ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇದಾರನಾಥ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿದ ಸಾರಾ ಅಲಿಖಾನ್‌, ಜಾಹ್ನವಿ ಕಪೂರ್‌

Last Updated 3 ನವೆಂಬರ್ 2021, 10:35 IST
ಅಕ್ಷರ ಗಾತ್ರ

ಬಾಲಿವುಡ್ ಸ್ಟಾರ್ ಪುತ್ರಿಯರಾದ ಜಾಹ್ನವಿ ಕಪೂರ್ ಮತ್ತು ಸಾರಾ ಅಲಿಖಾನ್ ಅವರು ಕೇದಾರನಾಥಯಾತ್ರಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಸಾರಾ ಅಲಿಖಾನ್‌ ಅವರು ಕೇದಾರನಾಥ ಕ್ಷೇತ್ರಕ್ಕೆ ಭೇಟಿ ನೀಡಿರುವ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಕೆಲವರು ಕೊಂಕು ತೆಗೆದಿದ್ದು ಮುಸ್ಲಿಮರಿಗೆದೇವರು ಇರುವುದು ಒಂದೇ ಅಲ್ಲವೇ? ಎಂದು ಟ್ರೋಲ್‌ ಮಾಡುತ್ತಿದ್ದಾರೆ.

ಕೆಲವರು ಅವರ ಉಡುಪು ಮತ್ತು ಮೇಕಪ್‌ ಬಗ್ಗೆಯೂಕಮೆಂಟ್‌ಗಳನ್ನು ಮಾಡಿದ್ದಾರೆ. ನೀವು ಮೇಕಪ್‌ ಇಲ್ಲದಿದ್ದರೆ ಸುಂದರವಾಗಿ ಕಾಣುವುದಿಲ್ಲ ಎಂದಿದ್ದಾರೆ.

ಯಾವುದೇ ಕಮೆಂಟ್‌ಗಳ ಬಗ್ಗೆ ತಲೆ ಕೆಡಿಸಿಕೊಳ್ಳದ ಸಾರಾ ಅಲಿಖಾನ್‌ ’ನನಗೆ ದೇವರ ಕೃಪೆ’ ಸಿಕ್ಕಿದೆ ಎಂದು ಬರೆದುಕೊಂಡಿದ್ದಾರೆ.

ಕಳದೆ ತಿಂಗಳು ಜಾಹ್ನವಿ ಹಾಗೂ ಸಾರಾ ಅಲಿಖಾನ್‌ ರಾಜಸ್ಥಾನ ಹಾಗೂ ಕಾಶ್ಮೀರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ್ದರು. ಆಗಲೂ ನೆಟ್ಟಿಗರು ಸಾರಾ ಅವರನ್ನು ಟ್ರೋಲ್‌ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT