<p>ಬಾಲಿವುಡ್ ನಟ ಶಾರುಖ್ ಖಾನ್ ಮಾಲೀಕತ್ವದ ಕೊಲ್ಕತ್ತ ನೈಟ್ ರೈಡರ್ಸ್ (KKR) ಫ್ರಾಂಚೈಸಿ, ಬಾಂಗ್ಲಾದೇಶದ ಆಟಗಾರ ಮುಸ್ತಾಫಿಜುರ್ ರೆಹಮಾನ್ ಅವರನ್ನು ₹9.20 ಕೋಟಿ ನೀಡಿ ಖರೀದಿಸಿರುವುದಕ್ಕೆ ಉತ್ತರ ಪ್ರದೇಶದ ಮಾಜಿ ಶಾಸಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಇತ್ತೀಚೆಗೆ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜಿನಲ್ಲಿ ಕೆಕೆಆರ್ ಫ್ರಾಂಚೈಸಿ ಬಾಂಗ್ಲಾದೇಶದ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರಿಗೆ ₹9.20 ಕೋಟಿ ಕೊಟ್ಟು ಖರೀದಿಸಿದ್ದರು. </p><p>ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳ ಮೇಲೆ ದಿನೇ ದಿನೇ ದೌರ್ಜನ್ಯಗಳು ಹೆಚ್ಚುತ್ತಿರುವುದರಿಂದ ಉತ್ತರ ಪ್ರದೇಶದ ಬಿಜಿಪಿ ಮುಖಂಡ ಹಾಗೂ ಮಾಜಿ ಶಾಸಕ ಸಂಗೀತ್ ಸೋಮ್ ಅವರು ನಟ ಶಾರುಖ್ ಖಾನ್ ಅವರನ್ನು ‘ದೇಶದ್ರೋಹಿ’ ಎಂದು ಕರೆದಿದ್ದಾರೆ. </p>.ಫುಟ್ಬಾಲ್ ತಾರೆ ಲಯೊನೆಲ್ ಮೆಸ್ಸಿ ಅವರನ್ನು ಭೇಟಿ ಮಾಡಿದ ನಟ ಶಾರುಖ್ ಖಾನ್.ಶಾರುಖ್ ಖಾನ್ ಜನ್ಮದಿನ: 30ಕ್ಕೂ ಹೆಚ್ಚು ಅಭಿಮಾನಿಗಳ ಮೊಬೈಲ್ ಕಳವು, ಮೂವರ ಬಂಧನ.<p>‘ಒಂದು ಕಡೆ ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಕೊಲ್ಲಲಾಗುತ್ತಿದೆ. ಮತ್ತೊಂದೆಡೆ ಆ ದೇಶದ ಆಟಗಾರರಿಗೆ ಐಪಿಎಲ್ ಆಡಲು ಕೋಟಿ ಕೋಟಿ ಹಣ ಕೊಟ್ಟು ಖರೀದಿಸಲಾಗುತ್ತಿದೆ. ದೇಶದ್ರೋಹಿ ಶಾರುಖ್ ಖಾನ್ ಬಾಂಗ್ಲಾದೇಶದ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ನನ್ನು ₹9.20 ಕೋಟಿಗೆ ಖರೀದಿಸಿದ್ದಾರೆ. ಆ ದೇಶದ್ರೋಹಿಗೆ ಈ ದೇಶದಲ್ಲಿ ವಾಸಿಸುವ ಹಕ್ಕಿಲ್ಲ’ ಎಂದು ಮೀರತ್ನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸೋಮ್ ಕಿಡಿಕಾರಿದ್ದಾರೆ.</p><p>’ಈ ದೇಶದ ಜನರು ನಿಮಗೆ ಉನ್ನತ ಸ್ಥಾನ ತಲುಪಲು ಸಹಾಯ ಮಾಡಿದ್ದಾರೆ. ನೀವು ಗಳಿಸಿರುವ ಪ್ರತಿಯೊಂದು ರೂಪಾಯಿ ಈ ದೇಶದ್ದು. ಆದರೆ, ನೀವು ಬಾಂಗ್ಲಾದೇಶದ ಆಟಗಾರನಿಗೆ ಕೋಟ್ಯಂತರ ರೂಪಾಯಿ ನೀಡುವ ಮೂಲಕ ಈ ದೇಶಕ್ಕೆ ದ್ರೋಹ ಮಾಡಿದ್ದೀರಿ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಲಿವುಡ್ ನಟ ಶಾರುಖ್ ಖಾನ್ ಮಾಲೀಕತ್ವದ ಕೊಲ್ಕತ್ತ ನೈಟ್ ರೈಡರ್ಸ್ (KKR) ಫ್ರಾಂಚೈಸಿ, ಬಾಂಗ್ಲಾದೇಶದ ಆಟಗಾರ ಮುಸ್ತಾಫಿಜುರ್ ರೆಹಮಾನ್ ಅವರನ್ನು ₹9.20 ಕೋಟಿ ನೀಡಿ ಖರೀದಿಸಿರುವುದಕ್ಕೆ ಉತ್ತರ ಪ್ರದೇಶದ ಮಾಜಿ ಶಾಸಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಇತ್ತೀಚೆಗೆ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜಿನಲ್ಲಿ ಕೆಕೆಆರ್ ಫ್ರಾಂಚೈಸಿ ಬಾಂಗ್ಲಾದೇಶದ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರಿಗೆ ₹9.20 ಕೋಟಿ ಕೊಟ್ಟು ಖರೀದಿಸಿದ್ದರು. </p><p>ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳ ಮೇಲೆ ದಿನೇ ದಿನೇ ದೌರ್ಜನ್ಯಗಳು ಹೆಚ್ಚುತ್ತಿರುವುದರಿಂದ ಉತ್ತರ ಪ್ರದೇಶದ ಬಿಜಿಪಿ ಮುಖಂಡ ಹಾಗೂ ಮಾಜಿ ಶಾಸಕ ಸಂಗೀತ್ ಸೋಮ್ ಅವರು ನಟ ಶಾರುಖ್ ಖಾನ್ ಅವರನ್ನು ‘ದೇಶದ್ರೋಹಿ’ ಎಂದು ಕರೆದಿದ್ದಾರೆ. </p>.ಫುಟ್ಬಾಲ್ ತಾರೆ ಲಯೊನೆಲ್ ಮೆಸ್ಸಿ ಅವರನ್ನು ಭೇಟಿ ಮಾಡಿದ ನಟ ಶಾರುಖ್ ಖಾನ್.ಶಾರುಖ್ ಖಾನ್ ಜನ್ಮದಿನ: 30ಕ್ಕೂ ಹೆಚ್ಚು ಅಭಿಮಾನಿಗಳ ಮೊಬೈಲ್ ಕಳವು, ಮೂವರ ಬಂಧನ.<p>‘ಒಂದು ಕಡೆ ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಕೊಲ್ಲಲಾಗುತ್ತಿದೆ. ಮತ್ತೊಂದೆಡೆ ಆ ದೇಶದ ಆಟಗಾರರಿಗೆ ಐಪಿಎಲ್ ಆಡಲು ಕೋಟಿ ಕೋಟಿ ಹಣ ಕೊಟ್ಟು ಖರೀದಿಸಲಾಗುತ್ತಿದೆ. ದೇಶದ್ರೋಹಿ ಶಾರುಖ್ ಖಾನ್ ಬಾಂಗ್ಲಾದೇಶದ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ನನ್ನು ₹9.20 ಕೋಟಿಗೆ ಖರೀದಿಸಿದ್ದಾರೆ. ಆ ದೇಶದ್ರೋಹಿಗೆ ಈ ದೇಶದಲ್ಲಿ ವಾಸಿಸುವ ಹಕ್ಕಿಲ್ಲ’ ಎಂದು ಮೀರತ್ನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸೋಮ್ ಕಿಡಿಕಾರಿದ್ದಾರೆ.</p><p>’ಈ ದೇಶದ ಜನರು ನಿಮಗೆ ಉನ್ನತ ಸ್ಥಾನ ತಲುಪಲು ಸಹಾಯ ಮಾಡಿದ್ದಾರೆ. ನೀವು ಗಳಿಸಿರುವ ಪ್ರತಿಯೊಂದು ರೂಪಾಯಿ ಈ ದೇಶದ್ದು. ಆದರೆ, ನೀವು ಬಾಂಗ್ಲಾದೇಶದ ಆಟಗಾರನಿಗೆ ಕೋಟ್ಯಂತರ ರೂಪಾಯಿ ನೀಡುವ ಮೂಲಕ ಈ ದೇಶಕ್ಕೆ ದ್ರೋಹ ಮಾಡಿದ್ದೀರಿ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>