<p>ರಂಗಾಯಣ ರಘು ಹಾಗೂ ಗೋಪಾಲಕೃಷ್ಣ ದೇಶಪಾಂಡೆ ಮುಖ್ಯಭೂಮಿಕೆಯಲ್ಲಿ ನಟಿಸಿರುವ, ಸಂದೀಪ್ ಸುಂಕದ್ ನಿರ್ದೇಶಿಸಿರುವ ‘ಶಾಖಾಹಾರಿ’ ಸಿನಿಮಾ ಫೆ.16ರಂದು ತೆರೆಕಾಣಲಿದೆ. </p>.<p>ಇತ್ತೀಚೆಗಷ್ಟೇ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮ ನಡೆಯಿತು. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಹಾಗೂ ನಿರ್ದೇಶಕ ಸೂರಿ ಅಥಿಯಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ರಂಗಾಯಣ ರಘು ಅವರಿಗೆ ‘ಶಾಖಾಹಾರಿ’ ಚಿತ್ರತಂಡವು ‘ಅಭಿನಯಾಸುರ’ ಎಂಬ ಬಿರುದು ನೀಡಿ ಗೌರವಿಸಿತು. ಸಂದೀಪ್ ಅವರ ನಿರ್ದೇಶನದ ಈ ಚೊಚ್ಚಲ ಸಿನಿಮಾದಲ್ಲಿ ಮಲೆನಾಡಿನ ಸೊಗಡಿದೆ. ಶಿವಮೊಗ್ಗದ ತೀರ್ಥಹಳ್ಳಿಯ ಒಂದು ಊರಿನಲ್ಲಿ ನಡೆಯುವ ಕಥೆ ಹೊತ್ತ ಈ ಸಿನಿಮಾ ಒಂದಿಷ್ಟು ನಿಗೂಢ ಘಟನೆಗಳ ಸುತ್ತ ಹೆಣೆಯಲಾಗಿದೆ. ರಂಗಾಯಣ ರಘು ಅಡುಗೆ ಭಟ್ಟನಾಗಿ, ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ನಟಿಸಿದ್ದಾರೆ. ಸುಜಯ್ ಶಾಸ್ತ್ರಿ ಈ ಸಿನಿಮಾದ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪ್ರತಿಮಾ ನಾಯಕ್, ಹರಿಣಿ, ವಿನಯ್ ಯು.ಜೆ., ಶ್ರೀಹರ್ಷ ಗೋಭಟ್ಟ, ನಿಧಿ ಹೆಗ್ಡೆ ತಾರಾಬಳಗದಲ್ಲಿದ್ದಾರೆ. </p>.<p>‘ಇಲ್ಲಿಯವರೆಗೆ 350 ಸಿನಿಮಾವಾಗಿದೆ. ಈ ರೀತಿ ಪಾತ್ರವನ್ನೇ ಮಾಡಬೇಕು ಎಂದು ನಾನು ಯೋಚಿಸಿಲ್ಲ. ನಮಗೆ ದೊಡ್ಮನೆಯಿಂದ ದೊಡ್ಡ ಆಶೀರ್ವಾದ ಸಿಕ್ಕಿದೆ. ಚಿತ್ರರಂಗದ ಎಲ್ಲ ನಟರ ಜೊತೆ ಸಿನಿಮಾ ಮಾಡಿದ್ದೇನೆ. ಹೊಸಬರ ಜೊತೆಯೂ ಸಿನಿಮಾ ಮಾಡುತ್ತಿದ್ದೇನೆ. ಚಿತ್ರರಂಗಕ್ಕೆ ಹೊಸಬರು ಮತ್ತಷ್ಟು ಬರಲಿ ಎನ್ನುವ ಬಯಕೆ ನನ್ನದು’ ಎಂದರು ರಘು. </p>.<p>ರಾಜೇಶ್ ಕೀಳಂಬಿ ಮತ್ತು ರಂಜಿನಿ ಪ್ರಸನ್ನ ‘ಶಾಖಾಹಾರಿ’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ವಿಶ್ವಜಿತ್ ರಾವ್ ಛಾಯಾಚಿತ್ರಗ್ರಹಣ, ಶಶಾಂಕ್ ನಾರಾಯಣ ಸಂಕಲನ, ಮಯೂರ್ ಅಂಬೆಕಲ್ಲು ಸಂಗೀತ ಈ ಸಿನಿಮಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಂಗಾಯಣ ರಘು ಹಾಗೂ ಗೋಪಾಲಕೃಷ್ಣ ದೇಶಪಾಂಡೆ ಮುಖ್ಯಭೂಮಿಕೆಯಲ್ಲಿ ನಟಿಸಿರುವ, ಸಂದೀಪ್ ಸುಂಕದ್ ನಿರ್ದೇಶಿಸಿರುವ ‘ಶಾಖಾಹಾರಿ’ ಸಿನಿಮಾ ಫೆ.16ರಂದು ತೆರೆಕಾಣಲಿದೆ. </p>.<p>ಇತ್ತೀಚೆಗಷ್ಟೇ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮ ನಡೆಯಿತು. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಹಾಗೂ ನಿರ್ದೇಶಕ ಸೂರಿ ಅಥಿಯಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ರಂಗಾಯಣ ರಘು ಅವರಿಗೆ ‘ಶಾಖಾಹಾರಿ’ ಚಿತ್ರತಂಡವು ‘ಅಭಿನಯಾಸುರ’ ಎಂಬ ಬಿರುದು ನೀಡಿ ಗೌರವಿಸಿತು. ಸಂದೀಪ್ ಅವರ ನಿರ್ದೇಶನದ ಈ ಚೊಚ್ಚಲ ಸಿನಿಮಾದಲ್ಲಿ ಮಲೆನಾಡಿನ ಸೊಗಡಿದೆ. ಶಿವಮೊಗ್ಗದ ತೀರ್ಥಹಳ್ಳಿಯ ಒಂದು ಊರಿನಲ್ಲಿ ನಡೆಯುವ ಕಥೆ ಹೊತ್ತ ಈ ಸಿನಿಮಾ ಒಂದಿಷ್ಟು ನಿಗೂಢ ಘಟನೆಗಳ ಸುತ್ತ ಹೆಣೆಯಲಾಗಿದೆ. ರಂಗಾಯಣ ರಘು ಅಡುಗೆ ಭಟ್ಟನಾಗಿ, ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ನಟಿಸಿದ್ದಾರೆ. ಸುಜಯ್ ಶಾಸ್ತ್ರಿ ಈ ಸಿನಿಮಾದ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪ್ರತಿಮಾ ನಾಯಕ್, ಹರಿಣಿ, ವಿನಯ್ ಯು.ಜೆ., ಶ್ರೀಹರ್ಷ ಗೋಭಟ್ಟ, ನಿಧಿ ಹೆಗ್ಡೆ ತಾರಾಬಳಗದಲ್ಲಿದ್ದಾರೆ. </p>.<p>‘ಇಲ್ಲಿಯವರೆಗೆ 350 ಸಿನಿಮಾವಾಗಿದೆ. ಈ ರೀತಿ ಪಾತ್ರವನ್ನೇ ಮಾಡಬೇಕು ಎಂದು ನಾನು ಯೋಚಿಸಿಲ್ಲ. ನಮಗೆ ದೊಡ್ಮನೆಯಿಂದ ದೊಡ್ಡ ಆಶೀರ್ವಾದ ಸಿಕ್ಕಿದೆ. ಚಿತ್ರರಂಗದ ಎಲ್ಲ ನಟರ ಜೊತೆ ಸಿನಿಮಾ ಮಾಡಿದ್ದೇನೆ. ಹೊಸಬರ ಜೊತೆಯೂ ಸಿನಿಮಾ ಮಾಡುತ್ತಿದ್ದೇನೆ. ಚಿತ್ರರಂಗಕ್ಕೆ ಹೊಸಬರು ಮತ್ತಷ್ಟು ಬರಲಿ ಎನ್ನುವ ಬಯಕೆ ನನ್ನದು’ ಎಂದರು ರಘು. </p>.<p>ರಾಜೇಶ್ ಕೀಳಂಬಿ ಮತ್ತು ರಂಜಿನಿ ಪ್ರಸನ್ನ ‘ಶಾಖಾಹಾರಿ’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ವಿಶ್ವಜಿತ್ ರಾವ್ ಛಾಯಾಚಿತ್ರಗ್ರಹಣ, ಶಶಾಂಕ್ ನಾರಾಯಣ ಸಂಕಲನ, ಮಯೂರ್ ಅಂಬೆಕಲ್ಲು ಸಂಗೀತ ಈ ಸಿನಿಮಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>