ಚಿತ್ರದ ಬಗ್ಗೆ ಮಾತನಾಡಿದ ನಿರ್ಮಾಪಕ ಜಯಪ್ರಭು ಆರ್. ಲಿಂಗಾಯತ್ ‘ನಾನು ಕಳೆದ ಹಲವು ವರ್ಷಗಳಿಂದ ಮುಂಬೈನಲ್ಲಿ ಕೆಲಸ ಮಾಡುತ್ತಿದ್ದೇನೆ. ಇದೀಗ ಸಿನಿಮಾ ಕ್ಷೇತ್ರದಲ್ಲಿ ಏನಾದರೂ ಮಾಡಬೇಕು ಎಂಬ ಕಾರಣಕ್ಕೆ ಬಂದಿದ್ದೇನೆ. ಬಾಲಿವುಡ್ನಲ್ಲಿ ಒಂದಷ್ಟು ಮಂದಿ ಪರಿಚಯ ಇದಿದ್ದರಿಂದ ಅವರನ್ನೂ ಈ ಪ್ರಾಜೆಕ್ಟ್ನಲ್ಲಿ ಸೇರಿಸಿಕೊಂಡಿದ್ದೇನೆ. ಸಿನಿಮಾ ಬಗ್ಗೆ ಹೇಳುವುದಾದರೆ, ಇಲ್ಲಿ ನಾನು ಜೈ ಎಂಬ ಕಾಲೇಜು ವಿದ್ಯಾರ್ಥಿಯ ಪಾತ್ರ ಮಾಡಿದ್ದೇನೆ. ಸಂಶೋಧನೆ ಮಾಡಲು ಕಾಡಿಗೆ ಹೋಗುವ ಯುವಕರು ಏನೆಲ್ಲ ವಿಚಿತ್ರಗಳನ್ನು ಅನುಭವಿಸುತ್ತಾರೆ ಎಂಬುದನ್ನು ಸಿನಿಮಾದಲ್ಲಿ ತೋರಿಸಿದ್ದೇವೆ, ಹಾರರ್ ಅಂಶದ ಜತೆಗೆ ತ್ರಿಕೋನ ಪ್ರೇಮಕಥೆಯೂ ಸಿನಿಮಾದಲ್ಲಿದೆ’ ಎಂದರು.