<p>‘ಅರಸಯ್ಯನ ಪ್ರೇಮ ಪ್ರಸಂಗ’ಚಿತ್ರದ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಗಿದೆ.ಮೇಘಶ್ರೀ ರಾಜೇಶ್ ಅವರು ರಾಜ್ ಕಮಲ ಪಿಕ್ಚರ್ಸ್ ಲಾಂಛನದಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದು ಅವರ ನಿರ್ಮಾಣದ ಮೊದಲ ಚಿತ್ರ. ಮೇಘಶ್ರೀ ಅವರಿಗೆ ಚಿತ್ರ ನಿರ್ಮಾಣಕ್ಕೆ ಪತಿ, ಲೆಕ್ಕ ಪರಿಶೋಧಕ ರಾಜೇಶ್ ಸಾಥ್ ನೀಡಿದ್ದಾರೆ.</p>.<p>ಪೋಸ್ಟರ್ ಅನ್ನು ನಟ ರಾಘವೇಂದ್ರ ರಾಜ್ಕುಮಾರ್ ಹಾಗೂ ಮಂಗಳಾ ರಾಜ್ಕುಮಾರ್ ಬಿಡುಗಡೆ ಮಾಡಿದರು. ‘ಫ್ರೆಂಚ್ ಬಿರಿಯಾನಿ’, ‘ಗುರು ಶಿಷ್ಯರು’ ಚಿತ್ರದ ಮೂಲಕ ಎಲ್ಲರ ಮನ ಸೆಳೆದಿರುವ ಮಹಂತೇಶ್ ಹಿರೇಮಠ ಪ್ರಮುಖ ಪಾತ್ರದಲ್ಲಿದ್ದಾರೆ.</p>.<p>ಜೆ.ವಿ.ಆರ್. ದೀಪು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಸನ, ಗೋರೂರಿನ ಸುತ್ತಮುತ್ತಲ್ಲಿನ ಪರಿಸರದಲ್ಲಿ ಚಿತ್ರೀಕರಣವಾಗಿದೆ.</p>.<p>ಐದು ಹಾಡುಗಳಿವೆ. ಪ್ರವೀಣ್ - ಪ್ರದೀಪ್ ಸಂಗೀತ ನೀಡಿದ್ದಾರೆ. ಗುರುಪ್ರಸಾದ್ ನಾರ್ನಾಡ್ ಛಾಯಾಗ್ರಹಣ, ಸುನೀಲ್ ಕಶ್ಯಪ್ ಸಂಕಲನವಿರುವ ಈ ಚಿತ್ರಕ್ಕೆ ಹರೀಶ್ ಹಾಗೂ ಜಿ.ವಿ.ಆರ್. ದೀಪು ಸಂಭಾಷಣೆ ಬರೆದಿದ್ದಾರೆ. ರಶ್ಮಿತಾ ಗೌಡ, ವಿಜಯ್ ಚೆಂಡೂರ್, ಪಿ.ಡಿ.ಸತೀಶ್, ರಘು ರಮಣಕೊಪ್ಪ, ಜಹಂಗೀರ್ ಮುಂತಾದವರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಅರಸಯ್ಯನ ಪ್ರೇಮ ಪ್ರಸಂಗ’ಚಿತ್ರದ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಗಿದೆ.ಮೇಘಶ್ರೀ ರಾಜೇಶ್ ಅವರು ರಾಜ್ ಕಮಲ ಪಿಕ್ಚರ್ಸ್ ಲಾಂಛನದಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದು ಅವರ ನಿರ್ಮಾಣದ ಮೊದಲ ಚಿತ್ರ. ಮೇಘಶ್ರೀ ಅವರಿಗೆ ಚಿತ್ರ ನಿರ್ಮಾಣಕ್ಕೆ ಪತಿ, ಲೆಕ್ಕ ಪರಿಶೋಧಕ ರಾಜೇಶ್ ಸಾಥ್ ನೀಡಿದ್ದಾರೆ.</p>.<p>ಪೋಸ್ಟರ್ ಅನ್ನು ನಟ ರಾಘವೇಂದ್ರ ರಾಜ್ಕುಮಾರ್ ಹಾಗೂ ಮಂಗಳಾ ರಾಜ್ಕುಮಾರ್ ಬಿಡುಗಡೆ ಮಾಡಿದರು. ‘ಫ್ರೆಂಚ್ ಬಿರಿಯಾನಿ’, ‘ಗುರು ಶಿಷ್ಯರು’ ಚಿತ್ರದ ಮೂಲಕ ಎಲ್ಲರ ಮನ ಸೆಳೆದಿರುವ ಮಹಂತೇಶ್ ಹಿರೇಮಠ ಪ್ರಮುಖ ಪಾತ್ರದಲ್ಲಿದ್ದಾರೆ.</p>.<p>ಜೆ.ವಿ.ಆರ್. ದೀಪು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಸನ, ಗೋರೂರಿನ ಸುತ್ತಮುತ್ತಲ್ಲಿನ ಪರಿಸರದಲ್ಲಿ ಚಿತ್ರೀಕರಣವಾಗಿದೆ.</p>.<p>ಐದು ಹಾಡುಗಳಿವೆ. ಪ್ರವೀಣ್ - ಪ್ರದೀಪ್ ಸಂಗೀತ ನೀಡಿದ್ದಾರೆ. ಗುರುಪ್ರಸಾದ್ ನಾರ್ನಾಡ್ ಛಾಯಾಗ್ರಹಣ, ಸುನೀಲ್ ಕಶ್ಯಪ್ ಸಂಕಲನವಿರುವ ಈ ಚಿತ್ರಕ್ಕೆ ಹರೀಶ್ ಹಾಗೂ ಜಿ.ವಿ.ಆರ್. ದೀಪು ಸಂಭಾಷಣೆ ಬರೆದಿದ್ದಾರೆ. ರಶ್ಮಿತಾ ಗೌಡ, ವಿಜಯ್ ಚೆಂಡೂರ್, ಪಿ.ಡಿ.ಸತೀಶ್, ರಘು ರಮಣಕೊಪ್ಪ, ಜಹಂಗೀರ್ ಮುಂತಾದವರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>