ಬೆಂಗಳೂರು:ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಇಡಲಾಗಿದ್ದು ಗಣ್ಯರು ಸೇರಿದಂತೆ ಸಾರ್ವಜನಿಕರು ಅಂತಿಮ ದರ್ಶನ ಪಡೆದರು.
ಆಸ್ಪತ್ರೆಯಿಂದ ನೇರವಾಗಿ ಪಾರ್ಥಿವ ಶರೀರವನ್ನು ಕಲಾಕ್ಷೇತ್ರಕ್ಕೆ ತರಲಾಯಿತು. ಸಂಚಾರಿ ವಿಜಯ್ ಅವರ ಕುಟುಂಬದವರು ಮೊದಲು ದರ್ಶನ ಪಡೆದರು. ಬಳಿಕ ಸಾರ್ವಜನಿಕರು, ಸ್ನೇಹಿತರು, ಅಭಿಮಾನಿಗಳು, ರಾಜಕೀಯ ನಾಯಕರು, ಸಿನಿಮಾರಂಗದವರು ಅಂತಿಮ ದರ್ಶನ ಪಡೆದರು.
ಮಂಗಳವಾರ ಸಂಜೆಯ ಒಳಗೆ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಅವರು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಪಂಚನಹಳ್ಳಿಯ ಅಂತ್ಯಸಂಸ್ಕಾರ ನಡೆಯಲಿದೆ.