1990ರ ದಶಕದ ಕಾವೇರಿ ಗಲಭೆಯ ಹಿನ್ನೆಲೆಯಲ್ಲಿ ನಡೆಯುವ ಕಥೆಯಿದು. ನಾಯಕಿ ‘ಕಾಳಿ’ ತಮಿಳುನಾಡಿನ ಹುಡುಗಿ. ಗಲಾಟೆ ಮುಖ್ಯ ಕಥೆ ಅಲ್ಲ. ಅದರ ಹಿನ್ನೆಲೆಯಲ್ಲಿ ನಾಯಕ– ನಾಯಕಿ ಮಧ್ಯೆ ಪ್ರೇಮಾಂಕುರವಾಗುವುದೇ ಒಂದು ಸಾಲಿನ ಸಾರಾಂಶ. ಎಸ್. ಕೃಷ್ಣ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಮುಹೂರ್ತ ನಡೆದಿದೆ. ಕೃಷ್ಣ ಅವರ ಪತ್ನಿ ಸ್ವಪ್ನಾ ಕೃಷ್ಣ ಅವರು ಆರ್ಆರ್ಆರ್ ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿ ನಿರ್ಮಿಸುತ್ತಿದ್ದಾರೆ. ಇದು ಈ ಸಂಸ್ಥೆಯ ಮೂರನೇ ಚಿತ್ರ. ಈ ಸಂಸ್ಥೆ ಝೀ ಕನ್ನಡಕ್ಕಾಗಿ ಹಲವು ಧಾರಾವಾಹಿಗಳನ್ನು ನಿರ್ಮಿಸಿದೆ.