ರಾಮನಗರ: ಬೆಂಗಳೂರು ಹೊರವಲಯದ ನೆಲಗುಳಿಯಲ್ಲಿರುವ ಫಾರ್ಮ್ಹೌಸ್ನಲ್ಲಿ ನಟ ಚಿರಂಜೀವಿ ಸರ್ಜಾ ಅವರ ಅಂತಿಮ ಸಂಸ್ಕಾರ ಹಿಂದೂ ಸಂಪ್ರದಾಯದಂತೆ ನಡೆಯಿತು.
ಫಾರ್ಮ್ಹೌಸ್ ಒಳಗೆ ಸರ್ಜಾ ಕುಟುಂಬದವರು ಮತ್ತು ಆಪ್ತರಿಗಷ್ಟೇ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು. ಪತ್ನಿ ಮೇಘನಾ ಚಿರಂಜೀವಿ ಸರ್ಜಾ ಅವರನ್ನು ಅಪ್ಪಿ ಕಣ್ಣೀರಿಟ್ಟರು. ಬೃಂದಾವನದಾದ್ಯಂತ ಕಣ್ಣೀರ ಕಟ್ಟೆ ಒಡೆದಿತ್ತು.
ಕುಟುಂಬಸ್ಥರು, ಆಪ್ತರು ಮತ್ತು ಅಪಾರ ಅಭಿಮಾನಿಗಳು ಚಿರಂಜೀವಿ ಸರ್ಜಾರಿಗೆ ಅಂತಿಮ ವಿದಾಯ ಸಲ್ಲಿಸಿದರು.
ಫಾರ್ಮ್ಹೌಸ್ ಸುತ್ತ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದರು. ಅವರನ್ನು ಚದುರಿಸಲು ಪೊಲೀಸರು ಲಘು ಲಾಠಿಪ್ರಹಾರ ನಡೆಸಿದ್ದಾರೆ.