ಮುಂಬೈ: ಕತಾರ್ನಲ್ಲಿ ಮರಣದಂಡನೆಗೆ ಗುರಿಯಾಗಿದ್ದ ಭಾರತೀಯ ನೌಕಾಪಡೆಯ ಅಧಿಕಾರಿಗಳ ಬಿಡುಗಡೆಯಲ್ಲಿ ಶಾರುಕ್ ಖಾನ್ ಅವರ ಪಾತ್ರವಿದೆ ಎಂಬ ಸುದ್ದಿಯನ್ನು ನಟನ ಕಚೇರಿ ತಳ್ಳಿಹಾಕಿದೆ.
ಈ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಶಾರುಕ್ ಖಾನ್ ಕಚೇರಿ, ಇಂತಹ ಆಧಾರರಹಿತ ಹೇಳಿಕೆಗಳಲ್ಲಿ ಹುರುಳಿಲ್ಲ ಎಂದಿದೆ.
‘ಅಧಿಕಾರಿಗಳ ಬಿಡುಗಡೆ ಹಿಂದೆ ಶಾರುಕ್ ಖಾನ್ ಅವರ ಪಾತ್ರವಿದೆ ಎಂದು ವರದಿಯಾಗಿದ್ದು, ಇವೆಲ್ಲ ಆಧಾರರಹಿತ ಸಮರ್ಥನೆಗಳಾಗಿವೆ. ರಾಜತಾಂತ್ರಿಕ ವಿಷಯವನ್ನು ನಮ್ಮ ನಾಯಕರು ಸಮರ್ಥವಾಗಿ ನಿರ್ವಹಿಸಿದ್ದು, ಅಧಿಕಾರಿಗಳ ಬಿಡುಗಡೆಯ ಸಂಪೂರ್ಣ ಯಶಸ್ಸು ಸರ್ಕಾರಕ್ಕೆ ಸಲ್ಲುತ್ತದೆ. ಇದರಲ್ಲಿ ಶಾರುಕ್ ಖಾನ್ ಅವರ ಪಾತ್ರವಿದೆ ಎಂಬುವುದು ಸತ್ಯಕ್ಕೆ ದೂರವಾದ ಮಾತು. ನೌಕಾಪಡೆಯ ಅಧಿಕಾರಿಗಳೆಲ್ಲರು ಮರಣದಂಡನೆ ಶಿಕ್ಷೆಯಿಂದ ಪಾರಾಗಿ ತವರು ಸೇರಿರುವುದು ಎಲ್ಲ ಭಾರತೀಯರಂತೆ ಶಾರುಕ್ ಅವರಿಗೂ ಸಂತಸ ತಂದಿದೆ’ ಎಂದು ತಿಳಿಸಿದೆ.