<p>ಕುತೂಹಲಕಾರಿ ಕಥಾಹಂದರದವಿರುವ ಚಿತ್ರ ‘ಸ್ಕೇರಿ ಫಾರೆಸ್ಟ್’ ಫೆ. 26ರಂದು ತೆರೆಗೆ ಬರಲಿದೆ.</p>.<p>ಸ್ನಾತಕೋತ್ತರ ಪದವಿ ವಿದ್ಯಾರ್ಥಿ ಸ್ನೇಹಿತ - ಸ್ನೇಹಿತೆಯರು ಸಂಶೋಧನೆಗಾಗಿ ಕಾಡಿಗೆ ತೆರಳುತ್ತಾರೆ. ಆಗ ಆ ಕಾಡಿನಲ್ಲಿ ಏನು ನಡೆಯುತ್ತದೆ ಎನ್ನುವುದು ಈ ಚಿತ್ರದ ಕಥಾವಸ್ತು. ‘ಸ್ಕೇರಿ ಫಾರೆಸ್ಟ್’ ಶೀರ್ಷಿಕೆಗೆ ಪ್ರೀತಿ- ಭಯ- ಆತ್ಮ ಎಂಬ ಅಡಿಬರಹವೂ ಇದೆ.</p>.<p>ಮೂಲತಃ ತುಮಕೂರಿನ ಮಾರಶೆಟ್ಟಿ ಹಳ್ಳಿಯವರಾದ ಉದ್ಯಮಿ ಜಯಪ್ರಭು ಆರ್ ಲಿಂಗಾಯತ್ (ಈಗ ಮುಂಬೈ ನಿವಾಸಿ) ಈ ಚಿತ್ರದ ನಿರ್ಮಾಪಕರು.</p>.<p>‘ನನಗೆ ಕನ್ನಡದ ಬಗ್ಗೆ ಅಪಾರ ಪ್ರೇಮ ಹಾಗೂ ವರನಟ ಡಾ.ರಾಜಕುಮಾರ್ ಅವರ ಅಪ್ಪಟ ಅಭಿಮಾನಿ. ಅವರ ಅಭಿನಯದ ಚಿತ್ರಗಳೇ ನನಗೆ ಚಿತ್ರ ನಿರ್ಮಾಣಕ್ಕೆ ಸ್ಫೂರ್ತಿ’ ಎನ್ನುತ್ತಾರೆ ಜಯಪ್ರಭು.</p>.<p>ಸ್ನೇಹಿತರೊಬ್ಬರು ಹಿಂದಿ ಚಿತ್ರ ನಿರ್ಮಾಣಕ್ಕೆ ಹಣ ಹೂಡಲು ಕೇಳಿದಾಗ ಕನ್ನಡದಲ್ಲಿಯೂ ನಿರ್ಮಾಣ ಮಾಡಿದರೆ ಮಾತ್ರ ಹಣ ಹೂಡುವುದಾಗಿ ಹೇಳಿದ್ದಾರೆ ಜಯಪ್ರಭು. ಚಿತ್ರದ ತಾಂತ್ರಿಕ ವರ್ಗದಲ್ಲೂ ಹೆಚ್ಚಿನ ಪಾಲು ಕನ್ನಡಿಗರಿಗೆ ನೀಡಿದ್ದಾರೆ. ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ಬಾಲಿವುಡ್ ನಲ್ಲಿ ಅನುಭವ ಹೊಂದಿರುವ ಸಂಜಯ್ ಅಭೀರ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದಾರೆ.</p>.<p>ಕನ್ನಡದ ಯುವ ಪ್ರತಿಭೆ ಆದಿ ಹಾಗೂ ಎಲ್.ಕೆ.ಲಕ್ಷ್ಮೀಕಾಂತ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಹಿನ್ನೆಲೆ ಸಂಗೀತ ಲಕ್ಷ್ಮೀಕಾಂತ್ ಅವರದು.</p>.<p>ಹಾಲಿವುಡ್ ನ ಜಂಗಲ್ಬುಕ್ 1994, ಹಿಂದಿಯ ರಾಗಿಣಿ ಎಂ.ಎಂ.ಎಸ್ 2 ಸೇರಿದಂತೆ ಮುಂತಾದ ಹೆಸರಾಂತ ಚಿತ್ರಗಳ ಛಾಯಾಗ್ರಾಹಕರಾದ ನರೇನ್ ಗೇಡಿಯಾ ಅವರ ಛಾಯಾಗ್ರಹಣ, ರಾಜೇಶ್ ಶಾ ಸಂಕಲನ ಹಾಗೂ ದೀಪಕ್ ಶರ್ಮ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.</p>.<p>ಕುತೂಹಲಕಾರಿ ಕಥೆಯೊಂದಿಗೆ ತ್ರಿಕೋನ ಲವ್ ಸ್ಟೋರಿ ಸಹ ಈ ಚಿತ್ರದಲ್ಲಿದೆ. ನಿರ್ಮಾಪಕ ಜಯಪ್ರಭು ಸಹ ಈ ಚಿತ್ರದ ನಾಯಕನಾಗಿ ಅಭಿನಯಿಸಿದ್ದಾರೆ. ಜೀತ್ ರಾಯ್ದತ್ ಈ ಚಿತ್ರದ ಎರಡನೇ ನಾಯಕ. ಬಹುಭಾಷ ನಟ ಯಶ್ ಪಾಲ್ ಶರ್ಮ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಕೊಡಗಿನ ಟೀನಾ ಪೊನ್ನಪ್ಪ, ಆಮ್ ರೀನ್, ಕಲ್ಪನಾ ಈ ಚಿತ್ರದ ನಾಯಕಿಯರು. ಅಷ್ಟೇ ಅಲ್ಲದೆ ಅನುಭವಿ ಕಲಾವಿದರ ದೊಡ್ಡ ತಾರಾಬಳಗ ಈ ಚಿತ್ರದಲ್ಲಿದೆ. ನಿರ್ಮಾಪಕರಪುತ್ರಿ ಬೇಬಿ ಪೂಜಾ ಸಹ ಈ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ.</p>.<p>ತುಮಕೂರಿನ ಸಿದ್ದಗಂಗಾ ಮಠದಲ್ಲಿ ಕಳೆದ ಡಿಸೆಂಬರ್ನಲ್ಲಿ ಚಿತ್ರೀಕರಣ ಆರಂಭವಾಗಿತ್ತು. ಸಚಿವ ಮಾಧುಸ್ವಾಮಿ ಅವರು ಚಿತ್ರೀಕರಣಕ್ಕೆ ಚಾಲನೆ ನೀಡಿದ್ದರು. ಸಿದ್ದಗಂಗಾ ಮಠದ ಆವರಣ, ತುಮಕೂರು, ಚಿಕ್ಕಮಗಳೂರು ಹಾಗೂ ಮುಂಬೈನಲ್ಲಿ ಚಿತ್ರೀಕರಣ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುತೂಹಲಕಾರಿ ಕಥಾಹಂದರದವಿರುವ ಚಿತ್ರ ‘ಸ್ಕೇರಿ ಫಾರೆಸ್ಟ್’ ಫೆ. 26ರಂದು ತೆರೆಗೆ ಬರಲಿದೆ.</p>.<p>ಸ್ನಾತಕೋತ್ತರ ಪದವಿ ವಿದ್ಯಾರ್ಥಿ ಸ್ನೇಹಿತ - ಸ್ನೇಹಿತೆಯರು ಸಂಶೋಧನೆಗಾಗಿ ಕಾಡಿಗೆ ತೆರಳುತ್ತಾರೆ. ಆಗ ಆ ಕಾಡಿನಲ್ಲಿ ಏನು ನಡೆಯುತ್ತದೆ ಎನ್ನುವುದು ಈ ಚಿತ್ರದ ಕಥಾವಸ್ತು. ‘ಸ್ಕೇರಿ ಫಾರೆಸ್ಟ್’ ಶೀರ್ಷಿಕೆಗೆ ಪ್ರೀತಿ- ಭಯ- ಆತ್ಮ ಎಂಬ ಅಡಿಬರಹವೂ ಇದೆ.</p>.<p>ಮೂಲತಃ ತುಮಕೂರಿನ ಮಾರಶೆಟ್ಟಿ ಹಳ್ಳಿಯವರಾದ ಉದ್ಯಮಿ ಜಯಪ್ರಭು ಆರ್ ಲಿಂಗಾಯತ್ (ಈಗ ಮುಂಬೈ ನಿವಾಸಿ) ಈ ಚಿತ್ರದ ನಿರ್ಮಾಪಕರು.</p>.<p>‘ನನಗೆ ಕನ್ನಡದ ಬಗ್ಗೆ ಅಪಾರ ಪ್ರೇಮ ಹಾಗೂ ವರನಟ ಡಾ.ರಾಜಕುಮಾರ್ ಅವರ ಅಪ್ಪಟ ಅಭಿಮಾನಿ. ಅವರ ಅಭಿನಯದ ಚಿತ್ರಗಳೇ ನನಗೆ ಚಿತ್ರ ನಿರ್ಮಾಣಕ್ಕೆ ಸ್ಫೂರ್ತಿ’ ಎನ್ನುತ್ತಾರೆ ಜಯಪ್ರಭು.</p>.<p>ಸ್ನೇಹಿತರೊಬ್ಬರು ಹಿಂದಿ ಚಿತ್ರ ನಿರ್ಮಾಣಕ್ಕೆ ಹಣ ಹೂಡಲು ಕೇಳಿದಾಗ ಕನ್ನಡದಲ್ಲಿಯೂ ನಿರ್ಮಾಣ ಮಾಡಿದರೆ ಮಾತ್ರ ಹಣ ಹೂಡುವುದಾಗಿ ಹೇಳಿದ್ದಾರೆ ಜಯಪ್ರಭು. ಚಿತ್ರದ ತಾಂತ್ರಿಕ ವರ್ಗದಲ್ಲೂ ಹೆಚ್ಚಿನ ಪಾಲು ಕನ್ನಡಿಗರಿಗೆ ನೀಡಿದ್ದಾರೆ. ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ಬಾಲಿವುಡ್ ನಲ್ಲಿ ಅನುಭವ ಹೊಂದಿರುವ ಸಂಜಯ್ ಅಭೀರ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದಾರೆ.</p>.<p>ಕನ್ನಡದ ಯುವ ಪ್ರತಿಭೆ ಆದಿ ಹಾಗೂ ಎಲ್.ಕೆ.ಲಕ್ಷ್ಮೀಕಾಂತ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಹಿನ್ನೆಲೆ ಸಂಗೀತ ಲಕ್ಷ್ಮೀಕಾಂತ್ ಅವರದು.</p>.<p>ಹಾಲಿವುಡ್ ನ ಜಂಗಲ್ಬುಕ್ 1994, ಹಿಂದಿಯ ರಾಗಿಣಿ ಎಂ.ಎಂ.ಎಸ್ 2 ಸೇರಿದಂತೆ ಮುಂತಾದ ಹೆಸರಾಂತ ಚಿತ್ರಗಳ ಛಾಯಾಗ್ರಾಹಕರಾದ ನರೇನ್ ಗೇಡಿಯಾ ಅವರ ಛಾಯಾಗ್ರಹಣ, ರಾಜೇಶ್ ಶಾ ಸಂಕಲನ ಹಾಗೂ ದೀಪಕ್ ಶರ್ಮ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.</p>.<p>ಕುತೂಹಲಕಾರಿ ಕಥೆಯೊಂದಿಗೆ ತ್ರಿಕೋನ ಲವ್ ಸ್ಟೋರಿ ಸಹ ಈ ಚಿತ್ರದಲ್ಲಿದೆ. ನಿರ್ಮಾಪಕ ಜಯಪ್ರಭು ಸಹ ಈ ಚಿತ್ರದ ನಾಯಕನಾಗಿ ಅಭಿನಯಿಸಿದ್ದಾರೆ. ಜೀತ್ ರಾಯ್ದತ್ ಈ ಚಿತ್ರದ ಎರಡನೇ ನಾಯಕ. ಬಹುಭಾಷ ನಟ ಯಶ್ ಪಾಲ್ ಶರ್ಮ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಕೊಡಗಿನ ಟೀನಾ ಪೊನ್ನಪ್ಪ, ಆಮ್ ರೀನ್, ಕಲ್ಪನಾ ಈ ಚಿತ್ರದ ನಾಯಕಿಯರು. ಅಷ್ಟೇ ಅಲ್ಲದೆ ಅನುಭವಿ ಕಲಾವಿದರ ದೊಡ್ಡ ತಾರಾಬಳಗ ಈ ಚಿತ್ರದಲ್ಲಿದೆ. ನಿರ್ಮಾಪಕರಪುತ್ರಿ ಬೇಬಿ ಪೂಜಾ ಸಹ ಈ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ.</p>.<p>ತುಮಕೂರಿನ ಸಿದ್ದಗಂಗಾ ಮಠದಲ್ಲಿ ಕಳೆದ ಡಿಸೆಂಬರ್ನಲ್ಲಿ ಚಿತ್ರೀಕರಣ ಆರಂಭವಾಗಿತ್ತು. ಸಚಿವ ಮಾಧುಸ್ವಾಮಿ ಅವರು ಚಿತ್ರೀಕರಣಕ್ಕೆ ಚಾಲನೆ ನೀಡಿದ್ದರು. ಸಿದ್ದಗಂಗಾ ಮಠದ ಆವರಣ, ತುಮಕೂರು, ಚಿಕ್ಕಮಗಳೂರು ಹಾಗೂ ಮುಂಬೈನಲ್ಲಿ ಚಿತ್ರೀಕರಣ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>