<p>ತರುಣ್ ಸುಧೀರ್ ನಿರ್ದೇಶಿಸಿ, ದರ್ಶನ್ ಅಭಿನಯಿಸಿರುವ ‘ಕಾಟೇರ’ ಚಿತ್ರದ ಟ್ರೇಲರ್ ಬಿಡುಗಡೆಗೊಂಡಿದೆ. ಮಾಸ್, ಆ್ಯಕ್ಷನ್ ಭರಿತ ಟ್ರೇಲರ್ನಲ್ಲಿ ಅಮಾಯಕ ಯುವಕನಾಗಿ, ಅನ್ಯಾಯದ ವಿರುದ್ಧ ಹೋರಾಡುವವನಾಗಿ, ರೈತರಿಗೆ ಸ್ಪೂರ್ತಿ ತುಂಬುವ ವ್ಯಕ್ತಿಯಾಗಿ ಹಲವು ಶೇಡ್ಗಳಲ್ಲಿ ದರ್ಶನ್ ಕಾಣಿಸಿಕೊಂಡಿದ್ದಾರೆ. </p>.<p>‘ಈ ಚಿತ್ರ ಇಂದಿರಾ ಗಾಂಧಿ ಕಾಲದ ಕಥೆ. 1974ರಲ್ಲಿ ಉಳುವವನೆ ಭೂಮಿಯ ಒಡೆಯ ಕಾನೂನು ಬಂದಾಗ ನಡೆದಿರುವ ಘಟನೆಯನ್ನು ಆಧರಿಸಿದೆ. ಆಗ ಬಾವಿಯೊಂದರಲ್ಲಿ ತುಂಬಾ ಜನರ ಮೂಳೆಗಳು ಸಿಕ್ಕಿದ್ದವು. ಆ ಮೂಳೆಗಳು ಯಾರವು ಎಂದು ಯಾರಿಗೂ ಗೊತ್ತಿಲ್ಲ. ಆ ಘಟನೆ ಕುರಿತು ಈ ಸಿನಿಮಾದಲ್ಲಿ ಹೇಳಲು ಹೊರಟಿದ್ದೇವೆ’ ಎಂದಿದ್ದಾರೆ ದರ್ಶನ್.</p>.<p>ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ನಡೆದ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಚಿತ್ರದ ಟ್ರೇಲರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. ರಾಕ್ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರ ಡಿ.29ರಂದು ತೆರೆ ಕಾಣುತ್ತಿದೆ. ಮಾಲಾಶ್ರೀ ಪುತ್ರಿ ಆರಾಧನಾ ದರ್ಶನ್ಗೆ ಜೋಡಿಯಾಗಿದ್ದಾರೆ. ಕುಮಾರ್ ಗೋವಿಂದ್, ಶ್ರುತಿ, ಜಗಪತಿ ಬಾಬು ಸೇರಿದಂತೆ ಹಲವು ನಟರು ಚಿತ್ರದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತರುಣ್ ಸುಧೀರ್ ನಿರ್ದೇಶಿಸಿ, ದರ್ಶನ್ ಅಭಿನಯಿಸಿರುವ ‘ಕಾಟೇರ’ ಚಿತ್ರದ ಟ್ರೇಲರ್ ಬಿಡುಗಡೆಗೊಂಡಿದೆ. ಮಾಸ್, ಆ್ಯಕ್ಷನ್ ಭರಿತ ಟ್ರೇಲರ್ನಲ್ಲಿ ಅಮಾಯಕ ಯುವಕನಾಗಿ, ಅನ್ಯಾಯದ ವಿರುದ್ಧ ಹೋರಾಡುವವನಾಗಿ, ರೈತರಿಗೆ ಸ್ಪೂರ್ತಿ ತುಂಬುವ ವ್ಯಕ್ತಿಯಾಗಿ ಹಲವು ಶೇಡ್ಗಳಲ್ಲಿ ದರ್ಶನ್ ಕಾಣಿಸಿಕೊಂಡಿದ್ದಾರೆ. </p>.<p>‘ಈ ಚಿತ್ರ ಇಂದಿರಾ ಗಾಂಧಿ ಕಾಲದ ಕಥೆ. 1974ರಲ್ಲಿ ಉಳುವವನೆ ಭೂಮಿಯ ಒಡೆಯ ಕಾನೂನು ಬಂದಾಗ ನಡೆದಿರುವ ಘಟನೆಯನ್ನು ಆಧರಿಸಿದೆ. ಆಗ ಬಾವಿಯೊಂದರಲ್ಲಿ ತುಂಬಾ ಜನರ ಮೂಳೆಗಳು ಸಿಕ್ಕಿದ್ದವು. ಆ ಮೂಳೆಗಳು ಯಾರವು ಎಂದು ಯಾರಿಗೂ ಗೊತ್ತಿಲ್ಲ. ಆ ಘಟನೆ ಕುರಿತು ಈ ಸಿನಿಮಾದಲ್ಲಿ ಹೇಳಲು ಹೊರಟಿದ್ದೇವೆ’ ಎಂದಿದ್ದಾರೆ ದರ್ಶನ್.</p>.<p>ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ನಡೆದ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಚಿತ್ರದ ಟ್ರೇಲರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. ರಾಕ್ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರ ಡಿ.29ರಂದು ತೆರೆ ಕಾಣುತ್ತಿದೆ. ಮಾಲಾಶ್ರೀ ಪುತ್ರಿ ಆರಾಧನಾ ದರ್ಶನ್ಗೆ ಜೋಡಿಯಾಗಿದ್ದಾರೆ. ಕುಮಾರ್ ಗೋವಿಂದ್, ಶ್ರುತಿ, ಜಗಪತಿ ಬಾಬು ಸೇರಿದಂತೆ ಹಲವು ನಟರು ಚಿತ್ರದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>