ಭಾನುವಾರ, ಏಪ್ರಿಲ್ 2, 2023
31 °C

ವಿಚ್ಛೇದನ ಘೋಷಣೆ ನಂತರ ಸಮಂತಾ ಮೊದಲ ಪೋಸ್ಟ್‌

ಪ್ರಜಾವಾಣಿ ವೆಬ್‌ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಟ ನಾಗ ಚೈತನ್ಯ ಹಾಗೂ ನಟಿ ಸಮಂತಾ ಅವರ ನಾಲ್ಕು ವರ್ಷದ ದಾಂಪತ್ಯ ಜೀವನ ಅಂತ್ಯಗೊಳಿಸಿಕೊಳ್ಳುವ ನಿರ್ಧಾರದ ನಂತರ ಇಬ್ಬರೂ ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಪೋಸ್ಟ್‌ ಒಂದನ್ನು ಹಾಕಿ ಸುಮ್ಮನಾಗಿದ್ದರು. ಮತ್ತೆ ಬಹಿರಂಗವಾಗಿ ಯಾವುದೇ ಹೇಳಿಕೆ ನೀಡಿರಲಿಲ್ಲ.

ಸಮಂತಾ ವಿಚ್ಚೇದನದ ನಂತರ ಮೊದಲ ಬಾರಿಗೆ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಒಂದನ್ನು ಹಾಕಿದ್ದು, ‘ಹಳೆಯ ಪ್ರೀತಿಯ ಹಾಡುಗಳು ಪರ್ವತಗಳ ಮೇಲಿನ ಚಳಿಗಾಲದ ತಂಗಾಳಿಯ ಶಬ್ದದಂತೆ, ಕಳೆದುಹೋದ ಸ್ಮೃತಿಪಟಲದ ಚಿತ್ರಗಳು ಮತ್ತು ಹಾಡುಗಳು ಕಣಿವೆಯಲ್ಲಿನ ಮೌನದ ಪ್ರತಿಧ್ವನಿಯಂತೆ, ಹಳೆಯ ಪ್ರೇಮಿಗಳ ಹಾಡುಗಳು ಹಳೆಯ ಬಂಗಲೆಗಳ, ಮೆಟ್ಟಿಲುಗಳ ಮತ್ತು ಗಲ್ಲಿಗಳಲ್ಲಿನ ಗಾಳಿಯ ಶಬ್ದದಂತೆ‘ ಎಂದು ಕಾವ್ಯಾತ್ಮಕವಾಗಿ ಮನದಾಳವನ್ನು ಹಂಚಿಕೊಂಡಿದ್ದಾರೆ.

ಈ ಮೂಲಕ ಸಮಂತಾ ನಾಗ ಚೈತನ್ಯ ಜೊತೆಗಿನ ಸಂಬಂಧವನ್ನು ಮರೆಯುವುದಿಲ್ಲ ಎಂಬ ಸೂಚನೆಯನ್ನು ನೀಡಿದ್ದಾರೆ ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.

 

ಕಳೆದ ಶನಿವಾರ ನಾಗ ಚೈತನ್ಯ ಹಾಗೂ ಖ್ಯಾತ ನಟಿ ಸಮಂತಾ ನಡುವಿನ ದಾಂಪತ್ಯ ಅಧಿಕೃತವಾಗಿ ಮುರಿದು ಬಿದ್ದಿತ್ತು. ವಿಚ್ಛೇದನ ಪಡೆಯುದಾಗಿ ತಾರಾ ಜೋಡಿ ಘೋಷಿಸಿತ್ತು. ಸ್ವತಃ ಈ ವಿಷಯವನ್ನು ಟ್ವಿಟರ್‌ನಲ್ಲಿ ಪ್ರಕಟಿಸಿದ್ದ ನಾಗ ಚೈತನ್ಯ, ‘ಹೆಚ್ಚು ಆಲೋಚನೆ ನಂತರ ಸಮಂತಾ ಮತ್ತು ನಾನು ನಮ್ಮ ಸ್ವಂತ ದಾರಿಯನ್ನು ಅನುಸರಿಸಲು ಹೆಜ್ಜೆ ಇಟ್ಟಿದ್ದೇವೆ. ಈ ಮೂಲಕ ಗಂಡ ಮತ್ತು ಹೆಂಡತಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ‘ ಎಂದು ಘೋಷಿಸಿದ್ದರು. 2017 ರಲ್ಲಿ ನಾಗ ಚೈತನ್ಯ ಹಾಗೂ ಸಮಂತಾ ಅದ್ಧೂರಿಯಾಗಿ ಮದುವೆಯಾಗಿದ್ದರು.

ಈ ವಿಷಯ ದಕ್ಷಿಣ ಭಾರತದ ಸಿನಿರಂಗದಲ್ಲಿ ದೊಡ್ಡ ಚರ್ಚೆಯಾಯಿತು. ಈ ವಿಚ್ಚೇದನಕ್ಕೆ ಏನು ಕಾರಣ? ಎಂಬುದು ಇದುವರೆಗೆ ಬಹಿರಂಗವಾಗಿಲ್ಲ.

‘ಫ್ಯಾಮಿಲಿ ಮ್ಯಾನ್‌’ ಚಿತ್ರದಲ್ಲಿ ಸಮಂತಾ ಮಾಡಿದ್ದ ಬೋಲ್ಡ್ ದೃಶ್ಯಗಳೇ ಸಂಸಾರದಲ್ಲಿನ ಬಿರುಕಿಗೆ ಕಾರಣ ಎಂದು ದೊಡ್ಡ ಚರ್ಚೆಯಾಗಿತ್ತು. ಆದರೆ, ಇದೀಗ ಸಮಂತಾ ಫ್ಯಾಶನ್ ಡಿಸೈನರ್ ಒಬ್ಬರ ಜೊತೆ ಇದ್ದ ಸಲುಗೆಯೇ ವಿಚ್ಚೇದನಕ್ಕೆ ಕಾರಣವಾಯಿತು ಎಂದು ಕೆಲ ನೆಟ್ಟಿಗರು ಸಾಮಾಜಿಕ ತಾಣಗಳಲ್ಲಿ ಚರ್ಚಿಸುತ್ತಿದ್ದಾರೆ.

ಇದನ್ನೂ ಓದಿ: ಆ ಒಂದು ಫೋಟೊ ನಾಗ ಚೈತನ್ಯ ಸಮಂತಾಗೆ ಡಿವೋರ್ಸ್ ನೀಡಲು ಕಾರಣವಾಯಿತೆ?

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು