ವರದಿ ಗಮನಿಸಿದ ಪೀಠ, ‘ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ವರದಿ ಹೇಳಿದೆಯಲ್ಲ’ ಎಂದು ವಕೀಲರನ್ನು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ವೀರಣ್ಣ ತಿಗಡಿ, ಸದ್ಯಕ್ಕೆ ಔಷದೋಪಚಾರ ಸಾಕು, ಅಗತ್ಯ ಬಿದ್ದರೆ ಮಾತ್ರ ಶಸ್ತ್ರ ಚಿಕಿತ್ಸೆ ನಡೆಸಬುದು ಎಂದು ವರದಿ ಹೇಳಿದೆ. ಈ ಬಗ್ಗೆ ಇನ್ನಷ್ಟು ವಿವರ ಸಲ್ಲಿಸಲು ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಲು ಕೋರಿದರು. ಮನವಿ ಪರಿಗಣಿಸಿದ ಪೀಠ, ವಿಚಾರಣೆ ಮುಂದೂಡಿತು.