<p><strong>ಮುಂಬೈ: </strong>ಬಾಲಿವುಡ್ ನಟ ಶಾರುಖ್ ಖಾನ್ ಅವರು ತಮ್ಮ ನಿವಾಸ 'ಮನ್ನತ್'ನ ಗುತ್ತಿಗೆ ಪರಿವರ್ತನೆ ಸಲುವಾಗಿ ಮುಂಗಡವಾಗಿ ₹ 9 ಕೋಟಿಯನ್ನು ಹೆಚ್ಚುವರಿಯಾಗಿ ಪಾವತಿಸಿದ್ದರು. ಇದೀಗ, ಆ ಹಣವನ್ನು ಮಹಾರಾಷ್ಟ್ರ ಸರ್ಕಾರ ಮರುಪಾವತಿಸಲಿದೆ.</p><p>ಬಾಂದ್ರಾದಲ್ಲಿ ಗುತ್ತಿಗೆ ಪಡೆದಿದ್ದ ಆಸ್ತಿಯ ಪೂರ್ಣ ಮಾಲೀಕತ್ವಕ್ಕಾಗಿ ಶಾರುಖ್ ಖಾನ್ ಹಾಗೂ ಅವರ ಪತ್ನಿ ಗೌರಿ ಖಾನ್ ಅವರು 2019ರಲ್ಲಿ ಅರ್ಜಿ ಸಲ್ಲಿಸಿದ್ದರು. ಅದಕ್ಕಾಗಿ ಮುಂಗಡವಾಗಿ ಹಣ ಪಾವತಿಸಿದ್ದರು ಎಂದು ಉಪನಗರ ಕಲೆಕ್ಟರ್ ಸತೀಶ್ ಬಾಗಲ್ ಅವರು ತಿಳಿಸಿದ್ದಾರೆ.</p><p>ಲೆಕ್ಕಾಚಾರ ದೋಷದಿಂದಾಗಿ ಹೆಚ್ಚಿನ ಹಣ ಪಾವತಿಸಿರುವುದು ತಿಳಿದ ನಂತರ ಖಾನ್ ದಂಪತಿ, ಕಂದಾಯ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದರು. ಪಾವತಿ ಮಾಡಿರುವ ಹೆಚ್ಚುವರಿ ಹಣವನ್ನು ಹಿಂದಿರುಗಿಸುವಂತೆ ಕೋರಿದ್ದರು.</p><p>ಹಕ್ಕು ಪರಿವರ್ತನೆಗಾಗಿ ₹ 25 ಕೋಟಿ ಪಾವತಿಸಿದ್ದರು ಎಂದು ವರದಿಯಾಗಿದೆ. ಆದರೆ, ಅಧಿಕಾರಿಗಳು ಅದನ್ನು ಖಚಿತಪಡಿಸಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಬಾಲಿವುಡ್ ನಟ ಶಾರುಖ್ ಖಾನ್ ಅವರು ತಮ್ಮ ನಿವಾಸ 'ಮನ್ನತ್'ನ ಗುತ್ತಿಗೆ ಪರಿವರ್ತನೆ ಸಲುವಾಗಿ ಮುಂಗಡವಾಗಿ ₹ 9 ಕೋಟಿಯನ್ನು ಹೆಚ್ಚುವರಿಯಾಗಿ ಪಾವತಿಸಿದ್ದರು. ಇದೀಗ, ಆ ಹಣವನ್ನು ಮಹಾರಾಷ್ಟ್ರ ಸರ್ಕಾರ ಮರುಪಾವತಿಸಲಿದೆ.</p><p>ಬಾಂದ್ರಾದಲ್ಲಿ ಗುತ್ತಿಗೆ ಪಡೆದಿದ್ದ ಆಸ್ತಿಯ ಪೂರ್ಣ ಮಾಲೀಕತ್ವಕ್ಕಾಗಿ ಶಾರುಖ್ ಖಾನ್ ಹಾಗೂ ಅವರ ಪತ್ನಿ ಗೌರಿ ಖಾನ್ ಅವರು 2019ರಲ್ಲಿ ಅರ್ಜಿ ಸಲ್ಲಿಸಿದ್ದರು. ಅದಕ್ಕಾಗಿ ಮುಂಗಡವಾಗಿ ಹಣ ಪಾವತಿಸಿದ್ದರು ಎಂದು ಉಪನಗರ ಕಲೆಕ್ಟರ್ ಸತೀಶ್ ಬಾಗಲ್ ಅವರು ತಿಳಿಸಿದ್ದಾರೆ.</p><p>ಲೆಕ್ಕಾಚಾರ ದೋಷದಿಂದಾಗಿ ಹೆಚ್ಚಿನ ಹಣ ಪಾವತಿಸಿರುವುದು ತಿಳಿದ ನಂತರ ಖಾನ್ ದಂಪತಿ, ಕಂದಾಯ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದರು. ಪಾವತಿ ಮಾಡಿರುವ ಹೆಚ್ಚುವರಿ ಹಣವನ್ನು ಹಿಂದಿರುಗಿಸುವಂತೆ ಕೋರಿದ್ದರು.</p><p>ಹಕ್ಕು ಪರಿವರ್ತನೆಗಾಗಿ ₹ 25 ಕೋಟಿ ಪಾವತಿಸಿದ್ದರು ಎಂದು ವರದಿಯಾಗಿದೆ. ಆದರೆ, ಅಧಿಕಾರಿಗಳು ಅದನ್ನು ಖಚಿತಪಡಿಸಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>