ನಂತರ ಮಾತನಾಡಿದ ಚಿತ್ರದ ನಿರ್ಮಾಪಕ ವಿಜಯ್ ಕುಮಾರ್, ‘ನಿರ್ದೇಶಕರು ಕಥೆ ಹೇಳಿದಾಗ ಸಿನಿಮಾ ಮಾಡುವ ಆಸೆ ಬಂತು. ಈ ಚಿತ್ರದ ನಾಯಕ ಕಾರ್ತಿಕ್ ನಮ್ಮ ಅಣ್ಣನ ಮಗ. ಶ್ರೀಲಕ್ಷ್ಮಿ ನರಸಿಂಹ ಮೂವೀಸ್ ಬ್ಯಾನರ್ನಲ್ಲಿ ಮೊದಲಬಾರಿಗೆ ನಿರ್ಮಾಣ ಮಾಡಲಾಗಿದೆ. ಈ ಚಿತ್ರವನ್ನು ಮೊದಲು ಕನ್ನಡದಲ್ಲಿ ಬಿಡುಗಡೆ ಮಾಡಿ, ನಂತರದ ದಿನಗಳಲ್ಲಿ ಬೇರೆ ಭಾಷೆಗಳಲ್ಲಿ ಬಿಡುಗಡೆ ಮಾಡುವ ಯೋಜನೆ ಇದೆ. ಸಿನಿಮಾ ಕನ್ನಡ, ತಮಿಳು, ತೆಲಗು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ತಯಾರಾಗಿದೆ. ಕಥೆಯಲ್ಲಿ ಕಾಮಿಡಿ, ಹಾರರ್, ಆ್ಯಕ್ಷನ್ ಸೇರಿದಂತೆ ಎಲ್ಲಾ ಅಂಶಗಳಿದ್ದು, ಸಿನಿಮಾ ಜನರಿಗೆ ಇಷ್ಟವಾಗಲಿದೆ’ ಎಂದು ಹೇಳಿದರು.