<p>ಸ್ಟಾರ್ ನಟರ ಸಿನಿಮಾಗಳಿಲ್ಲದ ಅವಧಿಯಲ್ಲಿ ಚಂದನವನದಲ್ಲಿ ಹೊಸಬರು ತಮ್ಮ ಅದೃಷ್ಟ ಪರೀಕ್ಷೆಗೆ ಇಳಿಯುತ್ತಿದ್ದಾರೆ. ಇಂದು (ಮೇ 17) ಎರಡು ಸಿನಿಮಾಗಳು ತೆರೆಗೆ ಬಂದಿವೆ.</p>.<p><strong>‘ದಿ ಸೂಟ್’:</strong> ‘ಸೂಟ್’ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಸುಜಯ್ ಆರ್ಯ ಅಭಿನಯಿಸಿದ್ದಾರೆ. ಮೂಲತಃ ಉದ್ಯಮಿಯಾಗಿರುವ ಸುಜಯ್ ಆರ್ಯ ಈ ಹಿಂದೆ ರಾಮನಾಥ್ ಋಗ್ವೇದಿ ನಿರ್ದೇಶನದ ‘ಅಧಿಕಾರ’ ಚಿತ್ರದಲ್ಲಿ ನಟಿಸಿದ್ದರು. ಭಗತ್ ರಾಜ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು, ಕಮಲ್, ಸುಜಯ್, ಮಂಜುನಾಥ್ ಪಾಟೀಲ್, ದೀಪ್ತಿ ಕಾಪ್ಸೆ, ಕುಸುಮ ರಾಮಯ್ಯ, ವಿ.ನಾಗೇಂದ್ರ ಪ್ರಸಾದ್, ಗಡ್ಡ ವಿಜಿ, ಉಮೇಶ್ ಬಣಕಾರ್ ಮುಂತಾದವರು ತಾರಾಬಳಗದಲ್ಲಿದ್ದಾರೆ. </p>.<p><strong>‘ರಣಹದ್ದು’:</strong> ಪ್ರಸನ್ನ ಕುಮಾರ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ಶಶಾಂಕ್ ಹಾಗೂ ಸೂರಜ್ ನಟಿಸಿದ್ದಾರೆ. ಇವರಿಬ್ಬರೂ ಪ್ರಸನ್ನ ಕುಮಾರ್ ಅವರ ಪುತ್ರರು. ಒಬ್ಬ ಮಗ ನಾಯಕನಾಗಿ, ಮತ್ತೊಬ್ಬ ಮಗ ಖಳನಾಯಕನಾಗಿ ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದಾರೆ. ಹಣವಿಲ್ಲದ ಮನುಷ್ಯರನ್ನು ಸಮಾಜ ಹೇಗೆ ನೋಡುತ್ತದೆ ಎಂಬುವುದು ಚಿತ್ರದ ಕಥಾಹಂದರ ಎಂದಿದೆ ಚಿತ್ರತಂಡ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸ್ಟಾರ್ ನಟರ ಸಿನಿಮಾಗಳಿಲ್ಲದ ಅವಧಿಯಲ್ಲಿ ಚಂದನವನದಲ್ಲಿ ಹೊಸಬರು ತಮ್ಮ ಅದೃಷ್ಟ ಪರೀಕ್ಷೆಗೆ ಇಳಿಯುತ್ತಿದ್ದಾರೆ. ಇಂದು (ಮೇ 17) ಎರಡು ಸಿನಿಮಾಗಳು ತೆರೆಗೆ ಬಂದಿವೆ.</p>.<p><strong>‘ದಿ ಸೂಟ್’:</strong> ‘ಸೂಟ್’ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಸುಜಯ್ ಆರ್ಯ ಅಭಿನಯಿಸಿದ್ದಾರೆ. ಮೂಲತಃ ಉದ್ಯಮಿಯಾಗಿರುವ ಸುಜಯ್ ಆರ್ಯ ಈ ಹಿಂದೆ ರಾಮನಾಥ್ ಋಗ್ವೇದಿ ನಿರ್ದೇಶನದ ‘ಅಧಿಕಾರ’ ಚಿತ್ರದಲ್ಲಿ ನಟಿಸಿದ್ದರು. ಭಗತ್ ರಾಜ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು, ಕಮಲ್, ಸುಜಯ್, ಮಂಜುನಾಥ್ ಪಾಟೀಲ್, ದೀಪ್ತಿ ಕಾಪ್ಸೆ, ಕುಸುಮ ರಾಮಯ್ಯ, ವಿ.ನಾಗೇಂದ್ರ ಪ್ರಸಾದ್, ಗಡ್ಡ ವಿಜಿ, ಉಮೇಶ್ ಬಣಕಾರ್ ಮುಂತಾದವರು ತಾರಾಬಳಗದಲ್ಲಿದ್ದಾರೆ. </p>.<p><strong>‘ರಣಹದ್ದು’:</strong> ಪ್ರಸನ್ನ ಕುಮಾರ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ಶಶಾಂಕ್ ಹಾಗೂ ಸೂರಜ್ ನಟಿಸಿದ್ದಾರೆ. ಇವರಿಬ್ಬರೂ ಪ್ರಸನ್ನ ಕುಮಾರ್ ಅವರ ಪುತ್ರರು. ಒಬ್ಬ ಮಗ ನಾಯಕನಾಗಿ, ಮತ್ತೊಬ್ಬ ಮಗ ಖಳನಾಯಕನಾಗಿ ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದಾರೆ. ಹಣವಿಲ್ಲದ ಮನುಷ್ಯರನ್ನು ಸಮಾಜ ಹೇಗೆ ನೋಡುತ್ತದೆ ಎಂಬುವುದು ಚಿತ್ರದ ಕಥಾಹಂದರ ಎಂದಿದೆ ಚಿತ್ರತಂಡ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>