ಇದಕ್ಕೂ ಮೊದಲು ಮಾತನಾಡಿದ ನಿರ್ಮಾಪಕಿ ಗೀತಾ ಶಿವರಾಜ್ಕುಮಾರ್, ‘ಅಭಿಮಾನಿಗಳ ಅಪೇಕ್ಷೆಯಂತೆ ಈ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ. ಪ್ರೇಕ್ಷಕರು ಅದಕ್ಕೆ ಉತ್ತಮ ರೀತಿಯಲ್ಲಿ ಸ್ಪಂದಿಸಿ, ಚಿತ್ರ ಯಶಸ್ವಿಗೊಳಿಸಿದ್ದಾರೆ. ಹೀಗಾಗಿ ಅವರೆಲ್ಲರಿಗೂ ಧನ್ಯವಾದ ತಿಳಿಸಲು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತಿದ್ದೇವೆ’ ಎಂದರು.