<p><strong>ಬೆಂಗಳೂರು: </strong>ಹಿರಿಯ ಪತ್ರಕರ್ತ, ನಟ ಸುರೇಶ್ಚಂದ್ರ (69) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು.<br /><br />ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಮೃತರ ಅಂತ್ಯಕ್ರಿಯೆತುಮಕೂರು ಜಿಲ್ಲೆಯ ಮಧುಗಿರಿಯ ಲಿಂಗೇನಹಳ್ಳಿ ಗ್ರಾಮದಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.<br /><br />ದೀರ್ಘಕಾಲ ಸಿನಿಮಾ, ರಾಜಕೀಯ ಕ್ಷೇತ್ರದ ಪತ್ರಕರ್ತರಾಗಿ ಸಂಜೆವಾಣಿ ಪತ್ರಿಕೆಯಲ್ಲಿ ಅವರು ದುಡಿದಿದ್ದರು.<br /><br />ಸರಿ ಸುಮಾರು 50ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಸಿನಿಮಾ, ರಂಗಭೂಮಿ, ಸಂಗೀತದ ಅಭಿರುಚಿ ಹೊಂದಿದ್ದ ಅವರು ಸಾಂಸ್ಕೃತಿಕ ವಲಯದಲ್ಲಿ ಸಕ್ರಿಯವಾಗಿದ್ದರು.</p>.<p>ಭಾರತೀಯ ವಿದ್ಯಾಭವನದಲ್ಲಿ ಸ್ನಾತಕೋತ್ತರ ಪತ್ರಿಕೋದ್ಯಮ ಡಿಪ್ಲೊಮಾ ಮಾಡಿದ್ದರು. ‘ಪ್ರಜಾವಾಣಿ’ಯಲ್ಲಿ ಮೂರು ತಿಂಗಳು ಇಂಟರ್ನ್ಶಿಪ್ ಮೂಲಕ ಪತ್ರಿಕೋದ್ಯಮಕ್ಕೆ ಮೊದಲ ಹೆಜ್ಜೆಇಟ್ಟಿದ್ದ ಸುರೇಶ್ಚಂದ್ರ ಅವರು ‘ಸಂಜೆವಾಣಿ’ಗೆ ಸೇರಿ ಅಲ್ಲಿಯೇ ಮುಂದುವರಿದು ಸಂಪಾದಕರಾಗಿ ನಿವೃತ್ತರಾಗಿದ್ದರು.</p>.<p>ಕೆಲ ಚಿತ್ರಗಳಲ್ಲಿ ಸಣ್ಣಪುಟ್ಟ ಪಾತ್ರ ಮಾಡಿಕೊಂಡಿದ್ದ ಅವರು, ಎಸ್.ನಾರಾಯಣ್ ನಿರ್ದೇಶನದ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಚೆಲುವಿನ ಚಿತ್ತಾರ’ದಲ್ಲಿ ನಾಯಕಿಯ ಅಪ್ಪನ ಪಾತ್ರದ ಮುಖಾಂತರ, ಖ್ಯಾತಿಪಡೆದಿದ್ದರು. ಅವರು ನಟಿಸಿದ ಚಿತ್ರಗಳ ‘ನಂದ ಲವ್ಸ್ ನಂದಿತ’, ‘ಜಂಗ್ಲಿ’, ‘ಉಗ್ರಂ’ ಸಿನಿಮಾಗಳು ಹಿಟ್ ಆಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಹಿರಿಯ ಪತ್ರಕರ್ತ, ನಟ ಸುರೇಶ್ಚಂದ್ರ (69) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು.<br /><br />ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಮೃತರ ಅಂತ್ಯಕ್ರಿಯೆತುಮಕೂರು ಜಿಲ್ಲೆಯ ಮಧುಗಿರಿಯ ಲಿಂಗೇನಹಳ್ಳಿ ಗ್ರಾಮದಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.<br /><br />ದೀರ್ಘಕಾಲ ಸಿನಿಮಾ, ರಾಜಕೀಯ ಕ್ಷೇತ್ರದ ಪತ್ರಕರ್ತರಾಗಿ ಸಂಜೆವಾಣಿ ಪತ್ರಿಕೆಯಲ್ಲಿ ಅವರು ದುಡಿದಿದ್ದರು.<br /><br />ಸರಿ ಸುಮಾರು 50ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಸಿನಿಮಾ, ರಂಗಭೂಮಿ, ಸಂಗೀತದ ಅಭಿರುಚಿ ಹೊಂದಿದ್ದ ಅವರು ಸಾಂಸ್ಕೃತಿಕ ವಲಯದಲ್ಲಿ ಸಕ್ರಿಯವಾಗಿದ್ದರು.</p>.<p>ಭಾರತೀಯ ವಿದ್ಯಾಭವನದಲ್ಲಿ ಸ್ನಾತಕೋತ್ತರ ಪತ್ರಿಕೋದ್ಯಮ ಡಿಪ್ಲೊಮಾ ಮಾಡಿದ್ದರು. ‘ಪ್ರಜಾವಾಣಿ’ಯಲ್ಲಿ ಮೂರು ತಿಂಗಳು ಇಂಟರ್ನ್ಶಿಪ್ ಮೂಲಕ ಪತ್ರಿಕೋದ್ಯಮಕ್ಕೆ ಮೊದಲ ಹೆಜ್ಜೆಇಟ್ಟಿದ್ದ ಸುರೇಶ್ಚಂದ್ರ ಅವರು ‘ಸಂಜೆವಾಣಿ’ಗೆ ಸೇರಿ ಅಲ್ಲಿಯೇ ಮುಂದುವರಿದು ಸಂಪಾದಕರಾಗಿ ನಿವೃತ್ತರಾಗಿದ್ದರು.</p>.<p>ಕೆಲ ಚಿತ್ರಗಳಲ್ಲಿ ಸಣ್ಣಪುಟ್ಟ ಪಾತ್ರ ಮಾಡಿಕೊಂಡಿದ್ದ ಅವರು, ಎಸ್.ನಾರಾಯಣ್ ನಿರ್ದೇಶನದ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಚೆಲುವಿನ ಚಿತ್ತಾರ’ದಲ್ಲಿ ನಾಯಕಿಯ ಅಪ್ಪನ ಪಾತ್ರದ ಮುಖಾಂತರ, ಖ್ಯಾತಿಪಡೆದಿದ್ದರು. ಅವರು ನಟಿಸಿದ ಚಿತ್ರಗಳ ‘ನಂದ ಲವ್ಸ್ ನಂದಿತ’, ‘ಜಂಗ್ಲಿ’, ‘ಉಗ್ರಂ’ ಸಿನಿಮಾಗಳು ಹಿಟ್ ಆಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>