ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿನಿಮಾ: ಬರುತ್ತಿದ್ದಾರೆ ‘ಬಿಲ್‌ ಗೇಟ್ಸ್‌’

Last Updated 7 ಮಾರ್ಚ್ 2019, 20:00 IST
ಅಕ್ಷರ ಗಾತ್ರ

‘ಬಿಲ್‌ ಗೇಟ್ಸ್‌’ ಬರುತ್ತಿದ್ದಾರೆ
ಚಂದನವನದಲ್ಲಿ ‘ಬಿಲ್‌ ಗೇಟ್ಸ್‌’ ಹೆಸರಿನ ಸಿನಿಮಾ ಒಂದು ನಿರ್ಮಾಣವಾಗಿದೆ. ಪಾಂಚಜನ್ಯ ಸಿನಿ ಕ್ರಿಯೆಷನ್ಸ್ ಅಡಿ ಕೆಲವು ಸ್ನೇಹಿತರು ಸೇರಿಕೊಂಡು ನಿರ್ಮಿಸಿರುವ ಈ ಚಿತ್ರವನ್ನು ಶ್ರೀನಿವಾಸ್ ಮಂಡ್ಯ ನಿರ್ದೇಶಿಸಿದ್ದಾರೆ.

ಕೆಜಿಎಫ್ ಚಿತ್ರಕ್ಕೆ ಕಲಾ ನಿರ್ದೇಶಕನಾಗಿ ಕೆಲಸ ಮಾಡಿದ್ದ ಶಿವಕುಮಾರ್‌ ಅವರು ಬಿಲ್ ಗೇಟ್ಸ್ ಚಿತ್ರಕ್ಕೂ ಕಲಾ ನಿರ್ದೇಶಕರಾಗಿದ್ದಾರೆ. ಅಂದ ಮೇಲೆ, ಈ ಚಿತ್ರದಲ್ಲೂ ಅದ್ಧೂರಿತನ ಕಾಣಿಸಲಿದೆ ಎಂದು ಕನ್ನಡ ಸಿನಿಮಾ ವೀಕ್ಷಕರು ನಿರೀಕ್ಷಿಸಬಹುದು. ಸಿನಿಮಾದಲ್ಲಿ ಚಿಕ್ಕಣ್ಣ ಹಾಗೂ ಶಿಶಿರ್‌ ಅವರ ಕಾಂಬಿನೇಷನ್‌ನಲ್ಲಿ ಯಮಲೋಕ ದೃಶ್ಯವೊಂದಿದೆ. ಅದಕ್ಕಾಗಿ ಅರಮನೆಯ ಬೃಹತ್‌ ಸೆಟ್‌ ಹಾಕಲಾಗಿತ್ತಂತೆ.

ಈ ಚಿತ್ರದಲ್ಲಿ ಕುರಿ ಪ್ರತಾಪ್ ರಾಜಶೇಖರ್, ರಶ್ಮಿತಾ, ವಿ. ಮನೋಹರ್, ಅಕ್ಷರಾ ರೆಡ್ಡಿ, ಬ್ಯಾಂಕ್ ಜನಾರ್ದನ್, ಗಿರಿ ಮುಂತಾದವರು ಅಭಿನಯಿಸಿದ್ದಾರೆ. ಸಿನಿಮಾ ಈಗ ಪೊಸ್ಟ್ ಪ್ರೋಡಕ್ಷನ್ ಹಂತದಲ್ಲಿದೆ. ಶೀಘ್ರದಲ್ಲೇ ಪ್ರೆಕ್ಷಕರಿಗೆ ಕಾಮಿಡಿ ರಸದೌತಣ ಬಡಿಸಲಿದೆ ಎಂದು ಚಿತ್ರ ತಂಡ ಹೇಳಿದೆ.

***
‘ಸುವರ್ಣ ಸುಂದರಿ’ಗೆ ಶ್ರೀಮುರಳಿ ಮೆಚ್ಚುಗೆ
ನಟ ಶ್ರೀಮುರಳಿ ಅವರು ಇತ್ತೀಚಿಗೆ ‘ಸುವರ್ಣ ಸುಂದರಿ’ ಸಿನಿಮಾದ ಹಾಡನ್ನು ಬಿಡುಗಡೆ ಮಾಡಿ ಅದರ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ಎಂ.ಎಸ್.ಎನ್. ಸೂರ್ಯ ಅವರು ನಿರ್ದೇಶಿಸಿದ್ದಾರೆ. ಜಯಪ್ರದಾ, ಸಾಯಿಕುಮಾರ್, ಸಾಕ್ಷಿ, ತಿಲಕ್, ಅವಿನಾಷ್, ಜೈ ಜಗದೀಶ್, ಶಾನ್ ಹಾಗೂ ಇತರರು ಚಿತ್ರದಲ್ಲಿದ್ದಾರೆ.

ಎಂ.ಎನ್. ಲಕ್ಷ್ಮಿ ಈ ಚಿತ್ರದ ನಿರ್ಮಾಪಕಿ. ಸಾಯಿ ಕಾರ್ತಿಕ್ ಸಂಗೀತ ಹಾಗೂ ರೀ ರೆಕಾರ್ಡಿಂಗ್ ಮಾಡಿದ್ದಾರೆ. ಈಶ್ವರ್ ಛಾಯಾಗ್ರಹಣ ಮಾಡಿದ್ದಾರೆ.

***
‘ವಜ್ರಮುಖಿ’ ಸಿದ್ಧ
ಶ್ರೀ ಸಿಗಂದೂರು ಚೌಡೇಶ್ವರಿ ಸಿನಿ ಕಂಬೈನ್ಸ್ ಲಾಂಛನದಡಿ ಶಶಿಕುಮಾರ್ ಅವರು ಕಥೆ- ಚಿತ್ರಕಥೆ ಬರೆದು ನಿರ್ಮಾಣ ಮಾಡಿರುವ ‘ವಜ್ರಮುಖಿ’ ಸಿನಿಮಾದ ಪ್ರಥಮ ಪ್ರತಿ ಸಿದ್ಧವಾಗಿದೆಯಂತೆ.

ನೀತು, ದಿಲೀಪ್ ಪೈ, ಸಂಜನಾ, ಶೋಭಿತಾ, ಪ್ರಕಾಶ್ ಹೆಗ್ಗೋಡು, ರವಿಕಿರಣ್, ನೇಹಾ, ರಾಘವೇಂದ್ರ ರೈ, ಶಶಿಕುಮಾರ್, ಅನಿಲ್ ಕುಮಾರ್, ಸ್ವಪ್ನಶ್ರೀ, ಪ್ರೇಕ್ಷಾ ಅವರನ್ನೊಳಗೊಂಡ ತಾರಾಗಣ ಈ ಚಿತ್ರದಲ್ಲಿದೆ.

ಪಿ.ಕೆ.ಎಚ್. ದಾಸ್ ಛಾಯಾಗ್ರಹಣ ಮಾಡಿದ್ದಾರೆ. ರಾಜ್‍ಭಾಸ್ಕರ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ವಿ. ನಾಗೇಂದ್ರಪ್ರಸಾದ್ ಸಾಹಿತ್ಯ ಹಾಗೂ ವಿನಾಯಕ ರಾಮ್ ಸಂಭಾಷಣೆ ಬರೆದಿದ್ದಾರೆ.

***

‘ಹಫ್ತಾ’ಕ್ಕೆ ಹಿನ್ನೆಲೆ ಸಂಗೀತ
ಮೈತ್ರಿ ಮಂಜುನಾಥ್ ಅವರು ನಿರ್ಮಿಸಿರುವ ‘ಹಫ್ತಾ’ ಚಿತ್ರಕ್ಕೆ ಹಿನ್ನೆಲೆ ಸಂಗೀತ ಜೋಡಣೆಯ ಕೆಲಸ ಚಾಮುಂಡೇಶ್ವರಿ ಸ್ಟುಡಿಯೊದಲ್ಲಿ ಗೌತಮ್ ಶ್ರೀವತ್ಸ ನೇತೃತ್ವದಲ್ಲಿ ನಡೆದಿದೆ.

ಪ್ರಕಾಶ್ ಹೆಬ್ಬಾಳ್ ನಿರ್ದೇಶನದ ಈ ಚಿತ್ರದ ಛಾಯಾಗ್ರಹಣವನ್ನು ಸೂರಿ ಸಿನಿಟೆಕ್ ಮಾಡಿದ್ದಾರೆ. ವಿಜಿ ಯಾಡ್ಲಿನಾ ಸಂಗೀತ ನೀಡಿದ್ದಾರೆ. ಈ ಚಿತ್ರ ಸಂಪೂರ್ಣ ಮನರಂಜನಾತ್ಮಕವಾಗಿದ್ದು ಭೂಗತ ಜಗತ್ತಿನ ಕಥೆಯನ್ನೊಳಗೊಂಡಿದೆ. ವರ್ಧನ್ ತೀರ್ಥಹಳ್ಳಿ, ಬಿಂಬಶ್ರೀ ನಿನಾಸಂ, ರಾಘವ್‍ನಾಗ್, ಬಲರಾಜ್ ವಾಡಿ, ದಶಾವರ ಚಂದ್ರು, ಉಗ್ರಂ ರವಿ, ಚಂದ್ರು ಮುಂತಾದವರ ತಾರಾಗಣವಿದೆ.

***
‘ನಿಗರ್ವ’ ಏಪ್ರಿಲ್‍ನಲ್ಲಿ ಆರಂಭ
ಮುಸುರಿ ಕೃಷ್ಣಮೂರ್ತಿ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ನೂತನ ಚಿತ್ರಕ್ಕೆ ‘ನಿಗರ್ವ’ಎಂದು ಹೆಸರಿಡಲಾಗಿದೆಯಂತೆ. ಏಪ್ರಿಲ್‍ನಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂದು ಚಿತ್ರ ತಂಡ ಹೇಳಿದೆ.

ಜಯಸಿಂಹ ಮುಸುರಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಗುರುದತ್ ಮುಸುರಿ ಅವರ ಛಾಯಗ್ರಹಣವಿದೆ. ‘ನಿಗರ್ವ’ ಚಿತ್ರದ ಇತರ ಮಾಹಿತಿಯನ್ನು ಸದ್ಯದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ನಿರ್ದೇಶಕ ಜಯಸಿಂಹ ಮುಸುರಿ ತಿಳಿಸಿದ್ದಾರೆ.

***

ಚಿತ್ರೀಕರಣ ಪೂರ್ಣ
ಶ್ರೀ ಲಕ್ಷ್ಮೀವೆಂಕಟೇಶ್ವರ ಮೂವಿ ಮೇಕರ್ಸ್ ಲಾಂಛನದಲ್ಲಿ ನಾಗರಾಜ್ ಮತ್ತು ಮನೋಜ್ ಅವರು ನಿರ್ಮಿಸುತ್ತಿರುವ ‘ಟರ್ನಿಂಗ್ ಪಾಯಿಂಟ್’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ.

ವಿನು ಮಹೇಶ್ ರೈ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ಹಾಡುಗಳನ್ನು ಬರೆದು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಬೆಂಗಳೂರು, ಕುಶಾಲನಗರ, ಮಡಿಕೇರಿ, ಸುಳ್ಯ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.

ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಎ.ಟಿ. ರವೀಶ್ ಸಂಗೀತ ನೀಡಿದ್ದಾರೆ. ಸುರೇಶ್ ಅರಸ್ ಅವರ ಸಂಕಲನವಿರುವ ಈ ಚಿತ್ರಕ್ಕೆ ಎ.ಆರ್. ವಿನ್ಸೆಂಟ್‌ ಅವರ ಛಾಯಾಗ್ರಹಣವಿದೆ. ತಾರಾಬಳಗದಲ್ಲಿ ಆದಿಕೇಶವ್, ಅನಿಕಾರಾವ್, ಜೈಜಗದೀಶ್, ವಿನಯಾ ಪ್ರಸಾದ್, ಶ್ರೀನಿವಾಸಮೂರ್ತಿ, ದಿಶಾ ಪೂವಯ್ಯ, ಜೋಸೈಮನ್, ರಾಧಿಕಾ, ರಾಘವೇಂದ್ರ ರೈ, ಉಮೇಶ್ ಮಿಜಾರ್ ಇದ್ದಾರೆ.

***
ಏಪ್ರಿಲ್‍ನಲ್ಲಿ ‘ವೀಕ್ ಎಂಡ್’
ಮಂಜುನಾಥ್ ಡಿ. ಅವರು ನಿರ್ಮಿಸಿರುವ ‘ವೀಕ್ ಎಂಡ್’ ಚಿತ್ರ ಸಿದ್ದವಾಗಿದ್ದು ಏಪ್ರಿಲ್‍ನಲ್ಲಿ ತೆರೆಗೆ ಬರಲಿದೆ ಎಂದು ಚಿತ್ರ ತಂಡ ಹೇಳಿದೆ.

ಶೃಂಗೇರಿ ಸುರೇಶ್ ನಿರ್ದೇಶನದ ಈ ಚಿತ್ರಕ್ಕೆ ಶಶಿಧರ್ ಅವರ ಛಾಯಾಗ್ರಹಣವಿದೆ. ಮನೋಜ್ ಸಂಗೀತ ನೀಡಿದ್ದಾರೆ. ಮಿಲಿಂದ್ ಅವರು ನಾಯಕನಾಗಿ ಅಭಿನಯಿಸಿರುವ ಈ ಚಿತ್ರದ ನಾಯಕಿ ಸಂಜನಾ ಬುರ್ಲಿ. ಅನಂತನಾಗ್, ಗೋಪಿನಾಥ್ ಭಟ್, ಮಂಜುನಾಥ್, ನಾಗಭೂಷಣ್, ನೀನಾಸಂ ರಘು, ನವನೀತ, ನಟನಾ ಪ್ರಶಾಂತ್, ನೀತು ಬಾಲಾ, ವೀಣಾ ಜಯಶಂಕರ್, ಬ್ಯಾಂಕ್ ಸತೀಶ್, ಶಿವಕುಮಾರ್, ಸಂಜಯ್ ನಾಗೇಶ್, ಮಂಜುನಾಥ್ ಶಾಸ್ತ್ರಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT