ಮುಂಬೈ: ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ಅಂತ್ಯಕ್ರಿಯೆ ಸಂದರ್ಭದಲ್ಲಿ ಬಾಲಿವುಡ್ ನಟ ಶಾರುಖ್ಖಾನ್ ಅವರು ಪ್ರಾರ್ಥಿಸಿದ ರೀತಿಯು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗಿದ್ದು, ವಾಗ್ವಾದಕ್ಕೆ ಕಾರಣವಾಗಿದೆ.
ಶಿವಾಜಿ ಪಾರ್ಕ್ನಲ್ಲಿ ಭಾನುವಾರ ನಡೆದ ಅಂತ್ಯಕ್ರಿಯೆಯಲ್ಲಿ ಶಾರುಖ್ಅವರು ತಮ್ಮ ಮ್ಯಾನೇಜರ್ ಪೂಜಾ ದದ್ಲಾನಿ ಅವರೊಂದಿಗೆ ಪಾಲ್ಗೊಂಡು ಪ್ರಾರ್ಥನೆ ಸಲ್ಲಿಸಿದ್ದರು. ಈ ವೇಳೆ ಅವರು ಮಾಸ್ಕ್ ತೆರೆದು ದುಷ್ಟಶಕ್ತಿಗಳನ್ನು ದೂರವಿಡಲು ಗಾಳಿಯಲ್ಲಿ ಊದಿದರು.
ಈ ವಿಡಿಯೊ ವೈರಲ್ ಆಗಿದ್ದು ವಾಗ್ವಾದಕ್ಕೆ ಕಾರಣವಾಗಿದೆ. ಹರಿಯಾಣದ ಬಿಜೆಪಿ ಐಟಿ ಘಟಕದ ಉಸ್ತುವಾರಿ ಅರುಣ್ ಯಾದವ್ ಅವರು ‘ಕ್ಯಾ ಇಸ್ನೆ ಥೂಕಾ ಹೈ’ (ಅವರು ಉಗುಳಿದ್ದಾರೆಯೇ?) ಎಂದು ಪ್ರಶ್ನಿಸಿ ವಿವಾದ ಸೃಷ್ಟಿಸಿದ್ದಾರೆ.
ಲತಾ ಅವರ ಸ್ಮಾರಕಕ್ಕೆ ಬಿಜೆಪಿ ಒತ್ತಾಯ:
ಮುಂಬೈ: ಗಾಯಕಿ ಲತಾ ಮಂಗೇಶ್ಕರ್ ಅವರ ಅಂತ್ಯಕ್ರಿಯೆ ನಡೆದ ಇಲ್ಲಿನ ಶಿವಾಜಿ ಪಾರ್ಕ್ನಲ್ಲಿ ಅವರ ಗೌರವಾರ್ಥ ಸ್ಮಾರಕ ನಿರ್ಮಿಸುವಂತೆ ಬಿಜೆಪಿ ಒತ್ತಾಯಿಸಿದೆ.
ಅಂತ್ಯಕ್ರಿಯೆ ನಡೆದ ಒಂದು ದಿನದ ಬಳಿಕ ಬಿಜೆಪಿ ಶಾಸಕ ರಾಮ್ ಕದಂ ಅವರು ಈ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದಾರೆ.