<p>ಜೂನ್ 4 ರಂದು ದಿ. ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಅವರ ಜನ್ಮದಿನ. ಅವರ ಹುಟ್ಟುಹಬ್ಬದ ಪ್ರಯುಕ್ತ ಜೀ ಕನ್ನಡ ವಾಹಿನಿಯು ಸರಿಗಮಪ ಲಿಟಲ್ ಚಾಂಪ್ಸ್ ಕಾರ್ಯಕ್ರಮದಲ್ಲಿ ‘SPB ಗಾನ ಸಂಭ್ರಮ’ ನಡೆಸುತ್ತಿದೆ.</p><p>ಈ ಕಾರ್ಯಕ್ರಮ ಕುರಿತು ಜೀ ವಾಹಿನಿ ಸಾಮಾಜಿಕ ಮಾಧ್ಯಮದಲ್ಲಿ ಪ್ರೊಮೊ ಹಂಚಿಕೊಂಡಿದೆ.</p><p>ಈ ಕಾರ್ಯಕ್ರಮದಲ್ಲಿ ಲಿಟಲ್ ಚಾಂಪ್ಸ್ಗಳು ಎಸ್ ಪಿ ಬಾಲಸುಬ್ರಮಣ್ಯಂ ಅವರ ಕನ್ನಡ ಗೀತೆಗಳನ್ನು ಹಾಡುವ ಮೂಲಕ ನಮನ ಸಲ್ಲಿಸಿದ್ದಾರೆ. 'SPB ಗಾನ ಸಂಭ್ರಮ‘ದಲ್ಲಿ ‘ನಗುವ ನಯನ ಮೌನ‘, ‘ಪ್ರೇಮ ಬರಹ‘, ‘ಕುಚಿಕು ಕುಚಿಕು‘ ಹಾಡು ಗಮನ ಸೆಳೆದಿವೆ. </p><p>ಸರಿಗಮಪ ಲಿಟಲ್ ಚಾಂಪ್ಸ್ ತೀರ್ಪುಗಾರರಾದ ಅರ್ಜುನ್ ಜನ್ಯ, ರಾಜೇಶ್ ಕೃಷ್ಣನ್, ವಿಜಯ್ ಪ್ರಕಾಶ್ ಹಾಗೂ ಜ್ಯೂರಿ ಸದಸ್ಯರು ಎಸ್ಪಿಬಿ ಹಾಡಿಗೆ ಧ್ವನಿಯಾಗುವ ಮೂಲಕ ಗೌರವ ಸೂಚಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಚಿತ್ರ ಸಾಹಿತಿ, ನಟ, ನಿರ್ದೇಶಕ ನಾಗೇಂದ್ರ ಪ್ರಸಾದ್ ಹಾಗೂ ಸಂಗೀತ ನಿರ್ದೇಶಕ ಮತ್ತು ಗೀತರಚನೆಕಾರ ಕೆ. ಕಲ್ಯಾಣ್ ಅವರು ಭಾಗಿಯಾಗಿ<strong> </strong>ಎಸ್ ಪಿ ಬಾಲಸುಬ್ರಮಣ್ಯಂ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದ್ದಾರೆ. </p><p>ಎಸ್ಪಿಬಿ ಅವರು ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳ 16 ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿ ನೀಡಿದ್ದಾರೆ. </p><p>ಪಿಆರ್ಕೆ ಪ್ರೊಡಕ್ಷನ್ಸ್ ಅಡಿ ನಿರ್ಮಾಣವಾದ ಪುನೀತ್ ರಾಜ್ಕುಮಾರ್ ನಟನೆಯ ‘ಮಾಯಾಬಜಾರ್ 2016’ ಚಿತ್ರದ ‘ನಿಮಗೂ ಗೊತ್ತು ನಮಗೂ ಗೊತ್ತು ಕಾಲ ಎಂದೋ ಎಕ್ಕೋಟ್ಟೋಯ್ತು...’ ಹಾಡು ಕನ್ನಡದಲ್ಲಿ ಎಸ್ಪಿಬಿ ಹಾಡಿದ ಕೊನೆಯ ಹಾಡಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜೂನ್ 4 ರಂದು ದಿ. ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಅವರ ಜನ್ಮದಿನ. ಅವರ ಹುಟ್ಟುಹಬ್ಬದ ಪ್ರಯುಕ್ತ ಜೀ ಕನ್ನಡ ವಾಹಿನಿಯು ಸರಿಗಮಪ ಲಿಟಲ್ ಚಾಂಪ್ಸ್ ಕಾರ್ಯಕ್ರಮದಲ್ಲಿ ‘SPB ಗಾನ ಸಂಭ್ರಮ’ ನಡೆಸುತ್ತಿದೆ.</p><p>ಈ ಕಾರ್ಯಕ್ರಮ ಕುರಿತು ಜೀ ವಾಹಿನಿ ಸಾಮಾಜಿಕ ಮಾಧ್ಯಮದಲ್ಲಿ ಪ್ರೊಮೊ ಹಂಚಿಕೊಂಡಿದೆ.</p><p>ಈ ಕಾರ್ಯಕ್ರಮದಲ್ಲಿ ಲಿಟಲ್ ಚಾಂಪ್ಸ್ಗಳು ಎಸ್ ಪಿ ಬಾಲಸುಬ್ರಮಣ್ಯಂ ಅವರ ಕನ್ನಡ ಗೀತೆಗಳನ್ನು ಹಾಡುವ ಮೂಲಕ ನಮನ ಸಲ್ಲಿಸಿದ್ದಾರೆ. 'SPB ಗಾನ ಸಂಭ್ರಮ‘ದಲ್ಲಿ ‘ನಗುವ ನಯನ ಮೌನ‘, ‘ಪ್ರೇಮ ಬರಹ‘, ‘ಕುಚಿಕು ಕುಚಿಕು‘ ಹಾಡು ಗಮನ ಸೆಳೆದಿವೆ. </p><p>ಸರಿಗಮಪ ಲಿಟಲ್ ಚಾಂಪ್ಸ್ ತೀರ್ಪುಗಾರರಾದ ಅರ್ಜುನ್ ಜನ್ಯ, ರಾಜೇಶ್ ಕೃಷ್ಣನ್, ವಿಜಯ್ ಪ್ರಕಾಶ್ ಹಾಗೂ ಜ್ಯೂರಿ ಸದಸ್ಯರು ಎಸ್ಪಿಬಿ ಹಾಡಿಗೆ ಧ್ವನಿಯಾಗುವ ಮೂಲಕ ಗೌರವ ಸೂಚಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಚಿತ್ರ ಸಾಹಿತಿ, ನಟ, ನಿರ್ದೇಶಕ ನಾಗೇಂದ್ರ ಪ್ರಸಾದ್ ಹಾಗೂ ಸಂಗೀತ ನಿರ್ದೇಶಕ ಮತ್ತು ಗೀತರಚನೆಕಾರ ಕೆ. ಕಲ್ಯಾಣ್ ಅವರು ಭಾಗಿಯಾಗಿ<strong> </strong>ಎಸ್ ಪಿ ಬಾಲಸುಬ್ರಮಣ್ಯಂ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದ್ದಾರೆ. </p><p>ಎಸ್ಪಿಬಿ ಅವರು ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳ 16 ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿ ನೀಡಿದ್ದಾರೆ. </p><p>ಪಿಆರ್ಕೆ ಪ್ರೊಡಕ್ಷನ್ಸ್ ಅಡಿ ನಿರ್ಮಾಣವಾದ ಪುನೀತ್ ರಾಜ್ಕುಮಾರ್ ನಟನೆಯ ‘ಮಾಯಾಬಜಾರ್ 2016’ ಚಿತ್ರದ ‘ನಿಮಗೂ ಗೊತ್ತು ನಮಗೂ ಗೊತ್ತು ಕಾಲ ಎಂದೋ ಎಕ್ಕೋಟ್ಟೋಯ್ತು...’ ಹಾಡು ಕನ್ನಡದಲ್ಲಿ ಎಸ್ಪಿಬಿ ಹಾಡಿದ ಕೊನೆಯ ಹಾಡಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>