ಗಿರೀಶ್ ಕುಮಾರ್ ಬಿ. ಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ 55 ದಿನಗಳ ಕಾಲ ಬೆಂಗಳೂರು, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು ಮುಂತಾದ ಕಡೆ ನಡೆದಿದೆ. ಈ ಹಿಂದೆ ‘ಆವಾಹಯಾಮಿ’ ಚಿತ್ರ ನಿರ್ದೇಶಿಸಿದ್ದ ಗಿರೀಶ್ ಕುಮಾರ್ ಅವರ ನಿರ್ದೇಶನದ ಎರಡನೇ ಚಿತ್ರವಿದು. ಗಿರೀಶ್ ಕುಮಾರ್, ಗಿರೀಶ್ ಬಿಜ್ಜಳ ಸೇರಿ ಚಿತ್ರಕಥೆ ರಚಿಸಿದ್ದಾರೆ.