<p>ಪೆನ್ಸಿಲ್ ಕುರಿತಾದ ಕಥೆಯನ್ನು ಹೊಂದಿರುವ ‘ಸೀಸ್ ಕಡ್ಡಿ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ರತನ್ ಗಂಗಾಧರ್ ನಿರ್ದೇಶನದ ಚಿತ್ರವಿದು. ಹೊಸ ನಿರ್ದೇಶಕರುಗಳು ಈ ಚಿತ್ರದ ಟ್ರೇಲರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದ್ದು ವಿಶೇಷವಾಗಿತ್ತು. </p>.<p>‘ಪುಸ್ತಕವೊಂದನ್ನು ಓದಿದಾಗ ಅದರಲ್ಲಿ ಪೆನ್ಸಿಲ್ನ ನಾನಾ ಸೂಕ್ಷ್ಮಗಳ ವಿವರಗಳಿತ್ತು. ಅದನ್ನು ಐದು ಪಾತ್ರಗಳನ್ನಾಗಿಸಿ, ಅದಕ್ಕೆ ಹೊಂದಿಕೊಂಡಂತೆ ಐದು ಕಥೆಗಳನ್ನು ಸೃಷ್ಟಿಸಿ, ಆ ಕಥೆಗಳೆಲ್ಲ ಒಂದು ಬಿಂದುವಿನಲ್ಲಿ ಸಂಧಿಸುವಂತೆ ಕಥೆ ಹೆಣೆಯಲಾಗಿದೆ. ಈ ಚಿತ್ರದಲ್ಲಿ ಬೆಂಗಳೂರು ಕನ್ನಡ, ಹವಿಗನ್ನಡ, ತುಮಕೂರು ಭಾಗದ ಹಳ್ಳಿಗಾಡಿನ ಕನ್ನಡ ಹಾಗೂ ಮೈಸೂರು ಸೀಮೆಯ ಕನ್ನಡ ಬಳಸಲಾಗಿದೆ. ಒಟ್ಟಾರೆ ಚಿತ್ರ ಪ್ರೇಕ್ಷಕರಿಗೆ ಹೊಸ ಅನುಭೂತಿ ನೀಡಲಿದೆ ಎಂಬ ನಂಬಿಕೆಯಿದೆ’ ಎಂದರು ನಿರ್ದೇಶಕರು.</p>.<p>ಗ್ರಹಣ ಪ್ರೊಡಕ್ಷನ್ ಮೂಲಕ ರತನ್ ಗಂಗಾಧರ್, ಸಂಪತ್ ಶಿವಶಂಕರ್, ಕೃತಿ ನಾಣಯ್ಯ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.</p>.<p>‘ಮಕ್ಕಳ ಮುಗ್ಧತೆಯನ್ನು ನೈಜವಾಗಿ ಸೆರೆಹಿಡಿಯಲಾಗಿದೆ. ಟ್ರೇಲರ್ ನೋಡಿದರೆ ಸಿನಿಮಾ ಭರವಸೆ ಮೂಡಿಸುತ್ತಿದೆ. ಈ ಸಿನಿಮಾ ಗೆಲ್ಲಬೇಕು. ಚಿತ್ರಮಂದಿರಗಳಲ್ಲಿಯೇ ಇಂಥ ಸಿನಿಮಾಗಳು ಗೆಲ್ಲಬೇಕು. ಆಗ ಹೊಸತಂಡಗಳಿಗೆ ಇನ್ನಷ್ಟು ಚಿತ್ರ ಮಾಡಲು ಸ್ಫೂರ್ತಿ ಬರುತ್ತದೆ’ ಎಂದರು ‘ಘೋಸ್ಟ್’ ಖ್ಯಾತಿಯ ನಿರ್ದೇಶಕ ಶ್ರೀನಿ. </p>.<p>ಈ ಚಿತ್ರಕ್ಕೆ ಸುನಿಲ್ ನರಸಿಂಹಮೂರ್ತಿ ಛಾಯಾಚಿತ್ರಗ್ರಹಣ, ಕೆ.ಸಿ ಬಾಲಸಾರಂಗನ್ ಸಂಗೀತ ನಿರ್ದೇಶನ, ಅನಿರುದ್ಧ್ ಹರ್ಷವರ್ಧನ್ ಸಂಕಲನವಿದೆ. ಸಿತಿನ್ ಅಪ್ಪಯ್ಯ, ಬಿ.ಎಸ್. ರಾಮಮೂರ್ತಿ, ಮಾನ್ವಿ ಬಳಗಾರ್, ನೊಣವಿನಕೆರೆ ರಾಮಕೃಷ್ಣಯ್ಯ ಮುಂತಾದವರ ತಾರಾಗಣವಿರುವ ಈ ಚಿತ್ರ ಜೂನ್ 6ರಂದು ತೆರೆ ಕಾಣಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪೆನ್ಸಿಲ್ ಕುರಿತಾದ ಕಥೆಯನ್ನು ಹೊಂದಿರುವ ‘ಸೀಸ್ ಕಡ್ಡಿ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ರತನ್ ಗಂಗಾಧರ್ ನಿರ್ದೇಶನದ ಚಿತ್ರವಿದು. ಹೊಸ ನಿರ್ದೇಶಕರುಗಳು ಈ ಚಿತ್ರದ ಟ್ರೇಲರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದ್ದು ವಿಶೇಷವಾಗಿತ್ತು. </p>.<p>‘ಪುಸ್ತಕವೊಂದನ್ನು ಓದಿದಾಗ ಅದರಲ್ಲಿ ಪೆನ್ಸಿಲ್ನ ನಾನಾ ಸೂಕ್ಷ್ಮಗಳ ವಿವರಗಳಿತ್ತು. ಅದನ್ನು ಐದು ಪಾತ್ರಗಳನ್ನಾಗಿಸಿ, ಅದಕ್ಕೆ ಹೊಂದಿಕೊಂಡಂತೆ ಐದು ಕಥೆಗಳನ್ನು ಸೃಷ್ಟಿಸಿ, ಆ ಕಥೆಗಳೆಲ್ಲ ಒಂದು ಬಿಂದುವಿನಲ್ಲಿ ಸಂಧಿಸುವಂತೆ ಕಥೆ ಹೆಣೆಯಲಾಗಿದೆ. ಈ ಚಿತ್ರದಲ್ಲಿ ಬೆಂಗಳೂರು ಕನ್ನಡ, ಹವಿಗನ್ನಡ, ತುಮಕೂರು ಭಾಗದ ಹಳ್ಳಿಗಾಡಿನ ಕನ್ನಡ ಹಾಗೂ ಮೈಸೂರು ಸೀಮೆಯ ಕನ್ನಡ ಬಳಸಲಾಗಿದೆ. ಒಟ್ಟಾರೆ ಚಿತ್ರ ಪ್ರೇಕ್ಷಕರಿಗೆ ಹೊಸ ಅನುಭೂತಿ ನೀಡಲಿದೆ ಎಂಬ ನಂಬಿಕೆಯಿದೆ’ ಎಂದರು ನಿರ್ದೇಶಕರು.</p>.<p>ಗ್ರಹಣ ಪ್ರೊಡಕ್ಷನ್ ಮೂಲಕ ರತನ್ ಗಂಗಾಧರ್, ಸಂಪತ್ ಶಿವಶಂಕರ್, ಕೃತಿ ನಾಣಯ್ಯ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.</p>.<p>‘ಮಕ್ಕಳ ಮುಗ್ಧತೆಯನ್ನು ನೈಜವಾಗಿ ಸೆರೆಹಿಡಿಯಲಾಗಿದೆ. ಟ್ರೇಲರ್ ನೋಡಿದರೆ ಸಿನಿಮಾ ಭರವಸೆ ಮೂಡಿಸುತ್ತಿದೆ. ಈ ಸಿನಿಮಾ ಗೆಲ್ಲಬೇಕು. ಚಿತ್ರಮಂದಿರಗಳಲ್ಲಿಯೇ ಇಂಥ ಸಿನಿಮಾಗಳು ಗೆಲ್ಲಬೇಕು. ಆಗ ಹೊಸತಂಡಗಳಿಗೆ ಇನ್ನಷ್ಟು ಚಿತ್ರ ಮಾಡಲು ಸ್ಫೂರ್ತಿ ಬರುತ್ತದೆ’ ಎಂದರು ‘ಘೋಸ್ಟ್’ ಖ್ಯಾತಿಯ ನಿರ್ದೇಶಕ ಶ್ರೀನಿ. </p>.<p>ಈ ಚಿತ್ರಕ್ಕೆ ಸುನಿಲ್ ನರಸಿಂಹಮೂರ್ತಿ ಛಾಯಾಚಿತ್ರಗ್ರಹಣ, ಕೆ.ಸಿ ಬಾಲಸಾರಂಗನ್ ಸಂಗೀತ ನಿರ್ದೇಶನ, ಅನಿರುದ್ಧ್ ಹರ್ಷವರ್ಧನ್ ಸಂಕಲನವಿದೆ. ಸಿತಿನ್ ಅಪ್ಪಯ್ಯ, ಬಿ.ಎಸ್. ರಾಮಮೂರ್ತಿ, ಮಾನ್ವಿ ಬಳಗಾರ್, ನೊಣವಿನಕೆರೆ ರಾಮಕೃಷ್ಣಯ್ಯ ಮುಂತಾದವರ ತಾರಾಗಣವಿರುವ ಈ ಚಿತ್ರ ಜೂನ್ 6ರಂದು ತೆರೆ ಕಾಣಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>