ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮೆಲ್ಲಗೆ’ ಬಂದ ‘ಸ್ವಾತಿ ಮುತ್ತಿನ...’ ಹಾಡು

Published 7 ನವೆಂಬರ್ 2023, 23:30 IST
Last Updated 7 ನವೆಂಬರ್ 2023, 23:30 IST
ಅಕ್ಷರ ಗಾತ್ರ

ರಾಜ್‌ ಬಿ.ಶೆಟ್ಟಿ ಹಾಗೂ ಸಿರಿ ರವಿಕುಮಾರ್‌ ನಟನೆಯ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಸಿನಿಮಾದ ಮೊದಲ ಹಾಡು ‘ಮೆಲ್ಲಗೆ..’ ಬಿಡುಗಡೆಯಾಗಿದೆ. 

ರಾಜ್‍ ಬಿ. ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಸಿನಿಮಾವನ್ನು ನಟಿ ರಮ್ಯಾ ಅವರು ತಮ್ಮ ಆ್ಯಪಲ್‌ ಬಾಕ್ಸ್ ಸ್ಟುಡಿಯೊಸ್‍ ಮೂಲಕ ನಿರ್ಮಿಸಿದ್ದಾರೆ. ಲೈಟರ್‌ ಬುದ್ಧ ಫಿಲಂಸ್‍ ಸಹಯೋಗದೊಂದಿಗೆ ನಿರ್ಮಾಣವಾಗಿರುವ ಈ ಚಿತ್ರವನ್ನು ನ.24ರಂದು ಕೆ.ಆರ್.ಜಿ. ಸ್ಟುಡಿಯೋಸ್‍ ಸಂಸ್ಥೆಯು ಬಿಡುಗಡೆ ಮಾಡುತ್ತಿದೆ.

‘ಮೆಲ್ಲಗೆ’ ಹಾಡಿಗೆ ಮಿಥುನ್‍ ಮುಕುಂದನ್‍ ಸಂಗೀತ ಸಂಯೋಜಿಸಿದ್ದು, ಮಾಧುರಿ ಶೇಷಾದ್ರಿ ಹಾಡಿದ್ದಾರೆ. ಇನ್ನು, ಮಂಗಳೂರಿನ  ಪೃಥ್ವಿ ಎಂಬಾಕೆ ಈ ಹಾಡನ್ನು ಬರೆದಿದ್ದಾರೆ. ‘ಇದು ಪ್ರೀತಿಯ ಕುರಿತ ಮಹಿಳೆಯೊಬ್ಬರ ದೃಷ್ಟಿಕೋನದ ಹಾಡು. ಹೀಗಾಗಿ ಹುಡುಗಿಯೊಬ್ಬಳು ಬರೆದರೆ ಸೂಕ್ತವಾಗಿರುತ್ತದೆ ಎಂದು ಆಕೆಯಿಂದ ಬರೆಸಿದೆ’ ಎನ್ನುತ್ತಾರೆ ರಾಜ್‌. ಶಾಸ್ತ್ರೀಯ ಸಂಗೀತದ ಸ್ಪರ್ಶ ಈ ಹಾಡಿನಲ್ಲಿದೆ. 

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದಲ್ಲಿ ರಾಜ್‍ ಮತ್ತು ಸಿರಿ ಜೊತೆಗೆ ಬಾಲಾಜಿ ಮನೋಹರ್‌, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಜೆ.ಪಿ. ತುಮ್ಮಿನಾಡು, ಸ್ನೇಹ ಶರ್ಮಾ ಮುಂತಾದವರು ಅಭಿನಯಿಸಿದ್ದಾರೆ. ಪ್ರವೀಣ್‍ ಶ್ರೀಯಾನ್‍ ಈ ಚಿತ್ರದ ಛಾಯಾಚಿತ್ರಗ್ರಹಣದ ಜೊತೆಗೆ ಸಂಕಲನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT