<p>ರಾಮ್ ಪ್ರಸನ್ನ ಹುಣಸೂರು ನಿರ್ದೇಶನದ ‘ಕಡಲೂರ ಕಣ್ಮಣಿ’ ಚಿತ್ರಕ್ಕಾಗಿ ಮಧುರಾಮ್ ಅವರು ಬರೆದಿರುವ ‘ಎದೆಯೊಳಗೆ ಈ ಪ್ರೀತಿ ಶುರುವಾಯಿತು ನನಗೆ’ ಎಂಬ ಹಾಡು ಇತ್ತೀಚೆಗೆ ಎ2 ಮ್ಯೂಸಿಕ್ ಚಾನೆಲ್ ಮೂಲಕ ಬಿಡುಗಡೆಯಾಯಿತು.</p>.<p>ನನಗೆ ಹದಿನಾಲ್ಕು ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟು ಇದೆ.</p>.<p class="Subhead">ಚಿತ್ರ ಆರಂಭವಾದದ್ದು ಹೀಗೆ..</p>.<p>ನಿರ್ದೇಶಕ ರಾಮ್ ಪ್ರಸನ್ನ ಅವರು ಚಿತ್ರ ಆರಂಭವಾದ ಬಗೆಯನ್ನು ಹೀಗೆ ಹೇಳಿದರು.</p>.<p>‘ಜೀವನದಲ್ಲಿ ನೊಂದ ನಾನು ಆತ್ಮಹತ್ಯೆ ಮಾಡಿಕೊಳ್ಳಲು ಸಮುದ್ರದ ಬಳಿ ಹೋಗುತ್ತಿದೆ. ಇನ್ನೇನು ಆತ್ಮಹತ್ಯೆ ಮಾಡಿಕೊಳ್ಳಬೇಕು ಅನ್ನುವಷ್ಟರಲ್ಲಿ ಹಿಂದೆ ನನ್ನ ತಂದೆ-ತಾಯಿ ಕಂಡರು. ಆಗ ನಾನು ನನ್ನ ನಿರ್ಧಾರದಿಂದ ಹಿಂದೆ ಸರಿದೆ. ಈ ಸಿನಿಮಾದ ನಿರ್ಮಾಪಕರು ನನ್ನ ಸ್ನೇಹಿತರು. ಅವರೆಲ್ಲಾ ನನ್ನ ಪ್ರೋತ್ಸಾಹಕ್ಕೆ ನಿಂತರು. ಈ ಸಿನಿಮಾ ಆರಂಭವಾಯಿತು. ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಬಿರುಸಿನಿಂದ ಸಾಗಿದೆ’ ಎಂದರು ಅವರು.</p>.<p>‘‘ಕಡಲೂರ ಕಣ್ಮಣಿ’ ಯನ್ನು ನಾನು ವಜ್ರ ಎನ್ನುತ್ತೇನೆ. ಈ ಸಿನಿಮಾದ ಕೊನೆಯ ಇಪ್ಪತ್ತು ನಿಮಿಷ ಎಲ್ಲರ ಕಣ್ಣಲ್ಲೂ ನೀರು ತರಿಸುತ್ತದೆ. ಇದರ ಕಥೆ ಈಗಲೇ ಪೂರ್ತಿ ಹೇಳಲಾಗದು. ನಿರ್ಮಾಪಕರ ಒತ್ತಾಯಕ್ಕೆ ಮಣಿದು ನಾನೇ ಸಂಗೀತ ನಿರ್ದೇಶನ ಮಾಡಿದ್ದೇನೆ’ ಎಂದರು ನಿರ್ದೇಶಕರು.</p>.<p>‘ನನಗೆ ನನ್ನ ಸ್ನೇಹಿತನ ಮೂಲಕ ನಿರ್ದೇಶಕರು ಪರಿಚಯವಾದರು. ಸ್ವಲ್ಪ ಸಮಯ ಅವರೊಡನೆ ಮಾತನಾಡಿದೆ. ನೀವೇನಮ್ಮ ಸಿನಿಮಾದ ಹೀರೋ ಎಂದರು. ಚಿತ್ರದಲ್ಲಿ ನನ್ನ ಪಾತ್ರ ಚೆನ್ನಾಗಿದೆ. ಸಹಕಾರ ನೀಡಿದ ಇಡೀ ತಂಡಕ್ಕೆ ಧನ್ಯವಾದ’ ಎಂದರು ನಾಯಕ ಅರ್ಜುನ್.</p>.<p>ನಿರ್ಮಾಪಕರಾದ ವಿನೋದ್ ರಾಮ್ ಹೊಳೆನರಸೀಪುರ, ಕೊಳ ಶೈಲೇಶ್ ಆರ್. ಪೂಜಾರ್, ಸಹ ನಿರ್ಮಾಪಕ ಬಸವರಾಜ ಗಚ್ಚಿ, ಹಾಡು ಬರೆದಿರುವ ಮಧುರಾಮ್, ಕಿರಣ್ ದೇವಲಾಪುರ ಹಾಗೂ ಛಾಯಾಗ್ರಾಹಕರಾದ ಮನೋಹರ್ ಹಾಗೂ ರವಿರಾಮ್ ಚಿತ್ರದ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮ್ ಪ್ರಸನ್ನ ಹುಣಸೂರು ನಿರ್ದೇಶನದ ‘ಕಡಲೂರ ಕಣ್ಮಣಿ’ ಚಿತ್ರಕ್ಕಾಗಿ ಮಧುರಾಮ್ ಅವರು ಬರೆದಿರುವ ‘ಎದೆಯೊಳಗೆ ಈ ಪ್ರೀತಿ ಶುರುವಾಯಿತು ನನಗೆ’ ಎಂಬ ಹಾಡು ಇತ್ತೀಚೆಗೆ ಎ2 ಮ್ಯೂಸಿಕ್ ಚಾನೆಲ್ ಮೂಲಕ ಬಿಡುಗಡೆಯಾಯಿತು.</p>.<p>ನನಗೆ ಹದಿನಾಲ್ಕು ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟು ಇದೆ.</p>.<p class="Subhead">ಚಿತ್ರ ಆರಂಭವಾದದ್ದು ಹೀಗೆ..</p>.<p>ನಿರ್ದೇಶಕ ರಾಮ್ ಪ್ರಸನ್ನ ಅವರು ಚಿತ್ರ ಆರಂಭವಾದ ಬಗೆಯನ್ನು ಹೀಗೆ ಹೇಳಿದರು.</p>.<p>‘ಜೀವನದಲ್ಲಿ ನೊಂದ ನಾನು ಆತ್ಮಹತ್ಯೆ ಮಾಡಿಕೊಳ್ಳಲು ಸಮುದ್ರದ ಬಳಿ ಹೋಗುತ್ತಿದೆ. ಇನ್ನೇನು ಆತ್ಮಹತ್ಯೆ ಮಾಡಿಕೊಳ್ಳಬೇಕು ಅನ್ನುವಷ್ಟರಲ್ಲಿ ಹಿಂದೆ ನನ್ನ ತಂದೆ-ತಾಯಿ ಕಂಡರು. ಆಗ ನಾನು ನನ್ನ ನಿರ್ಧಾರದಿಂದ ಹಿಂದೆ ಸರಿದೆ. ಈ ಸಿನಿಮಾದ ನಿರ್ಮಾಪಕರು ನನ್ನ ಸ್ನೇಹಿತರು. ಅವರೆಲ್ಲಾ ನನ್ನ ಪ್ರೋತ್ಸಾಹಕ್ಕೆ ನಿಂತರು. ಈ ಸಿನಿಮಾ ಆರಂಭವಾಯಿತು. ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಬಿರುಸಿನಿಂದ ಸಾಗಿದೆ’ ಎಂದರು ಅವರು.</p>.<p>‘‘ಕಡಲೂರ ಕಣ್ಮಣಿ’ ಯನ್ನು ನಾನು ವಜ್ರ ಎನ್ನುತ್ತೇನೆ. ಈ ಸಿನಿಮಾದ ಕೊನೆಯ ಇಪ್ಪತ್ತು ನಿಮಿಷ ಎಲ್ಲರ ಕಣ್ಣಲ್ಲೂ ನೀರು ತರಿಸುತ್ತದೆ. ಇದರ ಕಥೆ ಈಗಲೇ ಪೂರ್ತಿ ಹೇಳಲಾಗದು. ನಿರ್ಮಾಪಕರ ಒತ್ತಾಯಕ್ಕೆ ಮಣಿದು ನಾನೇ ಸಂಗೀತ ನಿರ್ದೇಶನ ಮಾಡಿದ್ದೇನೆ’ ಎಂದರು ನಿರ್ದೇಶಕರು.</p>.<p>‘ನನಗೆ ನನ್ನ ಸ್ನೇಹಿತನ ಮೂಲಕ ನಿರ್ದೇಶಕರು ಪರಿಚಯವಾದರು. ಸ್ವಲ್ಪ ಸಮಯ ಅವರೊಡನೆ ಮಾತನಾಡಿದೆ. ನೀವೇನಮ್ಮ ಸಿನಿಮಾದ ಹೀರೋ ಎಂದರು. ಚಿತ್ರದಲ್ಲಿ ನನ್ನ ಪಾತ್ರ ಚೆನ್ನಾಗಿದೆ. ಸಹಕಾರ ನೀಡಿದ ಇಡೀ ತಂಡಕ್ಕೆ ಧನ್ಯವಾದ’ ಎಂದರು ನಾಯಕ ಅರ್ಜುನ್.</p>.<p>ನಿರ್ಮಾಪಕರಾದ ವಿನೋದ್ ರಾಮ್ ಹೊಳೆನರಸೀಪುರ, ಕೊಳ ಶೈಲೇಶ್ ಆರ್. ಪೂಜಾರ್, ಸಹ ನಿರ್ಮಾಪಕ ಬಸವರಾಜ ಗಚ್ಚಿ, ಹಾಡು ಬರೆದಿರುವ ಮಧುರಾಮ್, ಕಿರಣ್ ದೇವಲಾಪುರ ಹಾಗೂ ಛಾಯಾಗ್ರಾಹಕರಾದ ಮನೋಹರ್ ಹಾಗೂ ರವಿರಾಮ್ ಚಿತ್ರದ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>