಂಜಾಬ್ ಡಿಜಿಪಿ ಮಾಹಿತಿ ನೀಡಿದ್ದಾರೆ.</p>.<p>ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಹೊಣೆಯನ್ನು ಇದೇ ಬಿಷ್ಣೋಯಿ ಗ್ಯಾಂಗ್ ಹೊತ್ತುಕೊಂಡಿದೆ.</p>.<p>ಸದ್ಯ ಜೈಲು ಪಾಲಾಗಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಸೂಚನೆ ಮೇರೆಗೆ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಭಾನುವಾರ ಹೇಳಿದ್ದಾರೆ.</p>.<p>ಮೂಸೆವಾಲಾ ಕೊಲೆ ಆರೋಪಿ ಕಪಿಲ್ ಪಂಡಿತ್ನ ಪ್ರಾಥಮಿಕ ತನಿಖೆಯಲ್ಲಿ ಈ ಸ್ಟೋಟಕ ಮಾಹಿತಿ ಬಹಿರಂಗಗೊಂಡಿದೆ. ಸಲ್ಮಾನ್ ಖಾನ್ ಹತ್ಯೆ ನಡೆಸಲು ಬಿಷ್ಣೋಯಿ ಗ್ಯಾಂಗ್ ನನ್ನನ್ನು ಸಂಪರ್ಕಿಸಿತ್ತು ಎಂದು ಕಪಿಲ್ ಪಂಡಿತ್ ಹೇಳಿಕೆ ನೀಡಿದ್ದಾನೆ ಎಂದು ಡಿಜಿಪಿ ತಿಳಿಸಿದ್ದಾರೆ.</p>.<p>ಮೇ 29 ರಂದು ಪಂಜಾಬ್ನ ಮಾನ್ಸಾ ಜಿಲ್ಲೆಯಲ್ಲಿ ಮೂಸೆವಾಲಾ ಕೊಲೆಯಾದ ಕೆಲವು ದಿನಗಳ ನಂತರ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಬಂದಿತ್ತು.</p>.<p>ಬಿಷ್ಣೋಯಿಗಳಿಗೆ ಕೃಷ್ಣ ಮೃಗ ಅತ್ಯಂತ ಪ್ರಿಯ ಮತ್ತು ಪವಿತ್ರವಾಗಿದ್ದು, ಅದನ್ನು ಹತ್ಯೆ ಮಾಡಿರುವ ಸಲ್ಮಾನ್ ಖಾನ್ ಮೇಲೆ ಸೇಡು ತೀರಿಸಿಕೊಳ್ಳಲು ಅವರು ಮುಂದಾಗಿದ್ದರು ಎನ್ನುವ ಸಂಗತಿ ಬಹಿರಂಗವಾಗುತ್ತಲೇ, ಸಲ್ಮಾನ್ಗೆ ಭದ್ರತೆ ಹೆಚ್ಚಿಸಲಾಗಿತ್ತು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಸಂಚು ರೂಪಿಸಿತ್ತು ಎಂದು ಪಂಜಾಬ್ ಡಿಜಿಪಿ ಮಾಹಿತಿ ನೀಡಿದ್ದಾರೆ.</p>.<p>ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಹೊಣೆಯನ್ನು ಇದೇ ಬಿಷ್ಣೋಯಿ ಗ್ಯಾಂಗ್ ಹೊತ್ತುಕೊಂಡಿದೆ.</p>.<p>ಸದ್ಯ ಜೈಲು ಪಾಲಾಗಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಸೂಚನೆ ಮೇರೆಗೆ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಭಾನುವಾರ ಹೇಳಿದ್ದಾರೆ.</p>.<p>ಮೂಸೆವಾಲಾ ಕೊಲೆ ಆರೋಪಿ ಕಪಿಲ್ ಪಂಡಿತ್ನ ಪ್ರಾಥಮಿಕ ತನಿಖೆಯಲ್ಲಿ ಈ ಸ್ಟೋಟಕ ಮಾಹಿತಿ ಬಹಿರಂಗಗೊಂಡಿದೆ. ಸಲ್ಮಾನ್ ಖಾನ್ ಹತ್ಯೆ ನಡೆಸಲು ಬಿಷ್ಣೋಯಿ ಗ್ಯಾಂಗ್ ನನ್ನನ್ನು ಸಂಪರ್ಕಿಸಿತ್ತು ಎಂದು ಕಪಿಲ್ ಪಂಡಿತ್ ಹೇಳಿಕೆ ನೀಡಿದ್ದಾನೆ ಎಂದು ಡಿಜಿಪಿ ತಿಳಿಸಿದ್ದಾರೆ.</p>.<p>ಮೇ 29 ರಂದು ಪಂಜಾಬ್ನ ಮಾನ್ಸಾ ಜಿಲ್ಲೆಯಲ್ಲಿ ಮೂಸೆವಾಲಾ ಕೊಲೆಯಾದ ಕೆಲವು ದಿನಗಳ ನಂತರ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಬಂದಿತ್ತು.</p>.<p>ಬಿಷ್ಣೋಯಿಗಳಿಗೆ ಕೃಷ್ಣ ಮೃಗ ಅತ್ಯಂತ ಪ್ರಿಯ ಮತ್ತು ಪವಿತ್ರವಾಗಿದ್ದು, ಅದನ್ನು ಹತ್ಯೆ ಮಾಡಿರುವ ಸಲ್ಮಾನ್ ಖಾನ್ ಮೇಲೆ ಸೇಡು ತೀರಿಸಿಕೊಳ್ಳಲು ಅವರು ಮುಂದಾಗಿದ್ದರು ಎನ್ನುವ ಸಂಗತಿ ಬಹಿರಂಗವಾಗುತ್ತಲೇ, ಸಲ್ಮಾನ್ಗೆ ಭದ್ರತೆ ಹೆಚ್ಚಿಸಲಾಗಿತ್ತು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>