<p>2004ರಲ್ಲಿ ಮಾಲಾಶ್ರೀ ಅಭಿನಯದ ‘ದುರ್ಗಿ’ ಚಿತ್ರವನ್ನು ನಿರ್ದೇಶಿಸಿದ್ದ ಜನಪ್ರಿಯ ಖಳನಟ ರವಿಶಂಕರ್, 20 ವರ್ಷಗಳ ಬಳಿಕ ಮತ್ತೆ ನಿರ್ದೇಶನಕ್ಕಿಳಿಯುತ್ತಿದ್ದಾರೆ.</p><p>‘ತಮ್ಮ ಮಗ ಅದ್ವೇಶ್ಗಾಗಿ ಸಿನಿಮಾ ಮಾಡಲು ರವಿಶಂಕರ್ ಸಿದ್ಧತೆ ನಡೆಸಿದ್ದಾರೆ. ಮತ್ತೆ ನಿರ್ದೇಶಕನ ಕ್ಯಾಪ್ ತೊಟ್ಟು ಟೀಸರ್ ಚಿತ್ರೀಕರಣದಲ್ಲಿ ಮಗ್ನರಾಗಿದ್ದಾರೆ. ವಿಜಯದಶಮಿ ವೇಳೆಗೆ ಚಿತ್ರ ಸೆಟ್ಟೇರುವ ಸಾಧ್ಯತೆಯಿದೆ’ ಎಂದು ಅವರ ಆಪ್ತಮೂಲಗಳು ತಿಳಿಸಿವೆ.</p><p>ತೆಲುಗು ಚಿತ್ರರಂಗದಲ್ಲಿ ವೃತ್ತಿ ಪ್ರಾರಂಭಿಸಿದ ನಟ ರವಿಶಂಕರ್ ಜನಪ್ರಿಯವಾಗಿದ್ದು ಕನ್ನಡದಲ್ಲಿ. ‘ಕೆಂಪೇಗೌಡ’ ಚಿತ್ರದಿಂದ ಪ್ರಾರಂಭಿಸಿ ಸುದೀಪ್ ಜೊತೆಗಿನ ಸಿನಿಮಾಗಳಲ್ಲಿ ಖಳನಾಯಕನಾಗಿ ಮನೆಮಾತಾದರು. ಬಳಿಕ ನಟ ಶರಣ್ ಜೊತೆ ‘ವಿಕ್ಟರಿ’, ‘ಅಧ್ಯಕ್ಷ’ ಸಿನಿಮಾಗಳಲ್ಲಿಯೂ ಪ್ರೇಕ್ಷಕರನ್ನು ರಂಜಿಸಿದರು.</p><p>ತೆಲುಗು, ತಮಿಳು ಚಿತ್ರರಂಗದಲ್ಲಿ ಬರಹಗಾರರಾಗಿಯೂ ಗುರುತಿಸಿಕೊಂಡವರು ರವಿಶಂಕರ್. ಕನ್ನಡದಲ್ಲಿ ‘ಆರ್ಮುಗಂ ಕೋಟೆ’ ಕಟ್ಟಿರುವ ಇವರು, ತಮ್ಮ ಮಗನನ್ನು ಇಲ್ಲಿಂದಲೇ ಲಾಂಚ್ ಮಾಡಲು ಸಿದ್ಧರಾಗುತ್ತಿದ್ದಾರೆ.</p><p>‘ಸಂಖ್ಯಾಶಾಸ್ತ್ರದ ಪ್ರಕಾರ ಮಗನ ಹೆಸರು ಬದಲಿಸಿ ಸಿನಿಮಾ ಘೋಷಿಸುವ ತಯಾರಿಯಲ್ಲಿದ್ದಾರೆ. ಹೀಗಾಗಿ ಸಿನಿಮಾ ಬಗ್ಗೆ ಅವರು ಯಾವುದೇ ಮಾಹಿತಿ ನೀಡುತ್ತಿಲ್ಲ. ಆದರೆ ಈ ಅಕ್ಟೋಬರ್ಗೆ ಸಿನಿಮಾ ಸೆಟ್ಟೇರುವುದು ಖಚಿತ’ ಎಂದು ಅವರ ಆಪ್ತವಲಯ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>2004ರಲ್ಲಿ ಮಾಲಾಶ್ರೀ ಅಭಿನಯದ ‘ದುರ್ಗಿ’ ಚಿತ್ರವನ್ನು ನಿರ್ದೇಶಿಸಿದ್ದ ಜನಪ್ರಿಯ ಖಳನಟ ರವಿಶಂಕರ್, 20 ವರ್ಷಗಳ ಬಳಿಕ ಮತ್ತೆ ನಿರ್ದೇಶನಕ್ಕಿಳಿಯುತ್ತಿದ್ದಾರೆ.</p><p>‘ತಮ್ಮ ಮಗ ಅದ್ವೇಶ್ಗಾಗಿ ಸಿನಿಮಾ ಮಾಡಲು ರವಿಶಂಕರ್ ಸಿದ್ಧತೆ ನಡೆಸಿದ್ದಾರೆ. ಮತ್ತೆ ನಿರ್ದೇಶಕನ ಕ್ಯಾಪ್ ತೊಟ್ಟು ಟೀಸರ್ ಚಿತ್ರೀಕರಣದಲ್ಲಿ ಮಗ್ನರಾಗಿದ್ದಾರೆ. ವಿಜಯದಶಮಿ ವೇಳೆಗೆ ಚಿತ್ರ ಸೆಟ್ಟೇರುವ ಸಾಧ್ಯತೆಯಿದೆ’ ಎಂದು ಅವರ ಆಪ್ತಮೂಲಗಳು ತಿಳಿಸಿವೆ.</p><p>ತೆಲುಗು ಚಿತ್ರರಂಗದಲ್ಲಿ ವೃತ್ತಿ ಪ್ರಾರಂಭಿಸಿದ ನಟ ರವಿಶಂಕರ್ ಜನಪ್ರಿಯವಾಗಿದ್ದು ಕನ್ನಡದಲ್ಲಿ. ‘ಕೆಂಪೇಗೌಡ’ ಚಿತ್ರದಿಂದ ಪ್ರಾರಂಭಿಸಿ ಸುದೀಪ್ ಜೊತೆಗಿನ ಸಿನಿಮಾಗಳಲ್ಲಿ ಖಳನಾಯಕನಾಗಿ ಮನೆಮಾತಾದರು. ಬಳಿಕ ನಟ ಶರಣ್ ಜೊತೆ ‘ವಿಕ್ಟರಿ’, ‘ಅಧ್ಯಕ್ಷ’ ಸಿನಿಮಾಗಳಲ್ಲಿಯೂ ಪ್ರೇಕ್ಷಕರನ್ನು ರಂಜಿಸಿದರು.</p><p>ತೆಲುಗು, ತಮಿಳು ಚಿತ್ರರಂಗದಲ್ಲಿ ಬರಹಗಾರರಾಗಿಯೂ ಗುರುತಿಸಿಕೊಂಡವರು ರವಿಶಂಕರ್. ಕನ್ನಡದಲ್ಲಿ ‘ಆರ್ಮುಗಂ ಕೋಟೆ’ ಕಟ್ಟಿರುವ ಇವರು, ತಮ್ಮ ಮಗನನ್ನು ಇಲ್ಲಿಂದಲೇ ಲಾಂಚ್ ಮಾಡಲು ಸಿದ್ಧರಾಗುತ್ತಿದ್ದಾರೆ.</p><p>‘ಸಂಖ್ಯಾಶಾಸ್ತ್ರದ ಪ್ರಕಾರ ಮಗನ ಹೆಸರು ಬದಲಿಸಿ ಸಿನಿಮಾ ಘೋಷಿಸುವ ತಯಾರಿಯಲ್ಲಿದ್ದಾರೆ. ಹೀಗಾಗಿ ಸಿನಿಮಾ ಬಗ್ಗೆ ಅವರು ಯಾವುದೇ ಮಾಹಿತಿ ನೀಡುತ್ತಿಲ್ಲ. ಆದರೆ ಈ ಅಕ್ಟೋಬರ್ಗೆ ಸಿನಿಮಾ ಸೆಟ್ಟೇರುವುದು ಖಚಿತ’ ಎಂದು ಅವರ ಆಪ್ತವಲಯ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>