ಕನ್ನಡ ಚಲನಚಿತ್ರರಂಗದ ಹಿರಿಯ ನಿರ್ದೇಶಕ ಶ್ರೀ SK ಭಗವಾನ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು.
— Dr. Ashwathnarayan C. N. (@drashwathcn) February 20, 2023
ಕಸ್ತೂರಿ ನಿವಾಸ, ಎರಡು ಕನಸು ಸಹಿತ ಹಲವು ಸದಭಿರುಚಿಯ ಚಿತ್ರಗಳ ಮೂಲಕ ಮನೆ ಮಾತಾಗಿದ್ದ ಭಗವಾನ್ ಅವರ ಆತ್ಮಕ್ಕೆ ಸದ್ಗತಿ ಸಿಗಲಿ. ಕುಟುಂಬವರ್ಗದವರಿಗೆ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುವೆ. ಓಂ ಶಾಂತಿ. pic.twitter.com/XCcvRXpOoT
ಕನ್ನಡ ಕಲಾ ಜಗತ್ತು ಮತ್ತು ಸಿನಿಮಾ ಪ್ರಪಂಚವನ್ನು ಬೆಳಗಿ ಬೆಳ್ಳಿತೆರೆಯನ್ನು ಶ್ರೀಮಂತಗೊಳಿಸಿದ್ದ ಹಿರಿಯ ನಿರ್ದೇಶಕ ಎಸ್.ಕೆ.ಭಗವಾನ್ ಅವರ ನಿಧನದಿಂದ ದುಃಖಿತನಾಗಿದ್ದೇನೆ.
— Siddaramaiah (@siddaramaiah) February 20, 2023
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅಭಿಮಾನಿಗಳು ಮತ್ತು ಕುಟುಂಬ ವರ್ಗಕ್ಕೆ ದೇವರು ಕರುಣಿಸಲೆಂದು ಪ್ರಾರ್ಥಿಸುತ್ತೇನೆ. pic.twitter.com/S6Xe4Bi0C8
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ ವಿಧಿವಶರಾದ ಸುದ್ದಿ ಆಘಾತ ತಂದಿದೆ. ಸ್ಯಾಂಡಲ್ವುಡ್ನ ದಂತಕಥೆ ಎಂದೇ ಪ್ರಖ್ಯಾತಿ ಪಡೆದಿದ್ದ ಭಗವಾನ್ ಡಾ.ರಾಜ್ರವರ ಅನೇಕ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿದ್ದರು.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) February 20, 2023
ಮತ್ತೊಬ್ಬ ನಿರ್ದೇಶಕ ದೊರೈರಾಜ್ ಜೊತೆ ಭಗವಾನ್ 27 ಚಿತ್ರಗಳನ್ನು ನಿರ್ದೇಶಿಸಿದ್ದರು. ಅಗಲಿದ ಚೇತನಕ್ಕೆ ಅಶ್ರುತರ್ಪಣಗಳು. pic.twitter.com/1EDMu97QOc
ಭಾವಪೂರ್ಣ ನಮನ🙏
— ರೂಪೇಶ್ ರಾಜಣ್ಣ(RUPESH RAJANNA) (@rajanna_rupesh) February 20, 2023
ಕನ್ನಡ ಚಲನಚಿತ್ರರಂಗದ ಹಿರಿಯ ನಿರ್ದೇಶಕರು ಎಸ್.ಕೆ.ಭಗವಾನ್ ಇನ್ನಿಲ್ಲ.
ಭಗವಾನ್ ರವರು ಕನ್ನಡ ಚಿತ್ರರಂಗದಲ್ಲಿ ನಟರಾಗಿ,ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿಯೂ ಹೆಸರು ಮಾಡಿದ್ದಾರೆ. ದೊರೆ–ಭಗವಾನ್ ಖ್ಯಾತಿಯ ಜೋಡಿ ‘ಹೊಸಬೆಳಕು’,‘ಕಸ್ತೂರಿ ನಿವಾಸ’ಸೇರಿದಂತೆ 50ಕ್ಕೂ ಅಧಿಕ ಹಿಟ್ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. pic.twitter.com/ECc4yops6p
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.