ಇತ್ತೀಚೆಗಷ್ಟೇ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮ ನಡೆಯಿತು. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಹಾಗೂ ನಿರ್ದೇಶಕ ಸೂರಿ ಅಥಿಯಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ರಂಗಾಯಣ ರಘು ಅವರಿಗೆ ‘ಶಾಖಾಹಾರಿ’ ಚಿತ್ರತಂಡವು ‘ಅಭಿನಯಾಸುರ’ ಎಂಬ ಬಿರುದು ನೀಡಿ ಗೌರವಿಸಿತು. ಸಂದೀಪ್ ಅವರ ನಿರ್ದೇಶನದ ಈ ಚೊಚ್ಚಲ ಸಿನಿಮಾದಲ್ಲಿ ಮಲೆನಾಡಿನ ಸೊಗಡಿದೆ. ಶಿವಮೊಗ್ಗದ ತೀರ್ಥಹಳ್ಳಿಯ ಒಂದು ಊರಿನಲ್ಲಿ ನಡೆಯುವ ಕಥೆ ಹೊತ್ತ ಈ ಸಿನಿಮಾ ಒಂದಿಷ್ಟು ನಿಗೂಢ ಘಟನೆಗಳ ಸುತ್ತ ಹೆಣೆಯಲಾಗಿದೆ. ರಂಗಾಯಣ ರಘು ಅಡುಗೆ ಭಟ್ಟನಾಗಿ, ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ನಟಿಸಿದ್ದಾರೆ. ಸುಜಯ್ ಶಾಸ್ತ್ರಿ ಈ ಸಿನಿಮಾದ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪ್ರತಿಮಾ ನಾಯಕ್, ಹರಿಣಿ, ವಿನಯ್ ಯು.ಜೆ., ಶ್ರೀಹರ್ಷ ಗೋಭಟ್ಟ, ನಿಧಿ ಹೆಗ್ಡೆ ತಾರಾಬಳಗದಲ್ಲಿದ್ದಾರೆ.