ತಲಾಖ್ ಬಗ್ಗೆ ವಿವರವಾಗಿ ಚರ್ಚಿಸಿರುವ ಸಿನಿಮಾ ಇದು. ಬದ್ರುದ್ದೀನ್ ಪಾತ್ರದಲ್ಲಿ ಪತ್ರಕರ್ತ ರೆಹಮಾನ್ ಹಾಸನ್ ನಟಿಸಿದ್ದಾರೆ. ರಮೇಶ್ ಭಟ್, ಸುಧಾ ಬೆಳವಾಡಿ, ರಾಮಸ್ವಾಮಿ, ಪ್ರದೀಪ್ ಪೂಜಾರಿ, ವಿಭಾಸ್, ಸಾಯಿತೋಷಿತ್, ಅಂಕಿತಾ, ಆಯುಷ್ ಜಿ. ಶೆಟ್ಟಿ ತಾರಾಬಳಗದಲ್ಲಿದ್ದಾರೆ. ಹಾಡುಗಳಲ್ಲಿ ಪತ್ರಕರ್ತ ಬಿ.ಎಂ ಹನೀಫ್ ಅವರ ಸಾಹಿತ್ಯವಿದೆ. ಹಾಡುಗಳಿಗೆ ವಿ.ಮನೋಹರ್ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದ ಚಿತ್ರಕಥೆ-ಸಂಭಾಷಣೆಯನ್ನು ನರೇಂದ್ರಬಾಬು ರಚಿಸಿದ್ದಾರೆ.