ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಟ್ಟರ ನಿರ್ದೇಶನದಲ್ಲಿ ಸೆಂಚುರಿ ಸ್ಟಾರ್‌ ಶಿವಣ್ಣನ ಸಿನಿಮಾ: ಶೀರ್ಷಿಕೆ ವಿಭಿನ್ನ

Last Updated 6 ಸೆಪ್ಟೆಂಬರ್ 2022, 11:11 IST
ಅಕ್ಷರ ಗಾತ್ರ

ಸೆಂಚುರಿ ಸ್ಟಾರ್‌ ಶಿವರಾಜ್‌ಕುಮಾರ್‌ ಅವರ 126ನೇ ಸಿನಿಮಾದ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಗಿದ್ದು, ಚಿತ್ರದ ಶೀರ್ಷಿಕೆಯನ್ನು ನಿರ್ದೇಶಕ ಯೋಗರಾಜ್‌ ಭಟ್‌ ಘೋಷಿಸಿದ್ದಾರೆ. ಚಿತ್ರಕ್ಕೆ ‘K ಕರಟಕ D ದಮನಕ’ ಎಂಬ ವಿಭಿನ್ನ ಶೀರ್ಷಿಕೆ ಇಡಲಾಗಿದೆ.

ಸದ್ಯ ‘ಗರಡಿ’ ಸಿನಿಮಾದ ಚಿತ್ರೀಕರಣ ಪೂರ್ಣಗೊಳಿಸಿ, ಹೊಸ ಪ್ರೊಜೆಕ್ಟ್‌ ಕೈಗೆತ್ತಿಕೊಂಡಿರುವ ಯೋಗರಾಜ್ ಭಟ್‌ ಅವರು ಸೆಂಚುರಿ ಸ್ಟಾರ್‌ಗೆ ಆ್ಯಕ್ಷನ್‌ ಕಟ್‌ ಹೇಳುವುದರಲ್ಲಿ ಬ್ಯುಸಿಯಾಗಿದ್ದಾರೆ.ರಾಕ್‌ಲೈನ್ ಎಂಟರ್‌ಟೈನ್‌ಮೆಂಟ್‌ ಲಾಂಛನದಲ್ಲಿ ರಾಕ್‌ಲೈನ್ ವೆಂಕಟೇಶ್ ನಿರ್ಮಾಣ ಮಾಡುತ್ತಿರುವ ಈ ಚಿತ್ರದಲ್ಲಿ, ಶಿವರಾಜ್‌ಕುಮಾರ್‌ ಅವರ ಜೊತೆಗೆ ಬಹುಭಾಷಾ ನಟ ಪ್ರಭುದೇವ ಅವರೂ ನಟಿಸುತ್ತಿದ್ದಾರೆ.ಹಾಸ್ಯ, ಭಾವನೆಗಳು ತುಂಬಿರುವ ಆ್ಯಕ್ಷನ್ ಡ್ರಾಮ ಸಿನಿಮಾ ಇದಾಗಿದೆ ಎಂದು ಮುಹೂರ್ತದ ದಿನ ಯೋಗರಾಜ್‌ ಭಟ್‌ ತಿಳಿಸಿದ್ದರು.

ಯೋಗರಾಜ್‌ ಭಟ್‌ ಅವರ ಸಾರಥ್ಯದಲ್ಲಿ ಮೂಡಿಬರಲಿರುವ ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣವಿದೆ. ‘K ಕರಟಕ D ದಮನಕ’ ಚಿತ್ರದ ಮೊದಲ ಹಂತದ ಚಿತ್ರೀಕರಣದಲ್ಲಿ ತನಿಕೆಲ್ಲ ಭರಣಿ, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಮುಂತಾದವರು ಭಾಗಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT