ಭಾನುವಾರ, ಏಪ್ರಿಲ್ 2, 2023
32 °C

ಚಿತ್ರೀಕರಣ ಸ್ಥಳ ನೋಡಲು ಲಡಾಖ್‌ಗೆ ಹೋಗಿದ್ದಾಗ ಅನಾರೋಗ್ಯ: ಕನ್ನಡದ ನಟ ಧನುಷ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಚಂದನವನದ ನಟ ಧನುಷ್‌(40) ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ.

ಮುತ್ತುರಾಜ್‌ ಇವರ ಮೂಲ ಹೆಸರು. ‘ಪ್ಯಾರ್ ಕಾ ಗೋಲ್‌ಗುಂಬಜ್‌’, ‘ಕೊಟ್ಲಲ್ಲಪ್ಪೋ ಕೈ’ ‘ಸಂಪಿಗೆ ಹಳ್ಳಿ’, ನಟ ಶಿವರಾಜ್‌ಕುಮಾರ್‌ ಅವರ ‘ಲೀಡರ್’ ಸಿನಿಮಾ, ‘ಸ್ನೇಹಿತ’ ಸಿನಿಮಾ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಇವರು ನಟಿಸಿದ್ದರು. ಕಳೆದ 15 ವರ್ಷದಿಂದ ಧನುಷ್‌ ಚಿತ್ರರಂಗದಲ್ಲಿದ್ದರು. 

ತಮ್ಮ ಮುಂದಿನ ಪ್ರಾಜೆಕ್ಟ್‌ನ ಚಿತ್ರೀಕರಣಕ್ಕಾಗಿ ಸ್ಥಳ ಹುಡುಕಲು ಇತ್ತೀಚೆಗೆ ಅವರು ಲಡಾಖ್‌ಗೆ ತೆರಳಿದ್ದರು. ಈ ವೇಳೆ ಅಲ್ಲಿನ ವಾತಾವರಣದಿಂದಾಗಿ ಧನುಷ್‌ ಆರೋಗ್ಯ ಸಮಸ್ಯೆ ಎದುರಿಸಿದ್ದರು. ಅವರನ್ನು ವಾರದ ಹಿಂದೆ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ರಾತ್ರಿ 10:45ಕ್ಕೆ ಅವರು ನಿಧನರಾಗಿದ್ದಾರೆ. ಗುರುವಾರ ರಾತ್ರಿ ಬಾಗಲಕೋಟೆ ಜಿಲ್ಲೆಯ ಕೋಡಿಹಾಳ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು