ನಿರ್ಮಾಪಕ ವಿಜಯ ಕಿರಗಂದೂರ್ ಅವರ ಸಹೊದರ ಮಂಜುನಾಥ್ ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿದರು. ಉದ್ಯಮಿ ಉದಯ ಶೆಟ್ಟಿ ಕ್ಯಾಮೆರಾಕ್ಕೆ ಚಾಲನೆ ನೀಡಿದರು.ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಅರವಿಂದ್ ಕಶ್ಯಪ್ ಅವರ ಛಾಯಾಗ್ರಹಣವಿದೆ.ಕೆರಾಡಿ ಮತ್ತು ಹೆಮ್ಮಾಡಿ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಈ ವರ್ಷಾಂತ್ಯಕ್ಕೆ ಚಿತ್ರ ನಿರ್ಮಾಣ ಮುಕ್ತಾಯಗೊಳ್ಳಲಿದೆ ಎಂದು ಹೊಂಬಾಳೆ ಫಿಲ್ಮ್ಸ್ ತಿಳಿಸಿದೆ.