ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಂಚಿನ ಸುಳಿಯಲಿ’ ಸಿಕ್ಕ ಭೂಮಿ!

Last Updated 29 ಜೂನ್ 2022, 9:48 IST
ಅಕ್ಷರ ಗಾತ್ರ

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಖ್ಯಾತಿಯ ಪವನ್‌ಕುಮಾರ್ ಹಾಗೂ ‘ಕಿನ್ನರಿ’ಯ ನಟಿ, ಬಿಗ್‌ಬಾಸ್ ಸ್ಪರ್ಧಿ ಭೂಮಿ ಶೆಟ್ಟಿ ನಟಿಸಿರುವ ‘ಸಂಚಿನ ಸುಳಿಯಲಿ’ ಸಿನಿಮಾ ಮುಹೂರ್ತ ಇತ್ತೀಚೆಗೆ ನಡೆಯಿತು.

ನಿರ್ದೇಶಕ ನಂದಕಿಶೋರ್ ಮೊದಲ ದೃಶ್ಯಕ್ಕೆ ಕ್ಲ್ಯಾಪ್‌ ಮಾಡಿದರು. ಉದ್ಯಮಿ ಕೆ.ಎನ್.ನಾಗೇಗೌಡ ಮತ್ತು ಮೈಸೂರಿನ ಫ್ಯಾಶನ್ ಡಿಸೈನರ್ ಹಂಸರವಿಶಂಕರ್ ಜಂಟಿಯಾಗಿ ಮಾನ್ಯ ಕ್ರಿಯೇಶನ್ಸ್ ಅಡಿಯಲ್ಲಿ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ‘ಅಚಲ’ ‘ಯಾರವಳು’ ಸಿನಿಮಾಗಳನ್ನು ನಿರ್ದೇಶಿಸಿದ್ದ ಪ್ರಮೋದ್ ಎಸ್. ಆರ್. ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ.

‘2014ರಂದು ಮೈಸೂರಿನಲ್ಲಿ ನಡೆದ ಘಟನೆಯೊಂದು ದಿನಪತ್ರಿಕೆಯಲ್ಲಿ ಪ್ರಕಟಗೊಂಡಿತ್ತು. ಅದರ ಎಳೆಯನ್ನು ತೆಗೆದುಕೊಂಡು ಕಥೆ ಹೆಣೆದಿದ್ದೇನೆ. ಕಾಲೇಜು ವಿಷ್ಯಾರ್ಥಿಗಳ ತಂಡವೊಂದು ನಿರ್ಜನ ಪ್ರದೇಶಕ್ಕೆ ತೆರೆಳುತ್ತದೆ. ಅಲ್ಲಿಗೆ ಹೋದಾಗ ಸಂಚಿನ ಸುಳಿಯಲ್ಲಿ ಸಿಲುಕುತ್ತಾರೆ. ಇದು ಕಥೆಯ ಎಳೆ’ ಎಂದಿದ್ದಾರೆ ಪ್ರಮೋದ್‌. ಕಥೆಗೆ ಅನುಗುಣವಾಗಿ ಶೇಕಡ 90ರಷ್ಟು ಚಿತ್ರೀಕರಣವನ್ನು ಉಡುಪಿ, ಬೆಂಗಳೂರು ಸುತ್ತಮುತ್ತ ಎರಡು ಹಂತದಲ್ಲಿ ನಡೆಸಲು ಚಿತ್ರತಂಡ ನಿರ್ಧರಿಸಿದೆ. ಕೆವಿನ್ ಎಂ. ಸಂಗೀತ, ವಿನೋದ್ ಆರ್. ಛಾಯಾಗ್ರಹಣ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT