ಅಗಸ್ತ್ಯ ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಅವರೇ ನಾಯಕನಾಗಿ ನಟಿಸಿದ್ದಾರೆ. ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಮಾಸ್ ಕಂಟೆಂಟ್ ಸಿನಿಮಾ ಎಂದಿದೆ ಚಿತ್ರತಂಡ. ಕಥೆ, ಚಿತ್ರಕಥೆ, ಸಂಭಾಷಣೆಯನ್ನೂ ಅಗಸ್ತ್ಯ ಬರೆದಿದ್ದಾರೆ. ರಾಧಾ ಫಿಲಂಸ್ ಬ್ಯಾನರ್ನಡಿ ಚಿತ್ರ ನಿರ್ಮಾಣಗೊಂಡಿದೆ.
ಭಿನ್ನವಾದ ಕಥೆಯೊಂದನ್ನು ಕನ್ನಡದ ಪ್ರೇಕ್ಷಕರ ಎದುರಿಗೆ ತರುತ್ತಿದ್ದೇನೆ ಎಂದಿದ್ದಾರೆ ನಿರ್ದೇಶಕ.
ಮಹಾಲಕ್ಷ್ಮಿ, ಕಾಕ್ರೋಚ್ ಸುಧಿ, ವರ್ಧನ್, ಪ್ರದೀಪ್ ಪೂಜಾರಿ, ಬೆನಕ ನಂಜಪ್ಪ ಮುಂತಾದವರು ತಾರಾಬಳಗದಲ್ಲಿದ್ದಾರೆ. ಚಿತ್ರಕ್ಕೆ ಜಗದೀಶ್ ಗೌಡ ಛಾಯಾಚಿತ್ರಗ್ರಹಣ, ಸ್ವಾಮಿನಾಥನ್ ಆರ್.ಕೆ ಸಂಗೀತ ನಿರ್ದೇಶನ, ಜಗದೀಶ್ ಗೌಡ ಸಂಕಲನವಿದೆ.