ಇನ್ಫೆಂಟ್ ಭರತ್ ಛಾಯಾಗ್ರಹಣ, ಅರುಣ್ ರೈ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಮೂರು ಸಾಹಸ ಸನ್ನಿವೇಶಗಳಿದ್ದು, ಅರ್ಜುನ್ ರಾಜ್, ಚಂದ್ರು ಬಂಡೆ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ.
ವಿಷ್ಣು ನಾಯಕನಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ವರ್ಧನ್, ಅದ್ವಿತಿ ಶೆಟ್ಟಿ, ಪ್ರಿಯಾಂಕ ಅರೋರ, ವೀಣಾ ಸುಂದರ್, ಸಿದ್ದು ಮೂಲಿಮನಿ, ಪ್ರಕಾಶ್ ತುಮ್ಮಿನಾಡ್, ನಾಗೇಂದ್ರ ಅರಸ್, ಬಲ ರಾಜವಾಡಿ, ಐಶ್ವರ್ಯ, ಶರ್ಮಿಳಾ, ಸುಚಿತ್, ಕುರಿ ರಂಗ, ಡಾ.ಸುಮಿತ್ ತಲ್ವಾರ್ ಇದ್ದಾರೆ.
ಈಗಾಗಲೇ 35 ದಿನಗಳ ಕಾಲ ಬೆಂಗಳೂರು, ತುಮಕೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಇನ್ನೂ 15ದಿನಗಳ ಚಿತ್ರೀಕರಣ ಬಾಕಿಯಿದೆ.