<p>‘ಡಾ.ಅಭಿ 007’ ಚಿತ್ರದ ಪೋಸ್ಟರ್ನ್ನು ದ್ರುವ ಸರ್ಜಾ ಬಿಡುಗಡೆ ಮಾಡಿ ನಾಯಕ ವಿಷ್ಣು ಅವರಿಗೆ ಶುಭ ಹಾರೈಸಿದ್ದಾರೆ.ವಿಷ್ಣು ಅವರು ಈ ಚಿತ್ರದ ಮೂಲಕ ಪೂರ್ಣಪ್ರಮಾಣದ ನಾಯಕನಾಗಿ ಸಿನಿಮಾ ಕ್ಷೇತ್ರ ಪ್ರವೇಶಿಸಿದ್ದಾರೆ. ಈ ಹಿಂದೆ ಛಾಲೆಂಜಿಂಗ್ ಸ್ಟಾರ್ ದರ್ಶನ್ ಅವರೊಂದಿಗೆ ‘ಜಗ್ಗುದಾದಾ’ ಚಿತ್ರದಲ್ಲಿ ವಿಷ್ಣು ಅಭಿನಯಿಸಿದ್ದರು.</p>.<p>ಮೂಲತಃ ವೈದ್ಯರಾಗಿರುವ ಡಾ.ವೆಂಕಟೇಶ್ ಪ್ರಸಾದ್ ಈ ಚಿತ್ರದ ನಿರ್ದೇಶಕರು. ಹಿಂದಿ ಹಾಗೂ ಇಂಗ್ಲಿಷ್ನ ಕೆಲವು ವೆಬ್ ಸೀರಿಸ್ ಹಾಗೂ ಧಾರಾವಾಹಿಗಳಿಗೆ ಸಹಾಯಕ ನಿರ್ದೇಶನ ಮಾಡಿರುವ ಅನುಭವ ಇವರಿಗಿದೆ. ಹಿರಿತೆರೆಯಲ್ಲಿ ವೆಂಕಟೇಶ್ ಪ್ರಸಾದ್ ಅವರಿಗೆ ಚೊಚ್ಚಲ ನಿರ್ದೇಶನದ ಚಿತ್ರ.</p>.<p>ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಮೂರು ಹಾಡುಗಳಿದ್ದು, ಯು.ವಿ.ಸ್ಟೆವೆನ್ ಸತೀಶ್ ಸಂಗೀತ ನೀಡುತ್ತಿದ್ದಾರೆ. ಚೇತನ್ ಕುಮಾರ್ (ಭರ್ಜರಿ) ಗೀತರಚನೆ ಮಾಡಿದ್ದಾರೆ.</p>.<p>ಇನ್ಫೆಂಟ್ ಭರತ್ ಛಾಯಾಗ್ರಹಣ, ಅರುಣ್ ರೈ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಮೂರು ಸಾಹಸ ಸನ್ನಿವೇಶಗಳಿದ್ದು, ಅರ್ಜುನ್ ರಾಜ್, ಚಂದ್ರು ಬಂಡೆ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ.<br />ವಿಷ್ಣು ನಾಯಕನಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ವರ್ಧನ್, ಅದ್ವಿತಿ ಶೆಟ್ಟಿ, ಪ್ರಿಯಾಂಕ ಅರೋರ, ವೀಣಾ ಸುಂದರ್, ಸಿದ್ದು ಮೂಲಿಮನಿ, ಪ್ರಕಾಶ್ ತುಮ್ಮಿನಾಡ್, ನಾಗೇಂದ್ರ ಅರಸ್, ಬಲ ರಾಜವಾಡಿ, ಐಶ್ವರ್ಯ, ಶರ್ಮಿಳಾ, ಸುಚಿತ್, ಕುರಿ ರಂಗ, ಡಾ.ಸುಮಿತ್ ತಲ್ವಾರ್ ಇದ್ದಾರೆ.<br />ಈಗಾಗಲೇ 35 ದಿನಗಳ ಕಾಲ ಬೆಂಗಳೂರು, ತುಮಕೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಇನ್ನೂ 15ದಿನಗಳ ಚಿತ್ರೀಕರಣ ಬಾಕಿಯಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಡಾ.ಅಭಿ 007’ ಚಿತ್ರದ ಪೋಸ್ಟರ್ನ್ನು ದ್ರುವ ಸರ್ಜಾ ಬಿಡುಗಡೆ ಮಾಡಿ ನಾಯಕ ವಿಷ್ಣು ಅವರಿಗೆ ಶುಭ ಹಾರೈಸಿದ್ದಾರೆ.ವಿಷ್ಣು ಅವರು ಈ ಚಿತ್ರದ ಮೂಲಕ ಪೂರ್ಣಪ್ರಮಾಣದ ನಾಯಕನಾಗಿ ಸಿನಿಮಾ ಕ್ಷೇತ್ರ ಪ್ರವೇಶಿಸಿದ್ದಾರೆ. ಈ ಹಿಂದೆ ಛಾಲೆಂಜಿಂಗ್ ಸ್ಟಾರ್ ದರ್ಶನ್ ಅವರೊಂದಿಗೆ ‘ಜಗ್ಗುದಾದಾ’ ಚಿತ್ರದಲ್ಲಿ ವಿಷ್ಣು ಅಭಿನಯಿಸಿದ್ದರು.</p>.<p>ಮೂಲತಃ ವೈದ್ಯರಾಗಿರುವ ಡಾ.ವೆಂಕಟೇಶ್ ಪ್ರಸಾದ್ ಈ ಚಿತ್ರದ ನಿರ್ದೇಶಕರು. ಹಿಂದಿ ಹಾಗೂ ಇಂಗ್ಲಿಷ್ನ ಕೆಲವು ವೆಬ್ ಸೀರಿಸ್ ಹಾಗೂ ಧಾರಾವಾಹಿಗಳಿಗೆ ಸಹಾಯಕ ನಿರ್ದೇಶನ ಮಾಡಿರುವ ಅನುಭವ ಇವರಿಗಿದೆ. ಹಿರಿತೆರೆಯಲ್ಲಿ ವೆಂಕಟೇಶ್ ಪ್ರಸಾದ್ ಅವರಿಗೆ ಚೊಚ್ಚಲ ನಿರ್ದೇಶನದ ಚಿತ್ರ.</p>.<p>ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಮೂರು ಹಾಡುಗಳಿದ್ದು, ಯು.ವಿ.ಸ್ಟೆವೆನ್ ಸತೀಶ್ ಸಂಗೀತ ನೀಡುತ್ತಿದ್ದಾರೆ. ಚೇತನ್ ಕುಮಾರ್ (ಭರ್ಜರಿ) ಗೀತರಚನೆ ಮಾಡಿದ್ದಾರೆ.</p>.<p>ಇನ್ಫೆಂಟ್ ಭರತ್ ಛಾಯಾಗ್ರಹಣ, ಅರುಣ್ ರೈ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಮೂರು ಸಾಹಸ ಸನ್ನಿವೇಶಗಳಿದ್ದು, ಅರ್ಜುನ್ ರಾಜ್, ಚಂದ್ರು ಬಂಡೆ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ.<br />ವಿಷ್ಣು ನಾಯಕನಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ವರ್ಧನ್, ಅದ್ವಿತಿ ಶೆಟ್ಟಿ, ಪ್ರಿಯಾಂಕ ಅರೋರ, ವೀಣಾ ಸುಂದರ್, ಸಿದ್ದು ಮೂಲಿಮನಿ, ಪ್ರಕಾಶ್ ತುಮ್ಮಿನಾಡ್, ನಾಗೇಂದ್ರ ಅರಸ್, ಬಲ ರಾಜವಾಡಿ, ಐಶ್ವರ್ಯ, ಶರ್ಮಿಳಾ, ಸುಚಿತ್, ಕುರಿ ರಂಗ, ಡಾ.ಸುಮಿತ್ ತಲ್ವಾರ್ ಇದ್ದಾರೆ.<br />ಈಗಾಗಲೇ 35 ದಿನಗಳ ಕಾಲ ಬೆಂಗಳೂರು, ತುಮಕೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಇನ್ನೂ 15ದಿನಗಳ ಚಿತ್ರೀಕರಣ ಬಾಕಿಯಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>