‘ಈ ಪ್ರಶಸ್ತಿಗಳು ಯಾರಿಗೆ ಸಲ್ಲಬೇಕೋ ಅವರಿಗೆ ಸಲ್ಲಲಿ. ಮಿಕ್ಕಿದವರೆಲ್ಲಾ ದುಡ್ಡು ಮಾಡುತ್ತಿದ್ದಾರೆ. ಪ್ರಶಸ್ತಿ, ದುಡ್ಡು ಎಂದು ನೋಡಿದಾಗ ಪ್ರಶಸ್ತಿ ಬಿಟ್ಟು ದುಡ್ಡಿಗೆ ಕೈ ಹಾಕುವವರು ಇದ್ದಾರೆ. ಪ್ರಶಸ್ತಿಗೆ ಗೌರವ ಕೊಟ್ಟು ಅದಕ್ಕಾಗಿ ಬಾಳಿ ಬದುಕುವವರಿಗೆ ನೀಡಿ. ನಂದಿ ಬಹಳ ಶ್ರೇಷ್ಠ. ಆ ಹೆಸರಲ್ಲಿ ಪ್ರಶಸ್ತಿ ನೀಡುತ್ತಿದ್ದೀರಿ ಎಂದರೆ, ಅದು ಅಷ್ಟೇ ಶುದ್ಧವಾಗಿರಲಿ’ ಎಂದು ಸುದೀಪ್ ಹಾರೈಸಿದರು. ನಂದಿ ಪ್ರಶಸ್ತಿಯಲ್ಲಿ ಕನ್ನಡ ಸಿನಿಮಾಗಳು, ಪ್ರಾದೇಶಿಕ ಭಾಷೆಗಳಾದ ತುಳು, ಕೊಡವ, ಕೊಂಕಣಿ, ಬ್ಯಾರಿ ಹಾಗೂ ಬಂಜಾರ ಈ ಭಾಷೆಗಳ ಸಿನಿಮಾಗಳಿಗೂ ಪ್ರಾಮುಖ್ಯ ನೀಡಲಾಗಿದೆ. ಸಾಹಿತ್ಯ, ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳಿಗೂ ಪ್ರಶಸ್ತಿ ನೀಡಲಾಗುತ್ತದೆ. 50ಕ್ಕೂ ಹೆಚ್ಚು ವಿಭಾಗದ ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ.