<p>ಅನಿತಾ ಭಟ್ ಹಾಗೂ ಪವನ್ ಶೆಟ್ಟಿ ನಟನೆಯ ‘ಉಗ್ರಾಣ’ ಚಿತ್ರದ ಫಸ್ಟ್ಲುಕ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ರಿಶಿಕೇಶ್ ಚಿತ್ರದ ನಿರ್ದೇಶನದ ಜೊತೆಗೆ ಸಂಕಲನ, ಛಾಯಾಚಿತ್ರಗ್ರಹಣದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ.</p>.<p>‘ಮಿಸ್ಟ್ರಿ, ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿರುವುದರಿಂದ ಕಥೆಯ ಎಳೆಯನ್ನು ಈಗಲೇ ಹೇಳುವುದಿಲ್ಲ. ಈ ‘ಉಗ್ರಾಣ’ ರಹಸ್ಯ ಹೊಂದಿರುವ ಜಾಗ. ಕನ್ನಡ ಮತ್ತು ತೆಲುಗಿನಲ್ಲಿ ಚಿತ್ರ ಮೂಡಿಬರುತ್ತಿದೆ. ಬೆಂಗಳೂರು, ಹೈದರಬಾದ್, ಸಾಗರ, ತೀರ್ಥಹಳ್ಳಿ, ಮೂಡುಬಿದಿರೆ, ಸಿರ್ಸಿ, ಗೋಕರ್ಣ, ಹೊಸಗುಂದದ ಪುರಾತನ ದೇವಸ್ಥಾನದಲ್ಲಿ ಚಿತ್ರೀಕರಣ ನಡೆಸಲಾಗಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ’ ಎಂದಿದ್ದಾರೆ ನಿರ್ದೇಶಕರು. </p>.<p>ಈ ಚಿತ್ರದ ಮೂಲಕ ನಟಿ ಅನಿತಾ ಭಟ್ ನಿರ್ಮಾಪಕಿಯಾಗಿದ್ದು, ಎಬಿಸಿ ಪ್ರೊಡಕ್ಷನ್ ಅಡಿಯಲ್ಲಿ ಬಂಡವಾಳ ಹೂಡಿದ್ದಾರೆ. ತೆಲುಗಿನ ಷಫಿ, ಕೆ.ಜಿ.ಕೃಷ್ಣಮೂರ್ತಿ, ಸಿದ್ದು ಮೂಲಮನಿ, ಮಿಮಿಕ್ರಿ ಗೋಪಿ, ಜಯದೇವ್, ಕರಿಸುಬ್ಬು ಮುಂತಾದವರು ಚಿತ್ರದಲ್ಲಿದ್ದಾರೆ.</p>.<p>ಕವಿರಾಜ್ ಸಾಹಿತ್ಯವಿದ್ದು, ಆಕಾಶ್ ಪರ್ವ ಸಂಗೀತ ಸಂಯೋಜಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅನಿತಾ ಭಟ್ ಹಾಗೂ ಪವನ್ ಶೆಟ್ಟಿ ನಟನೆಯ ‘ಉಗ್ರಾಣ’ ಚಿತ್ರದ ಫಸ್ಟ್ಲುಕ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ರಿಶಿಕೇಶ್ ಚಿತ್ರದ ನಿರ್ದೇಶನದ ಜೊತೆಗೆ ಸಂಕಲನ, ಛಾಯಾಚಿತ್ರಗ್ರಹಣದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ.</p>.<p>‘ಮಿಸ್ಟ್ರಿ, ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿರುವುದರಿಂದ ಕಥೆಯ ಎಳೆಯನ್ನು ಈಗಲೇ ಹೇಳುವುದಿಲ್ಲ. ಈ ‘ಉಗ್ರಾಣ’ ರಹಸ್ಯ ಹೊಂದಿರುವ ಜಾಗ. ಕನ್ನಡ ಮತ್ತು ತೆಲುಗಿನಲ್ಲಿ ಚಿತ್ರ ಮೂಡಿಬರುತ್ತಿದೆ. ಬೆಂಗಳೂರು, ಹೈದರಬಾದ್, ಸಾಗರ, ತೀರ್ಥಹಳ್ಳಿ, ಮೂಡುಬಿದಿರೆ, ಸಿರ್ಸಿ, ಗೋಕರ್ಣ, ಹೊಸಗುಂದದ ಪುರಾತನ ದೇವಸ್ಥಾನದಲ್ಲಿ ಚಿತ್ರೀಕರಣ ನಡೆಸಲಾಗಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ’ ಎಂದಿದ್ದಾರೆ ನಿರ್ದೇಶಕರು. </p>.<p>ಈ ಚಿತ್ರದ ಮೂಲಕ ನಟಿ ಅನಿತಾ ಭಟ್ ನಿರ್ಮಾಪಕಿಯಾಗಿದ್ದು, ಎಬಿಸಿ ಪ್ರೊಡಕ್ಷನ್ ಅಡಿಯಲ್ಲಿ ಬಂಡವಾಳ ಹೂಡಿದ್ದಾರೆ. ತೆಲುಗಿನ ಷಫಿ, ಕೆ.ಜಿ.ಕೃಷ್ಣಮೂರ್ತಿ, ಸಿದ್ದು ಮೂಲಮನಿ, ಮಿಮಿಕ್ರಿ ಗೋಪಿ, ಜಯದೇವ್, ಕರಿಸುಬ್ಬು ಮುಂತಾದವರು ಚಿತ್ರದಲ್ಲಿದ್ದಾರೆ.</p>.<p>ಕವಿರಾಜ್ ಸಾಹಿತ್ಯವಿದ್ದು, ಆಕಾಶ್ ಪರ್ವ ಸಂಗೀತ ಸಂಯೋಜಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>