<p><strong>ಸೇಡಂ: ‘</strong>ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತರ ಪರ ಸರ್ಕಾರವಾಗಿದ್ದು, ಮುಂದಿನ ಎರಡು ದಿನಗಳ ಒಳಗೆ ಜಿಲ್ಲೆಯಲ್ಲಿ ಕಡಲೆ ಖರೀದಿ ಕೇಂದ್ರ ತೆರೆಯಲಾಗುತ್ತದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.</p>.<p> ತಾಲ್ಲೂಕಿನ ಬೀರನಳ್ಳಿ-ಬಿಜನಳ್ಳಿ ಕೂಡು ರಸ್ತೆಗೆ ಭಾನುವಾರ ಅಡಿಗಲ್ಲು ಸಮಾರಂಭ ನೆರವೇರಿಸಿ ಅವರು ಮಾತನಾಡಿದರು. ‘ಜಿಲ್ಲೆಯಲ್ಲಿ ಈಗಾಗಲೇ ಅನೇಕ ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ₹550 ಬೆಂಬಲ ನೀಡಿ ರೈತರಿಂದ ತೊಗರಿಯನ್ನು ಖರೀದಿಸಲಾಗುತ್ತಿದೆ. ಅಲ್ಲದೆ, ಕಡಲೆ ಧಾನ್ಯದ ದರ ಮಾರುಕಟ್ಟೆಯಲ್ಲಿ ಕಡಿಮೆಯಾಗಿದ್ದರಿಂದ ರೈತರಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಈ ಕುರಿತು ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಕ್ವಿಂಟಲ್ಗೆ ₹4,040 ನೀಡಿ ಖರೀದಿಸುವ ಚಿಂತನೆ ನಡೆದಿದೆ’ ಎಂದರು.</p>.<p>‘ಕಾಡಾ’ ಅಧ್ಯಕ್ಷ ಮಹಾಂತಪ್ಪ ಸಂಗಾವಿ ಮಾತನಾಡಿ, ‘ಜಿಲ್ಲೆಯಲ್ಲಿ ಈಗಾಗಲೇ ಸುಮಾರು 136 ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಸರ್ಕಾರ ಬೆಂಬಲ ಬೆಲೆ ನೀಡಿ ರೈತರಿಂದ ತೊಗರಿ ಖರೀದಿ ಮಾಡಲಾಗುತ್ತಿದೆ. ಅಲ್ಲದೆ, ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಜಿಲ್ಲೆಯ ವಿವಿಧ ಗ್ರಾಮಗಳ ಅನೇಕ ರಸ್ತೆಗಳನ್ನು ಅಭಿವೃದ್ಧಿ ಮಾಡುವ ಕೆಲಸವನ್ನು ಸಚಿವ ಶರಣಪ್ರಕಾಶ ಪಾಟೀಲ ಮಾಡಿದ್ದಾರೆ’ ಎಂದು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸದಸ್ಯ ಚೆನ್ನಬಸಪ್ಪ ಹಾಗರಗಿ ಮಾತನಾಡಿ, ‘ಸಚಿವರು ಅಭಿವೃದ್ಧಿ ವಿಷಯದಲ್ಲಿ ಪ್ರಾಮಾಣಿಕತೆ ಮತ್ತು ಸಹೃದಯಿ ಮನಸ್ಸನ್ನು ಹೊಂದಿದ್ದಾರೆ. ಅವರು ಅನೇಕ ಅಭಿವೃದ್ಧಿಯ ಕೆಲಸಗಳನ್ನು ಮಾಡಿದ್ದಾರೆ. ಅವರಿಗೆ ಮುಂದಿನ ದಿನಗಳಲ್ಲಿ ಜನತೆ ಬೆಂಬಲಿಸುವ ಅವಶ್ಯಕತೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಧೂಳಪ್ಪ ದೊಡ್ಡಮನಿ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸುರೇಖಾ ರಾಜಶೇಖರ ಪುರಾಣಿಕ, ಜಿಲ್ಲಾ ಪಂಚಾಯಿತಿ ಸದಸ್ಯೆ ದೇವಮ್ಮ ಕರೆಪ್ಪ ಪಿಲ್ಲಿ, ಮಳಖೇಡ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ ನಂದೂರ, ಮೀರಾಜ ಪಟೇಲ್, ಅಮೃತಪ್ಪ ಸಾಹು, ಶಿವಶಂಕರಪ್ಪ, ಹಸನಪ್ಪ, ಮಹಾದೇವಪ್ಪ, ಚಂದ್ರಶೇಖರ ಪಾಟೀಲ, ವೀರಯ್ಯಸ್ವಾಮಿ, ವಜೀರ ಪಟೇಲ್ ಇದ್ದರು. ಗ್ರಾಮದ ಮುಖಂಡ ರಾಮಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು.</p>.<p><strong>ತಪ್ಪಾಗಿ ಪ್ರಕಟವಾದ ಅಧ್ಯಕ್ಷರ ಹೆಸರು</strong><br /> ಸೇಡಂ: ‘ತಾಲ್ಲೂಕಿನ ಕುಕ್ಕುಂದಾ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಾಬಾಯಿ ಅವರು ಇದ್ದಾರೆ. ಆದರೆ, ಆಮಂತ್ರಣ ಪತ್ರಿಕೆ ಹಾಗೂ ಶಿಲ್ಯಾನ್ಯಾಸದಲ್ಲಿ ಶಿವರಾಜ ವೀರಭದ್ರಪ್ಪ ಅಣ್ಣೆಪ್ಪಗೋಳ’ ಎಂದು ಪ್ರಕಟಿಸಲಾಗಿತ್ತು.</p>.<p>‘ಅಲ್ಲದೆ, ಕಾರ್ಯಕ್ರಮದ ವೇದಿಕೆಯ ಮೇಲೆ ಶಿವರಾಜ ಅವರೇ ಆಸೀನರಾಗಿ, ಸನ್ಮಾನ ಸ್ವೀಕರಿಸಿದ್ದರು. ಇದರಿಂದ ಜನರಿಗೆ ಹಾಗೂ ಆಗಮಿಸಿದ ಜನಪ್ರತಿನಿಧಿಗಳಿಗೆ ಇರುಮುರುಸಾಯಿತು. ಅಧಿಕಾರಿಗಳಿಗೆ ಜನರು ಆಗಮಿಸಿ ಪ್ರಶ್ನಿಸುತ್ತಿದ್ದುದು ಕಂಡುಬಂತು.</p>.<p>* * </p>.<p>ಪ್ರಜಾಭುತ್ವದ ವ್ಯವಸ್ಥೆಯಲ್ಲಿ ಸಂವಿಧಾನ ಪ್ರತಿಯೊಬ್ಬರಿಗೂ ಮತದಾನದ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಇದನ್ನು ಸರಿಯಾಗಿ ಬಳಸಿಕೊಳ್ಳಬೇಕು.<br /> <strong>ಡಾ.ಶರಣಪ್ರಕಾಶ ಪಾಟೀಲ, </strong><br /> ವೈದ್ಯಕೀಯ ಶಿಕ್ಷಣ ಸಚಿವ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೇಡಂ: ‘</strong>ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತರ ಪರ ಸರ್ಕಾರವಾಗಿದ್ದು, ಮುಂದಿನ ಎರಡು ದಿನಗಳ ಒಳಗೆ ಜಿಲ್ಲೆಯಲ್ಲಿ ಕಡಲೆ ಖರೀದಿ ಕೇಂದ್ರ ತೆರೆಯಲಾಗುತ್ತದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.</p>.<p> ತಾಲ್ಲೂಕಿನ ಬೀರನಳ್ಳಿ-ಬಿಜನಳ್ಳಿ ಕೂಡು ರಸ್ತೆಗೆ ಭಾನುವಾರ ಅಡಿಗಲ್ಲು ಸಮಾರಂಭ ನೆರವೇರಿಸಿ ಅವರು ಮಾತನಾಡಿದರು. ‘ಜಿಲ್ಲೆಯಲ್ಲಿ ಈಗಾಗಲೇ ಅನೇಕ ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ₹550 ಬೆಂಬಲ ನೀಡಿ ರೈತರಿಂದ ತೊಗರಿಯನ್ನು ಖರೀದಿಸಲಾಗುತ್ತಿದೆ. ಅಲ್ಲದೆ, ಕಡಲೆ ಧಾನ್ಯದ ದರ ಮಾರುಕಟ್ಟೆಯಲ್ಲಿ ಕಡಿಮೆಯಾಗಿದ್ದರಿಂದ ರೈತರಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಈ ಕುರಿತು ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಕ್ವಿಂಟಲ್ಗೆ ₹4,040 ನೀಡಿ ಖರೀದಿಸುವ ಚಿಂತನೆ ನಡೆದಿದೆ’ ಎಂದರು.</p>.<p>‘ಕಾಡಾ’ ಅಧ್ಯಕ್ಷ ಮಹಾಂತಪ್ಪ ಸಂಗಾವಿ ಮಾತನಾಡಿ, ‘ಜಿಲ್ಲೆಯಲ್ಲಿ ಈಗಾಗಲೇ ಸುಮಾರು 136 ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಸರ್ಕಾರ ಬೆಂಬಲ ಬೆಲೆ ನೀಡಿ ರೈತರಿಂದ ತೊಗರಿ ಖರೀದಿ ಮಾಡಲಾಗುತ್ತಿದೆ. ಅಲ್ಲದೆ, ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಜಿಲ್ಲೆಯ ವಿವಿಧ ಗ್ರಾಮಗಳ ಅನೇಕ ರಸ್ತೆಗಳನ್ನು ಅಭಿವೃದ್ಧಿ ಮಾಡುವ ಕೆಲಸವನ್ನು ಸಚಿವ ಶರಣಪ್ರಕಾಶ ಪಾಟೀಲ ಮಾಡಿದ್ದಾರೆ’ ಎಂದು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸದಸ್ಯ ಚೆನ್ನಬಸಪ್ಪ ಹಾಗರಗಿ ಮಾತನಾಡಿ, ‘ಸಚಿವರು ಅಭಿವೃದ್ಧಿ ವಿಷಯದಲ್ಲಿ ಪ್ರಾಮಾಣಿಕತೆ ಮತ್ತು ಸಹೃದಯಿ ಮನಸ್ಸನ್ನು ಹೊಂದಿದ್ದಾರೆ. ಅವರು ಅನೇಕ ಅಭಿವೃದ್ಧಿಯ ಕೆಲಸಗಳನ್ನು ಮಾಡಿದ್ದಾರೆ. ಅವರಿಗೆ ಮುಂದಿನ ದಿನಗಳಲ್ಲಿ ಜನತೆ ಬೆಂಬಲಿಸುವ ಅವಶ್ಯಕತೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಧೂಳಪ್ಪ ದೊಡ್ಡಮನಿ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸುರೇಖಾ ರಾಜಶೇಖರ ಪುರಾಣಿಕ, ಜಿಲ್ಲಾ ಪಂಚಾಯಿತಿ ಸದಸ್ಯೆ ದೇವಮ್ಮ ಕರೆಪ್ಪ ಪಿಲ್ಲಿ, ಮಳಖೇಡ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ ನಂದೂರ, ಮೀರಾಜ ಪಟೇಲ್, ಅಮೃತಪ್ಪ ಸಾಹು, ಶಿವಶಂಕರಪ್ಪ, ಹಸನಪ್ಪ, ಮಹಾದೇವಪ್ಪ, ಚಂದ್ರಶೇಖರ ಪಾಟೀಲ, ವೀರಯ್ಯಸ್ವಾಮಿ, ವಜೀರ ಪಟೇಲ್ ಇದ್ದರು. ಗ್ರಾಮದ ಮುಖಂಡ ರಾಮಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು.</p>.<p><strong>ತಪ್ಪಾಗಿ ಪ್ರಕಟವಾದ ಅಧ್ಯಕ್ಷರ ಹೆಸರು</strong><br /> ಸೇಡಂ: ‘ತಾಲ್ಲೂಕಿನ ಕುಕ್ಕುಂದಾ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಾಬಾಯಿ ಅವರು ಇದ್ದಾರೆ. ಆದರೆ, ಆಮಂತ್ರಣ ಪತ್ರಿಕೆ ಹಾಗೂ ಶಿಲ್ಯಾನ್ಯಾಸದಲ್ಲಿ ಶಿವರಾಜ ವೀರಭದ್ರಪ್ಪ ಅಣ್ಣೆಪ್ಪಗೋಳ’ ಎಂದು ಪ್ರಕಟಿಸಲಾಗಿತ್ತು.</p>.<p>‘ಅಲ್ಲದೆ, ಕಾರ್ಯಕ್ರಮದ ವೇದಿಕೆಯ ಮೇಲೆ ಶಿವರಾಜ ಅವರೇ ಆಸೀನರಾಗಿ, ಸನ್ಮಾನ ಸ್ವೀಕರಿಸಿದ್ದರು. ಇದರಿಂದ ಜನರಿಗೆ ಹಾಗೂ ಆಗಮಿಸಿದ ಜನಪ್ರತಿನಿಧಿಗಳಿಗೆ ಇರುಮುರುಸಾಯಿತು. ಅಧಿಕಾರಿಗಳಿಗೆ ಜನರು ಆಗಮಿಸಿ ಪ್ರಶ್ನಿಸುತ್ತಿದ್ದುದು ಕಂಡುಬಂತು.</p>.<p>* * </p>.<p>ಪ್ರಜಾಭುತ್ವದ ವ್ಯವಸ್ಥೆಯಲ್ಲಿ ಸಂವಿಧಾನ ಪ್ರತಿಯೊಬ್ಬರಿಗೂ ಮತದಾನದ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಇದನ್ನು ಸರಿಯಾಗಿ ಬಳಸಿಕೊಳ್ಳಬೇಕು.<br /> <strong>ಡಾ.ಶರಣಪ್ರಕಾಶ ಪಾಟೀಲ, </strong><br /> ವೈದ್ಯಕೀಯ ಶಿಕ್ಷಣ ಸಚಿವ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>