<p>ಜನಪ್ರಿಯ ನಿರ್ದೇಶಕ ಕೋಡ್ಲು ರಾಮಕೃಷ್ಣ ಒಂದು ಸಣ್ಣ ವಿರಾಮದ ಬಳಿಕ ಮತ್ತೊಂದು ಚಿತ್ರ ಪ್ರಾರಂಭಿಸಿದ್ದಾರೆ. ಭಾಗ್ಯ ಕೆ.ಮೂರ್ತಿ ಅವರ ಸ್ವಾತಂತ್ರ್ಯಪೂರ್ವ ಕಾದಂಬರಿ ಆಧಾರಿತ ಚಿತ್ರಕ್ಕೆ ‘ಶಾನುಭೋಗರ ಮಗಳು’ ಎಂದು ಹೆಸರಿಡಲಾಗಿದೆ. ನಟ ಪ್ರಜ್ವಲ್ ದೇವರಾಜ್ ಪತ್ನಿ ರಾಗಿಣಿ ಪ್ರಜ್ವಲ್ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.</p>.<p>‘ಚಿತ್ರದಲ್ಲಿ ಬ್ರಿಟಿಷರು, ಟಿಪ್ಪು ಸುಲ್ತಾನ್ ಹಾಗೂ ಮೈಸೂರಿನ ಮಹಾರಾಜರುಗಳೊಂದಿಗಿನ ಸನ್ನಿವೇಶಗಳು ಹೆಚ್ಚಿವೆ. ‘ಶಾನುಭೋಗರ ಮಗಳ’ ಪಾತ್ರ ನಿರ್ವಹಿಸುತ್ತಿರುವ ರಾಗಿಣಿ ಪ್ರಜ್ವಲ್ ನಾಲ್ಕಾರು ಬ್ರಿಟಿಷರನ್ನು ಗುಂಡಿಟ್ಟು ಸಾಯಿಸುವ ದೃಶ್ಯವನ್ನು ಇತ್ತೇಚಿಗೆ ಶ್ರೀರಂಗ ಪಟ್ಟಣ, ಮೇಲುಕೋಟೆ, ಕುಂತಿ ಬೆಟ್ಟದ ಸುತ್ತಮುತ್ತ ಚಿತ್ರೀಕರಿಸಲಾಯಿತು’ ಎಂದಿದೆ ಚಿತ್ರತಂಡ. </p>.<p>ಟಿಪ್ಪು ಸುಲ್ತಾನ್ ಪಾತ್ರದಲ್ಲಿ ಕಿಶೋರ್ ಅಭಿನಯಿಸುತ್ತಿದ್ದು, ರಮೇಶ್ಭಟ್, ಸುಧಾ ಬೆಳವಾಡಿ, ಪದ್ಮಾ ವಾಸಂತಿ, ವಾಣಿಶ್ರೀ, ಭಾಗ್ಯಶ್ರೀ, ಕುಮಾರಿ ಅನನ್ಯ, ಟಿ.ಎನ್.ಶ್ರೀನಿವಾಸ ಮೂರ್ತಿ, ನಿರಂಜನ ಶೆಟ್ಟಿ ಪ್ರಮುಖ ಪಾತ್ರದಲ್ಲಿದ್ದಾರೆ. ಡಾ.ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ಜೈ ಆನಂದ್ ಛಾಯಾಗ್ರಹಣ, ಕೆಂಪರಾಜ್ ಸಂಕಲನ ಚಿತ್ರಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜನಪ್ರಿಯ ನಿರ್ದೇಶಕ ಕೋಡ್ಲು ರಾಮಕೃಷ್ಣ ಒಂದು ಸಣ್ಣ ವಿರಾಮದ ಬಳಿಕ ಮತ್ತೊಂದು ಚಿತ್ರ ಪ್ರಾರಂಭಿಸಿದ್ದಾರೆ. ಭಾಗ್ಯ ಕೆ.ಮೂರ್ತಿ ಅವರ ಸ್ವಾತಂತ್ರ್ಯಪೂರ್ವ ಕಾದಂಬರಿ ಆಧಾರಿತ ಚಿತ್ರಕ್ಕೆ ‘ಶಾನುಭೋಗರ ಮಗಳು’ ಎಂದು ಹೆಸರಿಡಲಾಗಿದೆ. ನಟ ಪ್ರಜ್ವಲ್ ದೇವರಾಜ್ ಪತ್ನಿ ರಾಗಿಣಿ ಪ್ರಜ್ವಲ್ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.</p>.<p>‘ಚಿತ್ರದಲ್ಲಿ ಬ್ರಿಟಿಷರು, ಟಿಪ್ಪು ಸುಲ್ತಾನ್ ಹಾಗೂ ಮೈಸೂರಿನ ಮಹಾರಾಜರುಗಳೊಂದಿಗಿನ ಸನ್ನಿವೇಶಗಳು ಹೆಚ್ಚಿವೆ. ‘ಶಾನುಭೋಗರ ಮಗಳ’ ಪಾತ್ರ ನಿರ್ವಹಿಸುತ್ತಿರುವ ರಾಗಿಣಿ ಪ್ರಜ್ವಲ್ ನಾಲ್ಕಾರು ಬ್ರಿಟಿಷರನ್ನು ಗುಂಡಿಟ್ಟು ಸಾಯಿಸುವ ದೃಶ್ಯವನ್ನು ಇತ್ತೇಚಿಗೆ ಶ್ರೀರಂಗ ಪಟ್ಟಣ, ಮೇಲುಕೋಟೆ, ಕುಂತಿ ಬೆಟ್ಟದ ಸುತ್ತಮುತ್ತ ಚಿತ್ರೀಕರಿಸಲಾಯಿತು’ ಎಂದಿದೆ ಚಿತ್ರತಂಡ. </p>.<p>ಟಿಪ್ಪು ಸುಲ್ತಾನ್ ಪಾತ್ರದಲ್ಲಿ ಕಿಶೋರ್ ಅಭಿನಯಿಸುತ್ತಿದ್ದು, ರಮೇಶ್ಭಟ್, ಸುಧಾ ಬೆಳವಾಡಿ, ಪದ್ಮಾ ವಾಸಂತಿ, ವಾಣಿಶ್ರೀ, ಭಾಗ್ಯಶ್ರೀ, ಕುಮಾರಿ ಅನನ್ಯ, ಟಿ.ಎನ್.ಶ್ರೀನಿವಾಸ ಮೂರ್ತಿ, ನಿರಂಜನ ಶೆಟ್ಟಿ ಪ್ರಮುಖ ಪಾತ್ರದಲ್ಲಿದ್ದಾರೆ. ಡಾ.ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ಜೈ ಆನಂದ್ ಛಾಯಾಗ್ರಹಣ, ಕೆಂಪರಾಜ್ ಸಂಕಲನ ಚಿತ್ರಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>