‘ಸೋಗ್ಗಾಡೆ ಚಿನ್ನಿನಾಯನಾ’ ಚಿತ್ರವನ್ನು ಕಲ್ಯಾಣ್ ಕೃಷ್ಣ ಅವರೇ ನಿರ್ದೇಶಿಸಿದ್ದರು. ಈ ಸಿನಿಮಾದಲ್ಲಿ ತನ್ನ ಸಂಬಂಧಿಕರಿಂದಲೇ ಕೊಲೆಯಾಗುವ ವ್ಯಕ್ತಿ ಬಂಗಾರ್ರಾಜು, ಯಮನ ಒಪ್ಪಿಗೆ ಪಡೆದು ಭೂಮಿಗೆ ವಾಪಸ್ ಬಂದು ತನ್ನ ಸಾವಿನ ಹಿಂದಿನ ಕಾರಣವನ್ನು ಪತ್ತೆ ಹಚ್ಚುವುದು ಸಿನಿಮಾದ ಕತೆ. ಇದು ಸೂಪರ್ಹಿಟ್ ಆಗಿತ್ತು. ಇದರಲ್ಲಿ ಅಕ್ಕಿನೇನಿ ನಾಗಾರ್ಜುನ, ರಮ್ಯಕೃಷ್ಣ, ಲಾವಣ್ಯ ತ್ರಿಪಾಠಿ ನಟಿಸಿದ್ದರು. ಈ ಸಿನಿಮಾವು ಕನ್ನಡದಲ್ಲಿ ‘ಉಪೇಂದ್ರ ಮತ್ತೆ ಬಾ’ ಎಂದು ರಿಮೇಕ್ ಆಗಿತ್ತು. ಇದರಲ್ಲಿ ಉಪೇಂದ್ರ, ಪ್ರೇಮಾ ಹಾಗೂ ಶ್ರುತಿ ಹರಿಹರನ್ ನಟಿಸಿದ್ದರು.