<p><strong>ನವದೆಹಲಿ</strong>: ಶಾರುಕ್ ಮಗ ಆರ್ಯನ್ ಖಾನ್ ನಿರ್ದೇಶದನ ‘ದಿ ಬ್ಯಾಡ್ಸ್ ಆಫ್ ಬಾಲಿವುಡ್’ ವೆಬ್ ಸಿರೀಸ್ನಲ್ಲಿ ತಮ್ಮ ಪಾತ್ರವನ್ನು ಸಮರ್ಪಕವಾಗಿ ತೆರೆಮೇಲೆ ತಂದಿಲ್ಲ ಎಂದು ಆರೋಪಿಸಿರುವ ಮಾದಕ ದ್ರವ್ಯ ನಿಯಂತ್ರಣ ದಳದ (ಎನ್ಸಿಬಿ) ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ₹2 ಕೋಟಿ ಪರಿಹಾರ ಕೋರಿದ್ದಾರೆ.</p><p>ಈ ಪ್ರಕರಣದಲ್ಲಿ ನಿರ್ಮಾಣ ಸಂಸ್ಥೆ, ನೆಟ್ಫ್ಲಿಕ್ಸ್ ಮತ್ತು ಇತರರನ್ನು ಅವರು ಪಕ್ಷಗಾರರನ್ನಾಗಿಸಿದ್ದಾರೆ.</p><p>ಗೌರಿ ಖಾನ್ ಒಡೆತನದ ‘ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್’ ವೆಬ್ ಸಿರೀಸ್ ನಿರ್ಮಿಸಿದೆ. ಸಿರೀಸ್ನ ಮೊದಲ 7 ಏಪಿಸೋಡ್ಗಳು ಸೆಪ್ಟೆಂಬರ್ 18ರಂದು ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಿತ್ತು.</p><p><strong>ದೂರಿನಲ್ಲಿ ಏನಿದೆ: </strong></p><p>ನಮ್ಮ ನಡುವಿನ (ವಾಂಖೆಡೆ ಮತ್ತು ಆರ್ಯನ್ ಖಾನ್) ಪ್ರಕರಣವು ಬಾಂಬೆ ಹೈಕೋರ್ಟ್ ಮತ್ತು ಮುಂಬೈನ ವಿಶೇಷ ಎನ್ಡಿಪಿಎಸ್ ನ್ಯಾಯಾಲಯದಲ್ಲಿ ಬಾಕಿ ಇರುವಾಗಲೇ ಉದ್ದೇಶಪೂರ್ವಕವಾಗಿಯೇ ವೆಬ್ ಸಿರೀಸ್ ಅನ್ನು ತರಲಾಗಿದೆ. ಆ ಮೂಲಕ ನನ್ನ ವ್ಯಕ್ತಿತ್ವಕ್ಕೆ ಕಳಂಕ ತರುವ ಉದ್ದೇಶ ಹೊಂದಿದ್ದಾರೆ ಎಂದು ವಾಂಖೆಡೆ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.</p><p>ಚಿತ್ರದಲ್ಲಿ ಮಾದಕ ದ್ರವ್ಯ ನಿಯಂತ್ರಣ ಸಂಸ್ಥೆ ಬಗ್ಗೆ ನಕಾರಾತ್ಮಕವಾಗಿ ತೋರಿಸಲಾಗಿದೆ. ಇದು ಸಂಸ್ಥೆಯ ಮೇಲಿರುವ ವಿಶ್ವಾಸವನ್ನು ಕುಗ್ಗಿಸಲಿದೆ ಎಂದು ಅವರು ಹೇಳಿದ್ದಾರೆ.</p><p>ಪರಿಹಾರ ಹಣ ಮಂಜೂರಾದರೆ ಅದನ್ನು ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ಟಾಟಾ ಮೆಮೋರಿಯಲ್ ಕ್ಯಾನ್ಸರ್ ಆಸ್ಪತ್ರೆಗೆ ದಾನ ಮಾಡಬೇಕೆಂದು ಅವರು ಕೋರಿದ್ದಾರೆ.</p><p><strong>ವಾಂಖೆಡೆ ವಿರುದ್ಧ ₹25 ಕೋಟಿ ಲಂಚ ಆರೋಪ</strong></p><p>ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಬಂಧಿಸದಿರಲು ₹25 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ವಾಂಖೆಡೆ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪ್ರಕರಣ ವಿಚಾರಣಾ ಹಂತದಲ್ಲಿದೆ. </p><p>2021ರ ಅಕ್ಟೋಬರ್ 2ರಂದು ವಾಂಖೆಡೆ ನೇತೃತ್ವದ ತಂಡವು ಕ್ರೂಸ್ ಮೇಲೆ ದಾಳಿ ನಡೆಸಿತ್ತು. ಹಡಗಿನಲ್ಲಿದ್ದ ಪ್ರಯಾಣಿಕರಿಗೆ ಬೆದರಿಸಿದ್ದಲ್ಲದೇ, ₹25 ಕೋಟಿ ನೀಡುವಂತೆ ಆರ್ಯನ್ ಖಾನ್ ಕುಟುಂಬಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಅವರ ಮೇಲಿದೆ.</p><p>ಈ ಸಂಬಂಧ ಭ್ರಷ್ಟಾಚಾರ ಮತ್ತು ವಿವಿಧ ನಿಯಮಗಳ ಅಡಿಯಲ್ಲಿ ವಾಂಖೆಡೆ ಹಾಗೂ ಇತರ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿತ್ತು.</p><p>ಸದ್ಯ ಇವರು ಭಾರತೀಯ ಕಂದಾಯ ಇಲಾಖೆಯಲ್ಲಿ ಅಧಿಕಾರಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಶಾರುಕ್ ಮಗ ಆರ್ಯನ್ ಖಾನ್ ನಿರ್ದೇಶದನ ‘ದಿ ಬ್ಯಾಡ್ಸ್ ಆಫ್ ಬಾಲಿವುಡ್’ ವೆಬ್ ಸಿರೀಸ್ನಲ್ಲಿ ತಮ್ಮ ಪಾತ್ರವನ್ನು ಸಮರ್ಪಕವಾಗಿ ತೆರೆಮೇಲೆ ತಂದಿಲ್ಲ ಎಂದು ಆರೋಪಿಸಿರುವ ಮಾದಕ ದ್ರವ್ಯ ನಿಯಂತ್ರಣ ದಳದ (ಎನ್ಸಿಬಿ) ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ₹2 ಕೋಟಿ ಪರಿಹಾರ ಕೋರಿದ್ದಾರೆ.</p><p>ಈ ಪ್ರಕರಣದಲ್ಲಿ ನಿರ್ಮಾಣ ಸಂಸ್ಥೆ, ನೆಟ್ಫ್ಲಿಕ್ಸ್ ಮತ್ತು ಇತರರನ್ನು ಅವರು ಪಕ್ಷಗಾರರನ್ನಾಗಿಸಿದ್ದಾರೆ.</p><p>ಗೌರಿ ಖಾನ್ ಒಡೆತನದ ‘ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್’ ವೆಬ್ ಸಿರೀಸ್ ನಿರ್ಮಿಸಿದೆ. ಸಿರೀಸ್ನ ಮೊದಲ 7 ಏಪಿಸೋಡ್ಗಳು ಸೆಪ್ಟೆಂಬರ್ 18ರಂದು ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಿತ್ತು.</p><p><strong>ದೂರಿನಲ್ಲಿ ಏನಿದೆ: </strong></p><p>ನಮ್ಮ ನಡುವಿನ (ವಾಂಖೆಡೆ ಮತ್ತು ಆರ್ಯನ್ ಖಾನ್) ಪ್ರಕರಣವು ಬಾಂಬೆ ಹೈಕೋರ್ಟ್ ಮತ್ತು ಮುಂಬೈನ ವಿಶೇಷ ಎನ್ಡಿಪಿಎಸ್ ನ್ಯಾಯಾಲಯದಲ್ಲಿ ಬಾಕಿ ಇರುವಾಗಲೇ ಉದ್ದೇಶಪೂರ್ವಕವಾಗಿಯೇ ವೆಬ್ ಸಿರೀಸ್ ಅನ್ನು ತರಲಾಗಿದೆ. ಆ ಮೂಲಕ ನನ್ನ ವ್ಯಕ್ತಿತ್ವಕ್ಕೆ ಕಳಂಕ ತರುವ ಉದ್ದೇಶ ಹೊಂದಿದ್ದಾರೆ ಎಂದು ವಾಂಖೆಡೆ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.</p><p>ಚಿತ್ರದಲ್ಲಿ ಮಾದಕ ದ್ರವ್ಯ ನಿಯಂತ್ರಣ ಸಂಸ್ಥೆ ಬಗ್ಗೆ ನಕಾರಾತ್ಮಕವಾಗಿ ತೋರಿಸಲಾಗಿದೆ. ಇದು ಸಂಸ್ಥೆಯ ಮೇಲಿರುವ ವಿಶ್ವಾಸವನ್ನು ಕುಗ್ಗಿಸಲಿದೆ ಎಂದು ಅವರು ಹೇಳಿದ್ದಾರೆ.</p><p>ಪರಿಹಾರ ಹಣ ಮಂಜೂರಾದರೆ ಅದನ್ನು ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ಟಾಟಾ ಮೆಮೋರಿಯಲ್ ಕ್ಯಾನ್ಸರ್ ಆಸ್ಪತ್ರೆಗೆ ದಾನ ಮಾಡಬೇಕೆಂದು ಅವರು ಕೋರಿದ್ದಾರೆ.</p><p><strong>ವಾಂಖೆಡೆ ವಿರುದ್ಧ ₹25 ಕೋಟಿ ಲಂಚ ಆರೋಪ</strong></p><p>ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಬಂಧಿಸದಿರಲು ₹25 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ವಾಂಖೆಡೆ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪ್ರಕರಣ ವಿಚಾರಣಾ ಹಂತದಲ್ಲಿದೆ. </p><p>2021ರ ಅಕ್ಟೋಬರ್ 2ರಂದು ವಾಂಖೆಡೆ ನೇತೃತ್ವದ ತಂಡವು ಕ್ರೂಸ್ ಮೇಲೆ ದಾಳಿ ನಡೆಸಿತ್ತು. ಹಡಗಿನಲ್ಲಿದ್ದ ಪ್ರಯಾಣಿಕರಿಗೆ ಬೆದರಿಸಿದ್ದಲ್ಲದೇ, ₹25 ಕೋಟಿ ನೀಡುವಂತೆ ಆರ್ಯನ್ ಖಾನ್ ಕುಟುಂಬಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಅವರ ಮೇಲಿದೆ.</p><p>ಈ ಸಂಬಂಧ ಭ್ರಷ್ಟಾಚಾರ ಮತ್ತು ವಿವಿಧ ನಿಯಮಗಳ ಅಡಿಯಲ್ಲಿ ವಾಂಖೆಡೆ ಹಾಗೂ ಇತರ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿತ್ತು.</p><p>ಸದ್ಯ ಇವರು ಭಾರತೀಯ ಕಂದಾಯ ಇಲಾಖೆಯಲ್ಲಿ ಅಧಿಕಾರಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>